ಸಂಜಯ ಮಿಶ್ರಾ, ಕೃಷ್ಣ ಕಲ್ಬುರ್ಗಿ ಕಚೇರಿ ಮೇಲೆ ಐಟಿ ದಾಳಿ
Team Udayavani, Jan 18, 2019, 12:50 AM IST
ಹುಬ್ಬಳ್ಳಿ: ಇಲ್ಲಿನ ಬಿಗ್ ಮಿಶ್ರಾ ಸ್ವೀಟ್ ಮಾರ್ಟ್ ಮಾಲೀಕ ಸಂಜಯ ಮಿಶ್ರಾ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಕಲಬುರ್ಗಿ ಸೇರಿ ಇತರರ ನಿವಾಸ ಹಾಗೂ ಕಚೇರಿಗಳ ಮೇಲೆ ಗುರುವಾರ ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ನಿಲಿಜಿನ್ ರಸ್ತೆಯಲ್ಲಿರುವ ಧಾರವಾಡ ಮಿಶ್ರಾ ಪೇಡಾ ಮತ್ತು ಆಹಾರ ಸಂಸ್ಕರಣ ಉದ್ಯಮದ ಕಚೇರಿ, ದೇಶಪಾಂಡೆ ನಗರ, ಗೋಕುಲ ರಸ್ತೆ ಹಾಗೂ ಚನ್ನಮ್ಮ ವೃತ್ತ ಸೇರಿ ಇತರೆಡೆ ಇರುವ ಮಿಶ್ರಾ ಪೇಡಾ ಮಳಿಗೆಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಶ್ವೇಶ್ವರ ನಗರದಲ್ಲಿರುವ ಕಲುºರ್ಗಿ ಅಸೋಸಿಯೇಟ್ನ ಮಾಲೀಕ ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಕಲಬುರ್ಗಿ ಅವರ ನಿವಾಸ, ನ್ಯೂ ಕಾಟನ್ ಮಾರ್ಕೆಟ್ನಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿದ್ದು, ತಡರಾತ್ರಿವರೆಗೂ ಮನೆ, ಕಚೇರಿಗಳಲ್ಲಿ ದಾಖಲೆ ಪರಿಶೀಲಿಸಿದ್ದಾರೆ. ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು. ಗೋವಾ, ಮಹಾರಾಷ್ಟ್ರ ರಾಜ್ಯದಲ್ಲಿ ಮಿಶ್ರಾ ಪೇಡಾ ವ್ಯವಹಾರ ಇರುವುದರಿಂದ ಅಲ್ಲಿಯೂ ದಾಳಿ ನಡೆದಿದೆ ಎನ್ನಲಾಗಿದೆ.
ಪೇಡಾ ಘಟಕದ ಮೇಲೂ ದಾಳಿ
ಧಾರವಾಡ: ವಿಶ್ವ ಪ್ರಸಿದಟಛಿ ಧಾರವಾಡ ಪೇಡಾ ಉತ್ಪಾದಕ ಸಂಸ್ಥೆಯಾಗಿರುವ ಸಂಜಯ ಮಿಶ್ರಾ ಪೇಡಾ ತಯಾರಿಕಾ ಘಟಕದ ಮೇಲೂ ಗುರುವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಿಶ್ರಾ ಪೇಡಾ ವ್ಯಾಪಾರ ವಿಸ್ತರಿಸಿದ್ದ ಸಂಜಯ ಮಿಶ್ರಾ ಅವರ ಮನೆ ಸೇರಿ ಹೊರವಲಯದ ಕ್ಯಾರಕೊಪ್ಪದ ಫೇಡಾ ತಯಾರಿಕಾ ಘಟಕದ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ. ಬಾಡಿಗೆ ಕಾರಿನಲ್ಲಿ ಬೆಳಗ್ಗೆಯೇ ಕಾರ್ಖಾನೆಗೆ ತೆರಳಿದ ಐಟಿ ಅಧಿಕಾರಿಗಳು ಸಂಜೆವರೆಗೆ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಹಲವು ವರ್ಷಗಳಲ್ಲಿ ಬಿಗ್ ಮಿಶ್ರಾ ಸ್ವೀಟ್ ಮಳಿಗೆ ರಾಜ್ಯಾದ್ಯಂತ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿ ಜನಪ್ರಿಯತೆ ಗಳಿಸಿದೆ. ಅದರ ಜೊತೆಗೆ ಅನೇಕರು ಈ ವ್ಯಾಪಾರದಲ್ಲಿ ಹೂಡಿಕೆ ಮಾಡಿ ಉತ್ತಮ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಕೆಲ ತಿಂಗಳಿನಿಂದ ಇವರ ಮೇಲೆ ನಿಗಾ ವಹಿಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವ್ಯವಸ್ಥಿತವಾಗಿ ದಾಳಿ
ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ