ವಿದೇಶಿ ಹೂಡಿಕೆ ಮೇಲೆ ಐಟಿ ಕಣ್ಣು


Team Udayavani, Aug 4, 2017, 6:35 AM IST

it.jpg

ಬೆಂಗಳೂರು: ರಾಜ್ಯದ “ಪವರ್‌’ ಫ‌ುಲ್‌ ಸಚಿವ ಡಿ.ಕೆ. ಶಿವ ಕುಮಾರ್‌ ಕುಟುಂಬ ಸದಸ್ಯರು, ಆಪ್ತರ ನಿವಾಸ ಹಾಗೂ ಕಚೇರಿ ಗಳ ಮೇಲಿನ ಐಟಿ ದಾಳಿ ಗುರುವಾರವೂ ನಡೆದಿದ್ದು, ದೇಶ – ವಿದೇಶಗಳಲ್ಲಿ ಹೂಡಿಕೆ ಮಾಡಿರುವ ದಾಖಲೆ ಪತ್ರಗಳೂ ಸಿಕ್ಕಿವೆ ಎಂದು ಹೇಳಲಾಗಿದೆ. ಸಿಂಗಾಪುರ ಸಹಿತ ವಿದೇಶ ಗಳಲ್ಲಿ ಡಿಕೆಶಿ ಹೂಡಿಕೆ ಮಾಡಿದ್ದಾರೆ ಎಂದು ಐಟಿ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖೀಸಿ ಪಿಟಿಐ ಸುದ್ದಿ ಸಂಸ್ಥೆ  ತಿಳಿಸಿದೆ.

ಬುಧವಾರ ಬೆಳಗ್ಗೆ ಶುರುವಾಗಿದ್ದ ಐಟಿ ದಾಳಿ, ಗುರುವಾರವೂ ಡಿಕೆಶಿ, ಜೋತಿಷಿ ದ್ವಾರಕಾನಾಥ್‌, ಸ್ನೇಹಿತ ಸುಭಾಷ್‌ ಬಾಲಾಜಿ, ಶರ್ಮಾ ಟ್ರಾವೆಲ್ಸ್‌ನ ಸುರೇಶ್‌ ಶರ್ಮಾ, ಮಾವ ತಿಮ್ಮಯ್ಯ, ಅವರ ಆಪ್ತ ಎಡ್ವಿನ್‌ ನಿವಾಸ ಸಹಿತ 69 ಕಡೆಗಳಲ್ಲಿ ನಡೆಯಿತು. ಈ ವೇಳೆ ಯಾರನ್ನೂ ಹೊರಹೋಗದಂತೆ ಗೃಹಬಂಧನದಲ್ಲಿ ಇರಿಸಲಾಗಿತ್ತು.

ಸದಾಶಿವನಗರದ ಡಿಕೆಶಿ ಅವರ “ಕೆಂಕೇರಿ’ಯಲ್ಲಿದ್ದ ಲಾಕರ್‌ಗಳ ಬೀಗ ಮತ್ತು ರಹಸ್ಯ ನಂಬರ್‌ಗಳನ್ನು ನೀಡದೆ ಹೋದಾಗ ನಕಲಿ ಕೀ ತಯಾರಕರನ್ನು ಕರೆಸಿದ ಅಧಿಕಾರಿಗಳು ಲಾಕರ್‌ ತೆರೆ ಸಿದರು. ಇಲ್ಲಿದ್ದ  ದಾಖಲೆ ಪತ್ರ, ನಗದು, ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಜತೆಗೆ ಮೈಸೂರಿನಲ್ಲಿರುವ ಮಾವ ತಿಮ್ಮಯ್ಯ ಅವರ ನಿವಾಸದಲ್ಲೂ ಶೋಧ ಮುಂದುವರಿಸಿ ಅವರ ಪುತ್ರ ಸತ್ಯನಾರಾಯಣ ಹಾಗೂ ತಿಮ್ಮಯ್ಯ ಆಪ್ತ ಎಡ್ವಿನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.

ಈ ಮಧ್ಯೆ, ಐಟಿ ಪರಿಶೀಲನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಸದ್ಯದಲ್ಲೇ ಎಫ್ಐಆರ್‌ ದಾಖಲಿಸಿಕೊಂಡು ವಿಚಾರಣೆ ನಡೆಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ಹೇಳಿಕೆ ಬಿಡುಗಡೆ ಮಾಡಿದ ಆದಾಯ ತೆರಿಗೆ ಇಲಾಖೆ, ಬುಧವಾರ ಬೆಳಗ್ಗೆ 7.30ರಿಂದ ರಾತ್ರಿ 10.45ರವರೆಗೆ ಸತತ 20 ಗಂಟೆಗೂ ಅಧಿಕ ಕಾಲ ಶೋಧ ಕಾರ್ಯ ನಡೆಸಿದ್ದು ಇಬ್ಬರು ಸಾಕ್ಷಿಗಳ ಸಮ್ಮುಖದಲ್ಲಿ ಪಂಚನಾಮೆ ಮಾಡಲಾಗಿದೆ.  ಸದಾಶಿವನಗರದ ಮನೆಯಲ್ಲಿ ಕೆಲ ಮಹತ್ವದ 20 ಪುಟಗಳ ದಾಖಲೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದೆ. ನಗದು, ಚಿನ್ನಾಭರಣ ವಶಕ್ಕೆ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ಆದರೆ ಮೂಲಗಳ ಪ್ರಕಾರ ದಿಲ್ಲಿಯ ನಿವಾಸದಲ್ಲಿ 8.33 ಕೋಟಿ ರೂ., ಬೆಂಗಳೂರಿನ ನಿವಾಸದಲ್ಲಿ 2.50 ಕೋಟಿ ರೂ. ಹಾಗೂ ಮೈಸೂರಿನ ನಿವಾಸದಲ್ಲಿ 60 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಗುರುವಾರವೂ ಲಾಕರ್‌ಗಳಲ್ಲಿ ನಗದು ಸಿಕ್ಕಿದೆ ಎಂದು ಹೇಳಲಾಗಿದೆ. ಈ ಬಗ್ಗೆ  ಸಂಪೂರ್ಣವಾಗಿ ಪರಿಶೀಲನೆ ಬಳಿಕ ಒಟ್ಟಾರೆ ನಗದು ಹಾಗೂ ದಾಖಲೆಗಳ ಮೌಲ್ಯವನ್ನು ಬಿಡುಗಡೆ ಮಾಡುತ್ತೇವೆ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.