ಹಣ ಸಾಗಣೆ, ಹಂಚಿಕೆ ಮೇಲೆ ಐಟಿ ಕಣ್ಣು
Team Udayavani, Apr 4, 2018, 6:00 AM IST
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಣ ವರ್ಗಾವಣೆ, ಸಾಗಣೆ, ದಾಸ್ತಾನು ಬಗ್ಗೆ ಆದಾಯ ತೆರಿಗೆ
ಇಲಾಖೆ ಹದ್ದಿನ ಕಣ್ಣಿಟ್ಟಿದೆ.
ಚುನಾವಣಾ ಆಯೋಗದ ಸೂಚನೆ ಮೇರೆಗೆ ಹಣಕಾಸು ವಹಿವಾಟು ಮೇಲೆ ನಿಗಾವಹಿಸಲು ಹಣ ಹಂಚಿಕೆ ಬಗ್ಗೆ ಸಾರ್ವಜನಿಕರಿಂದ ದೂರು ಸ್ವೀಕರಿಸಲು ಹಾಗೂ ತುರ್ತು ಕಾರ್ಯಾಚರಣೆಗಾಗಿ ಕ್ವೀನ್ಸ್ ರಸ್ತೆಯಲ್ಲಿರುವ ಐಟಿ ಕಚೇರಿಯಲ್ಲಿ 24 ಗಂಟೆಗಳ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಒಂದು ವೇಳೆ ಅಭ್ಯರ್ಥಿಗಳು/ ಪಕ್ಷದ ಕಾರ್ಯಕರ್ತರು ಅಕ್ರಮವಾಗಿ ಹಣ, ಇತರೆ ಮೌಲ್ಯಯುತ ವಸ್ತುಗಳನ್ನು ನೀಡಿ ಆಮಿಷವೊಡ್ಡಿದ್ದರೆ ಕೂಡಲೇ ಈ ನಿಯಂತ್ರಣ ಕೊಠಡಿಗೆ ಸಾರ್ವಜನಿಕರು ದೂರು ನೀಡಬಹುದು.
ಸ್ಪಷ್ಟ ಹಾಗೂ ನಿಖರ ಮಾಹಿತಿ ಮೇರೆಗೆ ನಿಗದಿತ ಸ್ಥಳಕ್ಕೆ ಧಾವಿಸಿ ಅಕ್ರಮವೆಸಗಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ನಿಯಂತ್ರಣ ಕೊಠಡಿ ನಂಬರ್
080-22861126, ಮೊಬೈಲ್ ನಂ.8277413614, 8277422825 ಮತ್ತು ಟೋಲ್ ಫ್ರಿ ನಂ. 18004252115,
ಫ್ಯಾಕ್ಸ್ ನಂ. 080-22866916 ಹಾಗೂ ಈ-ಮೇಲ್ ವಿಳಾಸ [email protected].
in ಈ ಮೂಲಕ ಸಾರ್ವಜನಿಕರು ಪಾರದರ್ಶಕ ಚುನಾವಣೆಗೆ ಸಹಕರಿಸುವಂತೆ ಆದಾಯ ತೆರಿಗೆ ಇಲಾಖೆ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್