BJPಗೆ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!; ಕಾಂಗ್ರೆಸ್ ಲೇವಡಿ
ಮೂರು ಬಣ, ಮೂವತ್ತು ಬಾಗಿಲು..; ಬಿಜೆಪಿ ತಿರುಗೇಟು
Team Udayavani, May 27, 2023, 6:25 PM IST
ಬೆಂಗಳೂರು: ನೂತನ ಸರಕಾರ ರಚನೆಯ ಬಳಿಕ ಪೂರ್ಣ ಪ್ರಮಾಣದ ಸಂಪುಟ ರಚಿಸಿದ ಬಳಿಕ ಕಾಂಗ್ರೆಸ್ ಶನಿವಾರ ಬಿಜೆಪಿಗೆ ವಿಪಕ್ಷ ನಾಯಕ ಯಾರು ಎನ್ನುವ ಸವಾಲು ಮುಂದಿಟ್ಟು ಲೇವಡಿ ಮಾಡಿದೆ.
”ನಾವು ಗೆದ್ದೂ ಆಯ್ತು,ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು,ಸಚಿವ ಸಂಪುಟವೂ ರೆಡಿ ಆಯ್ತು,ಸರ್ಕಾರದ ರಚನೆಯೂ ಆಯ್ತು,ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿ ಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!ನೈತಿಕತೆ ಇರದಿದ್ದರೇನಂತೆ,ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!” ಎಂದು ಟ್ವೀಟ್ ಮಾಡಿ ಲೇವಡಿ ಮಾಡಿದೆ.
ಸಂಪುಟ ರಚನೆಯ ಬೆನ್ನಲ್ಲೇ ಅವಕಾಶ ವಂಚಿತ ಕಾಂಗ್ರೆಸ್ ನಾಯಕರ ವಿಚಾರ ಉಲ್ಲೇಖಿಸಿ ತಿರುಗೇಟು ನೀಡಿರುವ ಬಿಜೆಪಿ ”ಸಚಿವರ ಪದಗ್ರಹಣದಂದೇ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಗ್ರಹಣ! ಮನೆಯೊಂದು, ಮೂರು ಬಣ, ಮೂವತ್ತು ಬಾಗಿಲು ಎಂಬಂತಾಗಿದೆ ಕಾಂಗ್ರೆಸ್ ಪರಿಸ್ಥಿತಿ.”ಎಂದು ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್