ಭ್ರಷ್ಟರಿಗೆ ಕಷ್ಟ;ಬಡವರಿಗೆ ಮೋದಿ ಇಷ್ಟ


Team Udayavani, Feb 11, 2019, 12:30 AM IST

modi-k.jpg

ಹುಬ್ಬಳ್ಳಿ: ಭ್ರಷ್ಟರಿಗೆ ಮೋದಿ ಎಂದರೆ ಕಷ್ಟ. ನಿಷ್ಠರಿಗೆ, ಬಡಜನತೆಗೆ ಮೋದಿ ಎಂದರೆ ಇಷ್ಟ. ನಿಮ್ಮ ಪ್ರಧಾನ ಸೇವಕ-ಕಾವಲುಗಾರ ಕಳೆದ ನಾಲ್ಕೂವರೆ ವರ್ಷಗಳಲ್ಲಿ ದಲ್ಲಾಳಿಗಳಿಗೆ ಮೂಗುದಾರ ಹಾಕಿ ದೇಶದ ಬಡವರಿಗೆ ದಕ್ಕಬೇಕಾದ ಲಾಭವನ್ನು ನೇರವಾಗಿ ಅವರ ಖಾತೆಗೆ ಜಮಾ ಆಗುವಂತೆ ಮಾಡಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಬಿಜೆಪಿ ಆಯೋಜಿಸಿದ್ದ ಲೋಕಸಭಾ ಚುನಾವಣಾ ಹಿನ್ನೆಲೆ ಪ್ರಚಾರಾಂದೋಲನಕ್ಕೆ ಚಾಲನೆ ಸಮಾವೇಶದಲ್ಲಿ ಮಾತನಾಡಿದ ಅವರು, ಬೇನಾಮಿ ಆಸ್ತಿ ಗಳಿಸಿದವರು, ರೈತರು-ಬಡವರನ್ನು ಶೋಷಣೆ ಮಾಡಿದ ದಲ್ಲಾಳಿಗಳು ಇದೀಗ ಸರದಿಯಲ್ಲಿ ಕೋರ್ಟ್‌ಗಳ ಮುಂದೆ ನಿಲ್ಲುವಂತಾಗಿದೆ. ಎಷ್ಟು ತಿಂದಿದ್ದಾರೋ ಪ್ರತಿ ಪೈಸೆಯ ಲೆಕ್ಕ ಕೊಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್‌ಗೆ ರೈತರ, ಯುವಕರ, ಬಡವರ ಹಿತ ಬೇಕಾಗಿಲ್ಲ. ಬದಲಾಗಿ ಸ್ವಾರ್ಥ ಸಾಧನೆಯಾಗಬೇಕಿದೆ. ಇಷ್ಟು ವರ್ಷಗಳ ಆಡಳಿತದಲ್ಲಿ ಕಾಂಗ್ರೆಸ್‌ ಅದನ್ನೇ ಮಾಡಿಕೊಂಡು ಬಂದಿದೆ ಎಂದರು.

ಪ್ರಧಾನ ಮಂತ್ರಿ ಕಿಸಾನ್‌ ಯೋಜನೆ ಅಡಿಯಲ್ಲಿ 5 ಎಕರೆ ಒಳಗಿನ ದೇಶದ ಪ್ರತಿ ರೈತನಿಗೂ ವರ್ಷಕ್ಕೆ 6 ಸಾವಿರ ರೂ. ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಆಗುವಂತೆ ಮಾಡಲಾಗಿದೆ. ದೇಶದ ಶೇ.90 ರೈತರಿಗೆ ಇದರ ಪ್ರಯೋಜನ ದೊರೆಯಲಿದೆ. ಈ ಹಿಂದೆ ಯುಪಿಎ ಸರ್ಕಾರ ದೇಶದ ರೈತರ ಸುಮಾರು 72 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾಗಿ ಹೇಳಿಕೊಂಡಿತ್ತು. ನಮ್ಮದು ಯುಪಿಎ ರೀತಿ ಕಾಲಮಿತಿ ಯೋಜನೆಯಲ್ಲ, ಬದಲಾಗಿ ಇದು ನಿರಂತರವಾಗಿ ರೈತರ ಖಾತೆಗೆ ಹಣ ನೀಡಿಕೆ ಯೋಜನೆಯಾಗಿದೆ ಎಂದರು.

ನಗರ ಬಡವರಿಗೆ 73 ಲಕ್ಷ ಮನೆ: ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ನಗರ ಬಡವರಿಗೆ ವಸತಿ ನೀಡಲಾಗುತ್ತಿದೆ. ಹಿಂದಿನ ಯುಪಿಎ ಸರ್ಕಾರ ಹತ್ತು ವರ್ಷಗಳ ಆಡಳಿತದಲ್ಲಿ 13 ಲಕ್ಷ ಮನೆಗಳ ನಿರ್ಮಾಣಕ್ಕೆ ಮುಂದಾಗಿ ಅದರಲ್ಲಿ ಕೇವಲ 8 ಲಕ್ಷ ಮನೆಗಳನ್ನು ಮಾತ್ರ ನಿರ್ಮಿಸಿತ್ತು. ಎನ್‌ಡಿಎ ಸರ್ಕಾರ ಕೇವಲ ನಾಲ್ಕುವರೆ ವರ್ಷಗಳಲ್ಲಿ ಸುಮಾರು 73 ಲಕ್ಷ ಮನೆಗಳನ್ನು ನಿರ್ಮಿಸಲು ಯೋಜಿಸಿದೆ. ಈಗಾಗಲೇ 15 ಲಕ್ಷ ಮನೆಗಳು ಪೂರ್ಣಗೊಂಡಿದ್ದು, 39 ಲಕ್ಷ ಮನೆಗಳು ಬಹುತೇಕ ಮುಗಿಯುವ ಹಂತದಲ್ಲಿವೆ. 40-50 ವರ್ಷಗಳಲ್ಲಿ ಆಗದ ಸಾಧನೆ-ಪ್ರಗತಿಯನ್ನು ಕೇವಲ ನಾಲ್ಕುವರೆ ವರ್ಷಗಳಲ್ಲಿ ಮಾಡಿ ತೋರಿಸಲಾಗಿದೆ. ಇದು ನಮ್ಮ ಬದ್ಧತೆ ಹಾಗೂ ಜನರ ಬಗೆಗಿನ ಕಳಕಳಿಯಾಗಿದೆ ಎಂದರು.

ಅದೇ ರೀತಿ ಮಧ್ಯಮ ವರ್ಗದ ಜನರಿಗೂ ವಸತಿ ಸೌಲಭ್ಯ ನಿಟ್ಟಿನಲ್ಲಿ ಹಲವು ರಿಯಾಯ್ತಿಗಳನ್ನು ಘೋಷಿಸಲಾಗಿದೆ. ಮಧ್ಯಮ ವರ್ಗದವರು 18 ಲಕ್ಷ ರೂ.ವರೆಗೆ ಪಡೆಯುವ ಗೃಹ ಸಾಲದ ಮೇಲೆ ಬಡ್ಡಿಯಲ್ಲಿ ವಿನಾಯ್ತಿ ದೊರೆಯಲಿದೆ. ಅದೇ ರೀತಿ 20 ಲಕ್ಷ ರೂ.ನಷ್ಟು ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಸಾಲ ಪಡೆದರೆ ಅಂದಾಜು 5-6 ಲಕ್ಷ ಉಳಿತಾಯವಾಗಲಿದೆ. ಎರಡನೇ ಗೃಹ ಖರೀದಿ ತೆರಿಗೆ ಮುಕ್ತಗೊಳಿಸಲಾಗಿದೆ. ಬಾಡಿಗೆ ಆದಾಯ ಮೇಲಿನ ತೆರಿಗೆಯನ್ನು 1 ಲಕ್ಷ ರೂ.ನಿಂದ 2.40 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದರು.

ಸುಧಾಮೂರ್ತಿಯೊಂದಿಗೆ ವಿದ್ಯಾರ್ಥಿಗಳ ಸೆಲ್ಫಿ

ಹುಬ್ಬಳ್ಳಿ ನಗರದ ಗಬ್ಬೂರು ಬಳಿ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಐಐಐಟಿ ಆಡಳಿತ ಮಂಡಳಿ ಅಧ್ಯಕ್ಷೆ ಸುಧಾಮೂರ್ತಿ ಸಂಜೆ 5 ಗಂಟೆಗೆ ಬಂದು ತಮಗೆ ಮೀಸಲಾಗಿದ್ದ ಆಸನದಲ್ಲಿ ಆಸೀನರಾಗಿದ್ದರು. ಆದರೆ ಕಾರ್ಯಕ್ರಮ ಆರಂಭವಾಗಲು ಇನ್ನೂ ಸಾಕಷ್ಟು ಸಮಯವಿದ್ದು ದರಿಂದ ಅವರು ಐಐಟಿ ಹಾಗೂ ಐಐಐಟಿ ವಿದ್ಯಾರ್ಥಿಗಳೊಂದಿಗೆ ಸಮಯ ಕಳೆಯಲು ಮುಂದಾದರು. ವಿದ್ಯಾರ್ಥಿಗಳನ್ನು ಪರಿಚಯಿ ಸಿಕೊಂಡರು. ಆಗ ವಿದ್ಯಾರ್ಥಿಗಳು ಸುಧಾಮೂರ್ತಿಯವರ ಕೈ ಕುಲುಕಿದರಲ್ಲದೇ ಅವರೊಂದಿಗೆ ಸೆಲ್ಫಿ ತೆಗೆಸಿಕೊಂಡರು.

5 ವಿಕಾಸ ಮಂತ್ರದೊಂದಿಗೆ ಅಭಿವೃದ್ಧಿ ಯೋಜನೆ

ಎನ್‌ಡಿಎ ಸರ್ಕಾರ ವರ್ತಮಾನದ ಜತೆಗೆ ಭವಿಷ್ಯವನ್ನೂ ದೃಷ್ಟಿಯಲ್ಲಿಕೊಂಡು ಐದು ವಿಕಾಸ ಮಂತ್ರದೊಂದಿಗೆ ಅಭಿವೃದ್ಧಿ ಯೋಜನೆಗಳನ್ನು ರೂಪಿಸುತ್ತಿದೆ. ಅನೇಕ ಮೂಲಭೂತ ಸೌಕರ್ಯಗಳನ್ನು ಜಾರಿಗೊಳಿಸುತ್ತಿದೆ. ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಸಬಲೀಕರಣ ಭಾವನೆಯೊಂದಿಗೆ ದೇಶಕ್ಕೆ ಶಕ್ತಿ ನೀಡುವ ಯತ್ನವನ್ನು ಎನ್‌ಡಿಎ ಸರ್ಕಾರ ಮಾಡುತ್ತಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ರೈತರಿಗೆ ಸಿಂಚಾಯಿ, ಜನರ ಸಮಸ್ಯೆಗಳಿಗೆ ಸ್ಪಂದನೆ ಈ ನಿಟ್ಟಿನಲ್ಲಿಯೇ ತಮ್ಮ ಸರಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಮೊಳಗಿದ ಮೋದಿ..ಮೋದಿ.. ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಬಂದಾಗ ಘೋಷಣೆ ಕೂಗದಂತೆ ಉದ್ಘೋಷಕಿ ಹಲವು ಬಾರಿ ಮನವಿ ಮಾಡಿದರೂ ಪ್ರಧಾನಿ ವೇದಿಕೆಗೆ ಬರುತ್ತಿದ್ದಂ ತೆಯೇ ಐಐಟಿ ಹಾಗೂ ಐಐಐಟಿ ವಿದ್ಯಾರ್ಥಿಗಳು ಮೋದಿ..ಮೋದಿ…ಎಂದು ಕೂಗಿದರು. ಮೋದಿ ಅವರನ್ನು ಸಮೀಪದಿಂದ ನೋಡುವ ಅವಕಾಶ ಲಭಿಸಿದ್ದಕ್ಕೆ ಸಂಭ್ರಮ ಪಟ್ಟರು. ಮೊಬೈಲ್‌ಗ‌ಳಲ್ಲಿ ಮೋದಿಯವರ ಫೋಟೊಗಳನ್ನು ಸೆರೆ ಹಿಡಿದರು.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್‌ನಿಂದ 6, ಬಿಜೆಪಿಯಿಂದ 2 ಮಹಿಳೆಯರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.