PM modi 11 ದಿನಗಳ ಉಪವಾಸ ವ್ರತ ಕೈಗೊಂಡಿರುವ ಬಗ್ಗೆ ಸಂಶಯ: ವೀರಪ್ಪ ಮೊಯ್ಲಿ
ರಾಮಲಲ್ಲಾ ಪ್ರತಿಷ್ಠಾಪನೆ ರಾಜಕೀಯ ಘಟನೆ ಎಂದ ಮಾಜಿ ಸಿಎಂ
Team Udayavani, Jan 23, 2024, 8:12 PM IST
ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರದ ಲೋಕಾರ್ಪಣೆ ಮತ್ತು ರಾಮಲಲ್ಲಾ ಪ್ರತಿಷ್ಠಾಪನೆ ರಾಜಕೀಯ ಘಟನೆ ಯಾಗಿದ್ದು, ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು 11 ದಿನಗಳ ಉಪವಾಸ ವ್ರತ ಕೈಗೊಂಡಿರುವ ಬಗ್ಗೆ ಮಂಗಳವಾರ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಸಂಶಯ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ “ಇಂದು ಬೆಳಗಿನ ವಾಕ್ ಮಾಡುವಾಗ, ನನ್ನ ಜತೆಗಿದ್ದ ವೈದ್ಯರೊಬ್ಬರು, ‘ಆಹಾರವಿಲ್ಲದೆ 11 ದಿನಗಳವರೆಗೆ ಬದುಕಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಹೇಳಿದರು. ಯಾರಾದರೂ ಬದುಕುಳಿದಿದ್ದರೆ ಅದು ಪವಾಡ. ಹೀಗಾಗಿ ಮೋದಿ ಉಪವಾಸ ಆಚರಿಸಿರುವ ಬಗ್ಗೆ ಅನುಮಾನವಿದೆ” ಎಂದರು.
“ಮೋದಿ ದೇವಸ್ಥಾನದ ಗರ್ಭಗುಡಿಯಲ್ಲಿ ಉಪವಾಸವನ್ನು ಆಚರಿಸದೆ ಪೂಜೆ ಮಾಡಿದರೆ ಆ ಸ್ಥಳವು ಅಶುದ್ಧವಾಗುತ್ತದೆ ಮತ್ತು ಅಲೌಕಿಕ ಶಕ್ತಿ ಉತ್ಪಾದನೆಯಾಗುವುದಿಲ್ಲ. ಮೋದಿ ಅವರು 11 ದಿನಗಳ ಕಾಲ ಉಪವಾಸವನ್ನು ಆಚರಿಸಿದ್ದಾರೆ ಮತ್ತು ಕೇವಲ ಎಳನೀರಿನಿಂದ ಬದುಕುಳಿದರು ಎಂದು ಹೇಳುತ್ತಾರೆ. ಅವರ ಮುಖದಲ್ಲಿ ಆಯಾಸದ ಲಕ್ಷಣಗಳು ಕಾಣಲಿಲ್ಲ. ಅವರು ಉಪವಾಸ ಆಚರಿಸುತ್ತಾರೆಯೇ ಅಥವಾ ಇಲ್ಲವೇ ಎಂದು ಜನರ ಪ್ರಶ್ನಿಸುತ್ತಿದ್ದಾರೆ, ನಾನಲ್ಲ ಎಂದು ಮಾಜಿ ಕೇಂದ್ರ ಸಚಿವ ಮೊಯ್ಲಿ ಹೇಳಿದ್ದಾರೆ.
ಕಳೆದ 25 ವರ್ಷಗಳಲ್ಲಿ ಬಿಜೆಪಿ ರಾಮ ಮಂದಿರದ ಕುರಿತು ಹೇಳಿ ವಿವಿಧ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಈಗ ದೇವಸ್ಥಾನ ಸಿದ್ಧವಾಗಿದೆ. ಮುಂದೆ ಏನು? ಎಂದು ಪ್ರಶ್ನಿಸಿದರು.
ವ್ಯಾಪಕ ಆಕ್ರೋಶ
ಮೊಯ್ಲಿ ಅವರ ಹೇಳಿಕೆಗೆ ಬಿಜೆಪಿ ನಾಯಕರು ಸೇರಿ ಹಿಂದೂ ಪರ ಸಂಘಟನೆಗಳ ನಾಯಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!