ಸಂಸದರನ್ನು ಟೀಕಿಸುವುದು ಸರಿಯಲ್ಲ: ಸುಮಲತಾ
Team Udayavani, Oct 5, 2019, 3:03 AM IST
ಮೈಸೂರು: ಕರ್ನಾಟಕದಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಗೆ ಕೇಂದ್ರ ಸರ್ಕಾರ ಪರಿಹಾರ ಹಣ ಕೊಟ್ಟೇ ಕೊಡುತ್ತದೆ. ತಾಂತ್ರಿಕ ಕಾರಣಗಳಿಂದಾಗಿ ರಾಜ್ಯದ ವರದಿಯನ್ನು ಕೇಂದ್ರ ತಿರಸ್ಕರಿಸಬಹುದು. ಹಾಗೆಂದು ಪರಿಹಾರವನ್ನೇ ಕೊಡದೇ ಇರಲು ಸಾಧ್ಯವಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಪರಿಹಾರ ನೀಡಿಕೆ ವಿಳಂಬವಾಗಿರುವುದಕ್ಕೆ ಲೋಕಸಭಾ ಸದಸ್ಯರನ್ನು ಟೀಕೆ ಮಾಡುವುದು ಸರಿಯಲ್ಲ. ಸಾರ್ವಜನಿಕವಾಗಿ ಮಾತನಾ ಡು ತ್ತಿಲ್ಲ ಎಂಬ ಕಾರಣಕ್ಕೆ ಕರ್ನಾಟಕದ ಸಂಸದರು ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡುತ್ತಿಲ್ಲ ಎಂಬ ಭಾವನೆ ಬೇಡ. ನಾವು ಯಾರ ಬಳಿ ಮಾತನಾಡಬೇಕೋ ಅವರ ಬಳಿ ಮಾತನಾಡುತ್ತಿದ್ದೇವೆ. ಅವರು ಏನೋ ತಾಂತ್ರಿಕ ಕಾರಣ ಉಂಟಾಗಿದೆ ಎಂದು ಹೇಳುತ್ತಿದ್ದಾರೆ.
ಜೋಡೆತ್ತುಗಳು ಎಲ್ಲಿ ಎಂದು ಕೆಲವರು ಪ್ರಶ್ನೆ ಮಾಡುತ್ತಾರೆ. ಚುನಾವಣಾ ಪ್ರಚಾ ರದ ವೇಳೆ ನಮಗೆ ಬೆಂಬಲ ನೀಡಲು ಬರುತ್ತಾರೆ. ಹಾಗೆಂದು ದರ್ಶನ್ ಮತ್ತು ಯಶ್ ಮಂಡ್ಯಕ್ಕೆ ಬರಬೇಕು ಎನ್ನುವುದು ತುಂಬಾ ಚಿಕ್ಕ ವಿಷಯ. ಎಂಪಿಯಾಗಿ ಆಯ್ಕೆಯಾಗಿರುವುದು ನಾನು. ದರ್ಶನ್ ಅಥವಾ ಯಶ್ ಅಲ್ಲ. ಸರ್ಕಾರದಲ್ಲಿ ಯಾವುದೇ ಅಧಿಕಾರ ಇಲ್ಲದ ಅವರು ಬಂದು ಏನು ಮಾಡುತ್ತಾರೆ. ಎಂಪಿಯಾಗಿ ಕ್ಷೇತ್ರದ ಜನರ ಕೆಲಸವನ್ನು ನಾನು ಮಾಡಬೇಕು.
-ಸುಮಲತಾ, ಸಂಸದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ