ಮನುಷ್ಯ ಮನುಷ್ಯರ ನಡುವೆ ದ್ವೇಷ ಭಾವನೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಜಾತಿಯ ವಿಷ ಬೀಜ ಬಿತ್ತಲಾಗುತ್ತಿದೆ... ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಹೇಳಿಕೆ

Team Udayavani, Feb 7, 2024, 9:27 PM IST

1-wq-eqwewqe

ಮೈಸೂರು: ನಾವು ಮನುಷ್ಯರು, ಮನುಷ್ಯ ಮನುಷ್ಯರ ನಡುವೆ ದ್ವೇಷ ಭಾವನೆ ಸರಿಯಲ್ಲ.ಕೆಲ ಪಟ್ಟಭದ್ರ ಹಿತಾಸಕ್ತಿಗಳು ಜಾತಿಯ ವಿಷ ಬೀಜ ಬಿತ್ತಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸರ್ವಜನಾಂಗದ ಶಾಂತಿಯ ತೋಟದಂತೆ ಸಮಾಜ ಇರಬೇಕು ಎಂದು ಕುವೆಂಪು ಹೇಳಿದರು, ಅವರ ನುಡಿ ಸಾಕಾರ ಆಗಬೇಕಾದರೆ ಎಲ್ಲರೂ ಮನುಷ್ಯರಾಗಬೇಕು” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬುಧವಾರ ಸಂಜೆ ಸುತ್ತೂರು ಜಾತ್ರಾ ಮಹೋತ್ಸವದ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ, ”ಇಂದು ಇಡೀ ಸರ್ಕಾರ, ಎಲ್ಲಾ ಮಂತ್ರಿಗಳು, ಉಭಯ ಸದನಗಳ ಶಾಸಕರು, ಲೋಕಸಭೆ, ರಾಜ್ಯ ಸಭೆ ಸದಸ್ಯರು ಪ್ರತಿಭಟನೆ ಮಾಡಲು ದೆಹಲಿಗೆ ಹೋಗಿದ್ದೆವು‌. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಸಲುವಾಗಿ ದೆಹಲಿಯಿಂದ ನೇರವಾಗಿ ಇಲ್ಲಿಗೆ ಬಂದಿದ್ದೇವೆ. ಜಾತ್ರೆಗೆ ಬರುವುದಾಗಿ ಶ್ರೀಗಳಿಗೆ ಮಾತು ಕೊಟ್ಟಿದ್ದೆ.ಬೆಳಗ್ಗೆ ಉದ್ಘಾಟನೆಗೆ ಬರಲಾಗಲಿಲ್ಲ.ಮೊದಲೇ ಹೇಳಿದಂತೆ ಸಂಜೆ ಆರು ಗಂಟೆಗೆ ಸರಿಯಾಗಿ ಬಂದಿದ್ದೇನೆ. ಸುತ್ತೂರು ಜಾತ್ರೆಯಲ್ಲಿ ಪ್ರತಿವರ್ಷ ತಪ್ಪದೇ ಭಾಗಿಯಾಗುತ್ತಾ ಬಂದಿದ್ದೇನೆ‌.ಇಂದು ಕೂಡ ಆಗಮಿಸಿ ಅತ್ಯಂತ ಸಂತೋಷದಿಂದ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದೇನೆ. ಬೇರೆಡೆಯೂ ಜಾತ್ರೆಗಳು ನಡೆಯುತ್ತವೆ.ಆದರೆ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ವಿಶೇಷ ಮಹತ್ವವಿದೆ ಎಂದರು.

ಬಸವಾದಿ ಶರಣರು 12ನೇ ಶತಮಾನದಲ್ಲೇ ಸಮ ಸಮಾಜ ನಿರ್ಮಾಣದ ಪ್ರತಿಪಾದನೆ ಮಾಡಿದರು.ಎಲ್ಲರೂ ಹುಟ್ಟುವಾಗ ವಿಶ್ವಮಾನವರು, ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ.ಜ್ಞಾನ ವಿಕಾಸ ಆಗಬೇಕು, ಜ್ಞಾನ ಯಾರದೇ ಸ್ವತ್ತಲ್ಲ.ಜ್ಞಾನ ಒಬ್ಬರ ಸ್ವತ್ತಾಗಿದ್ದರೆ ಅಂಬೇಡ್ಕರ್ ಸಂವಿಧಾನ ರಚಿಸಲು ಸಾಧ್ಯ ಆಗುತ್ತಿರಲಿಲ್ಲ.ವಾಲ್ಮೀಕಿ ರಾಮಾಯಣ ಬರೆಯಲು, ವ್ಯಾಸರು ಮಹಾಭಾರತವನ್ನು ಬರೆಯಲು ಸಾಧ್ಯವಾಗುತ್ತಿರಲಿಲ್ಲ.ಸಮಾಜದಲ್ಲಿ ಇನ್ನೂ ಸಮಾನತೆ ಬಂದಿಲ್ಲ. ಮೇಲು ಕೀಳು ಭಾವನೆ ಹೋಗಿಲ್ಲ ಎಂದರು.

ಬರೀ ಓಟು ಹಾಕುವ ಸ್ವಾತಂತ್ರ್ಯ ಬಂದರೆ ಸಾಲದು. ಪ್ರತಿಯೊಬ್ಬರಿಗೂ ಆರ್ಥಿಕ ಸಾಮಾಜಿಕ ಶಕ್ತಿ ಬಂದಾಗ ಸ್ವಾತಂತ್ರ್ಯ ಬಂದಿರುವುದು ಸಾರ್ಥಕವಾಗಲಿದೆ. ಸಂಪತ್ತು ಅಧಿಕಾರ ಒಬ್ಬರ ಕೈಲಿ ಕೇಂದ್ರೀಕೃತವಾಗಬಾರದು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ಸಿಗುವಂತಾಗಬೇಕು. ಸಮಾರಂಭದ ವೇದಿಕೆಯಲ್ಲಿ ಒಕ್ಕಲಿಗರು, ಲಿಂಗಾಯತರು, ಕುರುಬನಾದ ನಾನು, ಹಿಂದುಳಿದ ವರ್ಗದವರು ಕುಳಿತಿದ್ದೇವೆ. ಇದಕ್ಕೆ ಸಂವಿಧಾನ ಕಾರಣವಾಗಿದೆ. ಸಂವಿಧಾನ ನಮ್ಮೆಲ್ಲರನ್ನು ರಕ್ಷಣೆ ಮಾಡುತ್ತಿದೆ ಎಂದರು.

ಕೆಲ ಪಟ್ಟಭದ್ರರು ಸಂವಿಧಾನವನ್ನು ಬದಲಿಸಲು ಪ್ರಯತ್ನಿಸುತ್ತಿದ್ದಾರೆ. ಬಸವಾದಿ ಶರಣರ ಆದರ್ಶಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ. ವೇದಿಕೆ ಮೇಲೆ ಇವನಾರಾವ ಇವನಾರವ ಇವ ನಮ್ಮವ ಎಂದು ಹೇಳಿ ವೇದಿಕೆಯಿಂದ ಕೆಳಗಿಳಿದ ನಂತರ ನೀನು ಯಾವ ಜಾತಿ ಎಂದು ಕೇಳುವ ಪರಿಪಾಠ ಸರಿಯಲ್ಲ ಪ್ರತಿಪಾದಿಸಿದರು.

ಚೌಕಬಾರ, ಹಾವು ಏಣಿ ಆಟವಾಡಿದ ಕಾರ್ಯಕ್ರಮವನ್ನು ಸಿಎಂ ಹಾಗೂ ಸಚಿವ ಸಂಪುಟ ಸಹೋದ್ಯೋಗಿಗಳು ಉದ್ಘಾಟನೆ ಮಾಡಿದ್ದು ವಿಶೇಷವಾಗಿತ್ತು. ವೇದಿಕೆಯ ಮೇಲೆ ಸುತ್ತೂರು ಶ್ರೀಗಳ ಜತೆ ಅತ್ಯಂತ ಆತ್ಮೀಯವಾಗಿ ಮಾತುಕತೆಯಲ್ಲಿ ಸಿಎಂ ಸಿದ್ದರಾಮಯ್ಯ ತಲ್ಲೀನರಾದುದು ಕಂಡು ಬಂತು.

ಸುತ್ತೂರು ಮಠಾಧಿಪತಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯ‌ದಲ್ಲಿ ನಡೆದ ಸಮಾರಂಭದಲ್ಲಿ ಸಚಿವರಾದ ಡಾ.ಜಿ. ಪರಮೇಶ್ವರ್, ಕೆ. ವೆಂಕಟೇಶ್, ಕೆ.ಜೆ. ಜಾರ್ಜ್, ಡಾ.ಹೆಚ್ .ಸಿ. ಮಹದೇವಪ್ಪ, ಡಾ.ಎಂ.ಸಿ. ಸುಧಾಕರ್, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.