ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು: ಸಿದ್ದರಾಮಯ್ಯ ಎಚ್ಚರಿಕೆ
Team Udayavani, Jul 29, 2022, 8:55 AM IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲಾಗದ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಇಂದು ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ. ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ ಎಂದು ಕಿಡಿಕಾರಿದರು.
ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಮುಖ್ಯಮಂತ್ರಿಗಳು ತಕ್ಷಣ ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದಿದ್ದಾರೆ.
ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಾಳೆಹೊನ್ನೂರು ಸ್ವಯಂ ಪ್ರೇರಿತ ಬಂದ್
ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿರುವ ರಾಜ್ಯ ಬಿಜೆಪಿ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಬೇಕು. ಆದರೆ ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಜನಾಕ್ರೋಶವನ್ನು ಶಾಂತಗೊಳಿಸಲು ತನಿಖೆಯ ನೆಪದಲ್ಲಿ ಆರೋಪಿಗಳ ಹೊರತಾಗಿ ಅಮಾಯಕರಿಗೂ ಕಿರುಕುಳ ನೀಡುವುದು ಸಲ್ಲದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ