ಚುನಾವಣೆ ವೇಳೆ ಸಚಿವ ಎಚ್.ಸಿ.ಮಹದೇವಪ್ಪಗೆ IT ಶಾಕ್!
Team Udayavani, Apr 24, 2018, 11:11 AM IST
ಮೈಸೂರು: ಚುನವಣಾ ರಣಾಂಗಣದಲ್ಲಿ ಕಾವೇರಿದ ವಾತಾವರಣ ನಿರ್ಮಾಣವಾಗಿದ್ದು, ಇದೇ ವೇಳೆಯಲ್ಲಿ ಸಚಿವ, ಸಿಎಂ ಸಿದ್ದರಾಮಯ್ಯ ಆಪ್ತ ಎಚ್.ಸಿ.ಮಹದೇವಪ್ಪ ಅವರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಮಂಗಳವಾರ ಬೆಳ್ಳಂಬೆಳಗ್ಗೆ ವಿಜಯನಗರದಲ್ಲಿರುವ ಮಹದೇವಪ್ಪ ಅವರ ನಿವಾಸಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ದಾಳಿ ವೇಳೆ ಮಹದೇವಪ್ಪ ಅವರು ಮನೆಯಲ್ಲೇ ಇದ್ದರು ಎಂದು ವರದಿಯಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.