ಕೀಳುಮಟ್ಟದಲ್ಲಿ ಮಾತಾಡೋದು ಸರಿಯಲ್ಲ
Team Udayavani, Oct 21, 2019, 3:06 AM IST
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದವರಿಗೆ ದೊಡ್ಡವರ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡುವುದು ರೂಢಿಯಾಗಿದೆ. ಹಾಗೆ ಮಾತನಾಡಿದರೆ ದೊಡ್ಡ ನಾಯಕನಾಗುತ್ತೇನೆ, ಪ್ರಸಿದ್ಧಿಗೆ ಬರುತ್ತೇನೆಂದು ಸಿದ್ದರಾಮಯ್ಯ ಭಾವಿಸಿದಂತಿದೆ. ಮುಂದೊಂದು ದಿನ ಅವರು ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ವೀರ ಸಾವರ್ಕರ್ ಹಾಗೂ ಸ್ವಾತಂತ್ರ ಹೋರಾಟಗಾರರು, ಸೇನಾನಿಗಳ ಬಗ್ಗೆ ಕೀಳು ಅಭಿರುಚಿಯಲ್ಲಿ ಮಾತನಾಡುವುದು ಸರಿಯಲ್ಲ. ಅದು ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಅವರ ಈ ನಾಟಕ ಬಹಳ ದಿನ ನಡೆಯುವುದಿಲ್ಲ. ಕಾಂಗ್ರೆಸ್ ನಾಯಕರೇ ಅವರ ವಿರುದ್ಧ ಮಾತ ನಾಡುತ್ತಿದ್ದಾರೆ. ಅದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು.
ಅವರ ನಾಯ ಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿಯೇ ಅಸಮಾ ಧಾನವಿದೆ. ಅದನ್ನು ಸರಿಪಡಿಸಿ ಕೊಳ್ಳಲಿ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಬಗ್ಗೆಯೂ ಏಕವಚನ ದಲ್ಲಿಯೇ ಸಿದ್ದರಾಮಯ್ಯ ಮಾತನಾಡಿ ದ್ದಾರೆ. ನಾನು ಸಿದ್ದರಾಮಯ್ಯ ಅವರಂತೆ ಮಾತನಾಡಿದರೆ ಅದು ನನ್ನ ಸಣ್ಣತನವನ್ನು ತೋರಿಸುತ್ತದೆ. ಅವರು ತಮ್ಮ ನಡವಳಿಕೆ ತಿದ್ದಿಕೊಳ್ಳಬೇಕು ಎಂದರು.
ಸಿದ್ದರಾಮಯ್ಯನವರ ಮನೆ ಮೇಲೆ ಐಟಿ ದಾಳಿ ನಡೆಸಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ದಿನೇಶ ಗುಂಡೂರಾವ್ ಹೇಳುತ್ತಿ ದ್ದಾರೆ ಎಂದರೆ ಅವರಿಗೆ ಐಟಿಯವರು ಮಾಹಿತಿ ಕೊಟ್ಟಿರುವ ಸಾಧ್ಯತೆಯಿದೆ. ಐಟಿ, ಇ.ಡಿ ತಮ್ಮದೆಯಾದ ಮಾಹಿತಿ ಆಧರಿಸಿ ದಾಳಿ ಮಾಡುತ್ತವೆ. ಆದರೆ, ಸಿದ್ದರಾಮಯ್ಯ ವಿರುದ್ಧ ದಿನೇಶ್ ಕುತಂತ್ರ ನಡೆಸಿದ್ದಾರೆ. ಅವರೇ ಐಟಿಗೆ ದೂರು ಕೊಟ್ಟು, ಮಾಹಿತಿ ನೀಡಿ ದಾಳಿ ಮಾಡಿಸಬಹುದು ಎಂದರು.
ಮಹದಾಯಿ ಇತ್ಯರ್ಥಕ್ಕೆ ಗೋವಾ ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ. ಗೋವಾದ ಬಿಜೆಪಿ ಮುಖ್ಯಮಂತ್ರಿ ಮಾತುಕತೆಗೆ ಒಪ್ಪಿದರೆ, ಕಾಂಗ್ರೆಸ್ ಧರಣಿ ಮಾಡುತ್ತಿದ್ದು, ಇದು ನಿಲ್ಲಬೇಕಿದೆ.
-ಜಗದೀಶ ಶೆಟ್ಟರ್, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್