ಬಿಜೆಪಿಯದ್ದು ಪಿಕ್ ಪಾಕೆಟ್ ಸರ್ಕಾರ: ಡಿ.ಕೆ. ಶಿವಕುಮಾರ್ ವಾಗ್ದಾಳಿ


Team Udayavani, Jun 11, 2021, 2:28 PM IST

ಬಿಜೆಪಿಯದ್ದು ಪಿಕ್ ಪಾಕೆಟ್ ಸರ್ಕಾರ: ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಜೇಬಿಗೆ ಕನ್ನ ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ‘100 ನಾಟ್ ಔಟ್’ ಆಂದೋಲನ ಆರಂಭಿಸಿದ್ದು, ‘ಬಿಜೆಪಿಯದ್ದು ಪಿಕ್ ಪಾಕೆಟ್ ಸರ್ಕಾರವಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಐದು ದಿನಗಳ ಕಾಲ ನಡೆಯಲಿರುವ ಈ ಪ್ರತಿಭಟನಾ ಆಂದೋಲನಕ್ಕೆ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ಪ್ರತಿಭಟನೆ ಮಾಡಿ ಚಾಲನೆ ನೀಡಿದರು. ‘ಬಹಳ ವಿಶೇಷ ಹಾಗೂ ಐತಿಹಾಸಿಕ ದಿನಕ್ಕೆ ನಾವೆಲ್ಲ ಸಾಕ್ಷಿಯಾಗಿದ್ದೇವೆ. ಭಾರತ ಸರ್ಕಾರ ದೇಶದ ಪ್ರತಿಯೊಬ್ಬ ಪ್ರಜೆಗೂ ಬರೆ ಎಳೆದಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ, ಕೇವಲ ಪೆಟ್ರೋಲ್, ಡೀಸೆಲ್ ಹಾಕಿಸಿಕೊಂಡು ವಾಹನ ಚಲಾಯಿಸುವವರಿಗೆ ಮಾತ್ರ ಪರಿಣಾಮ ಬೀರುತ್ತಿಲ್ಲ. ಪ್ರತಿ ನಾಗರೀಕನೂ ಖರೀದಿಸುವ ಪ್ರತಿ ವಸ್ತುಗಳು ದುಬಾರಿಯಾಗುವಂತೆ ಬರೆ ಎಳೆದಿದ್ದಾರೆ ಎಂದು ಡಿಕೆಶಿ ಹೇಳಿದರು.

ಇದನ್ನೂ ಓದಿ:ಪಾಸ್ ಪೋರ್ಟ್ ಇಲ್ಲದೆ ಅಕ್ರಮವಾಗಿ ಮಂಗಳೂರಿಗೆ ಬಂದಿದ್ದ 38 ಮಂದಿ ಪೊಲೀಸರ ವಶಕ್ಕೆ

ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ನಾವು ಹೋರಾಟ ಮಾಡಬೇಕಿದೆ. ಹಿಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಾಕಷ್ಟು ಹೋರಾಟ ಮಾಡಿದ್ದನ್ನು ನಾವು ನೋಡಿದ್ದೇವೆ. ಇದೇ ಯಡಿಯೂರಪ್ಪ, ಶೋಭ ಕರಂದ್ಲಾಜೆ ಹಾಗೂ ಸಚಿವರೆಲ್ಲರೂ ಯುಪಿಎ ಸರ್ಕಾರದ ಅವಧಿಯಲ್ಲಿ ಒಂದೆರಡು ರೂಪಾಯಿ ಹೆಚ್ಚಾದಾಗ ಗಲಾಟೆ  ಮಾಡಿದ್ದರು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಈ ವರ್ಷ ಜನವರಿಯಿಂದ ಇಲ್ಲಿಯವರೆಗೂ 42 ಕ್ಕೂ ಹೆಚ್ಚು ಬಾರಿ ಬೆಲೆ ಏರಿಕೆ ಮಾಡಿದೆ. ಏಪ್ರಿಲ್ ನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ದರ ಹೆಚ್ಚಾಗಲಿಲ್ಲ. ಅದನ್ನು ಬಿಟ್ಟರೆ ಉಳಿದ ಐದು ತಿಂಗಳೂ ಬೆಲೆ ಹೆಚ್ಚಳ ಮಾಡಿದೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಿಸಿ, 20.60 ಲಕ್ಷ ಕೋಟಿ ತೆರಿಗೆ ಸಂಗ್ರಹಿಸಿದೆ. ಸರ್ಕಾರ ತನ್ನ ಆದಾಯ ವೃದ್ಧಿ ಮಾಡಿಕೊಳ್ಳಲು, ಬೊಕ್ಕಸ ತುಂಬಿಸಿಕೊಳ್ಳಲು ಎಲ್ಲ ಪದಾರ್ಥಗಳ ಬೆಲೆ ಹೆಚ್ಚಳ ಮಾಡುತ್ತಿದೆ. ಇದು ಜನರ ನಿತ್ಯ ಬದುಕಿನಲ್ಲಿ ಸಮಸ್ಯೆ ಉಂಟು ಮಾಡುತ್ತಿದೆ. ಕೇಂದ್ರ ಸರ್ಕಾರ ಜನರ ಜೇಬಿಗೆ ಕನ್ನ ಹಾಕುತ್ತಿದ್ದು, ಇದೊಂದು ಪಿಕ್ ಪಾಕೆಟ್ ಸರ್ಕಾರ. ಇದರ ಬಗ್ಗೆ ನಾವು ಜನರಲ್ಲಿ ತಿಳುವಳಿಕೆ ಮೂಡಿಸಿ, ಹೋರಾಟ ಮಾಡಬೇಕಿದೆ ಎಂದು ಅವರು ಹೇಳಿದರು.

ನೆರೆ ರಾಷ್ಟ್ರಗಳಲ್ಲಿ ಇಂಧನ ಬೆಲೆ ನಮಗಿಂತ ಅರ್ಧದಷ್ಟಿದೆ. ನೀವು ಮಾತ್ರ ಜನರಿಂದ ಸುಲಿಗೆ ಮಾಡುತ್ತಲೇ ಇದ್ದೀರಿ. ಇದನ್ನು ನಿಲ್ಲಿಸಿ ಇಂಧನ ಬೆಲೆ ಇಳಿಸಬೇಕು ಎಂದು ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಬಿಜೆಪಿ ನಾಯಕರು ಈ ಹಿಂದೆ ಏನೇನು ಮಾತನಾಡಿದ್ದರು ಎಂಬುದೆಲ್ಲವನ್ನು ನಾವು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತೇವೆ. ಈ ಹಿಂದೆ ಅವರು ಪ್ರತಿಭಟನೆ ಮಾಡಿದ್ದ ಫೋಟೋವನ್ನು ಮುಖ್ಯಮಂತ್ರಿಗಳಿಗೆ ಉಡುಗೊರೆಯಾಗಿ ಕಳುಹಿಸಿ ಕೊಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.