ಜಮೀರ್ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಿದ್ದರು ಸಂಜಯ್ ದತ್, ಜಾಕಿ ಶ್ರಾಫ್, ಶಕ್ತಿ ಕಪೂರ್!
ಹಿಂದೆ ಹೇಳಿದ್ದ ಮೂರು ಒಗಟುಗಳು ಈಗ ಸತ್ಯವಾಗಿದೆ, ಇನ್ನಷ್ಟು ಮಾಹಿತಿ ನೀಡುತ್ತೇನೆ ಎಂದ ಪ್ರಶಾಂತ್ ಸಂಬರಗಿ
Team Udayavani, Sep 12, 2020, 10:49 AM IST
ಬೆಂಗಳೂರು: ಶಾಸಕ ಜಮೀರ್ ಅಹಮದ್ ಖಾನ್ ಅವರ 50ನೇ ಹುಟ್ಟುಹಬ್ಬಕ್ಕೆ ಬಾಲಿವುಡ್ ನಟರಾದ ಸಂಜಯ್ ದತ್, ಜಾಕಿ ಶ್ರಾಫ್, ಶಕ್ತಿ ಕಪೂರ್, ಅಫ್ತಾಬ್ ಶಿವದಾಸನಿ ಮುಂತಾದವರು ಭಾಗವಹಿಸಿದ್ದರು ಎಂದು ಪ್ರಶಾಂತ್ ಸಂಬರಗಿ ಹೇಳಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಕುರಿತಾಗಿ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಆಗಮಿಸುವ ಮೊದಲು ಮಾಧ್ಯಮಗಳಿಗೆ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಈ ಹಿಂದೆ ಹೇಳಿದ ಮೂರು ಒಗಟುಗಳು ಈ ಸತ್ಯವಾಗಿದೆ ಎಂದರು.
ನಾನು ದಾಖಲೆ ಇಟ್ಟುಕೊಂಡೇ ಮಾತನಾಡುತ್ತೇನೆ. ಜಮೀರ್ ಅಹಮದ್ ಅವರು ಸಂಜನಾ ಜೊತೆಯಲ್ಲೇ ಶ್ರೀಲಂಕಾಗೆ ಹೋಗಿದ್ದಾರೆ ಎಂದು ನಾನು ಹೇಳಿಲ್ಲ. ಆದರೆ 2019ರ ಜೂನ್ 8, 9, 10ರಂದು ಜಮೀರ್ ಅಹ್ಮದ್ ಎಲ್ಲಿದ್ದರು? ಅವರು ಶ್ರೀಲಂಕಾದಲ್ಲಿ ಇದ್ದರೋ ಇಲ್ಲವೋ ಎನ್ನುವುದನ್ನು ಹೇಳಲಿ. ನನಗೆ ಜಮೀರ್ ಉತ್ತರ ನೀಡುವ ಅಗತ್ಯವಿಲ್ಲ. ಜನತೆ ಪಾಸ್ಪೋರ್ಟ್ ತೋರಿಸಿದರೆ ಸಾಕು. ನನ್ನ ಒಂದು ಸಣ್ಣ ಪ್ರಶ್ನೆಗೆ ಉತ್ತರ ನೀಡಲಿ ಎಂದು ಸಂಬರಗಿ ಸವಾಲು ಎಸೆದರು.
ಇದನ್ನೂ ಓದಿ: ಬಾಲಿವುಡ್ ನಶೆ ಜಾಲದಲ್ಲಿ ಸಾರಾ ಆಲಿಖಾನ್, ರಾಕುಲ್ ಪ್ರೀತ್, ಮುಖೇಶ್ ಚಾಬ್ರಾ!ಬಾಯ್ಬಿಟ್ಟ ರಿಯಾ
ಕರ್ನಾಟಕದಿಂದ ಮುಂಬೈಗೆ ಸೊಸೆಯಾಗಿ ಒಬ್ಬರು ತೆರಳಿರುವ ಕುಟುಂಬದ ವ್ಯಕ್ತಿಯ ಬಗ್ಗೆ ಹೇಳಿದ್ದೆ. ಇದು ನಿಜವಾಗಿದ್ದು ಜೀವರಾಜ್ ಆಳ್ವಾ ಮಗ ಆದಿತ್ಯಾ ಆಳ್ವಾ ವಿರುದ್ಧ ಪ್ರಕರಣ ದಾಖಲಾಗಿದೆ. ಇವರ ಮನೆ ಮಗಳು ಮುಂಬೈಯಲ್ಲಿರುವ ನಟ ವಿವೇಕ್ ಒಬೆರಾಯ್ ರನ್ನು ಮದುವೆಯಾಗಿದ್ದಾರೆ. ಸುಶಾಂತ್ ಸಿಂಗ್ ಪ್ರಕರಣಕ್ಕೂ ಬೆಂಗಳೂರಿಗೂ ಸಂಬಂಧ ಇದೆ ಎಂದು ತಿಳಿಸಿದ್ದು ಅದು ಕೂಡ ನಿಜವಾಗಿದ್ದು ಎನ್ಸಿಬಿಯಿಂದ ಬಿಬಿಎಂಪಿ ಕಾಂಗ್ರೆಸ್ ಸದಸ್ಯ ಕೇಶವ್ ಮೂರ್ತಿ ಮಗನಿಗೆ ನೋಟಿಸ್ ಬಂದಿದೆ ಎಂದು ಹೇಳಿದರು.
ಇದನ್ನೂ ಓದಿ: ಮಾಜಿ ನೌಕಾಪಡೆ ಅಧಿಕಾರಿಯ ಮೇಲೆ ಹಲ್ಲೆ: ಶಿವಸೇನೆ ಕಾರ್ಯಕರ್ತರಿಬ್ಬರು ಸೇರಿ ಆರು ಮಂದಿಯ ಬಂಧನ
ಡ್ರಗ್ಸ್ ದಂಧೆಯಲ್ಲಿ ಬಾಲಿವುಡ್ಗೂ ಸ್ಯಾಂಡಲ್ವುಡ್ಗೂ ಸಂಬಂಧ ಇದೆ. ಅದರಲ್ಲಿ ಇಮ್ತಿಯಾಜ್ ಖಾತ್ರಿ ಇದ್ದಾನೆ ಅಂತ ಹೇಳಿದ್ದೆ. ಅದು ಕೂಡ ನಿಜವಾಗಿದೆ. ನಾನು ಹೇಳಿದ ಎಲ್ಲಾಒಗಟುಗಳು ನಿಜವಾಗಿದ್ದು ಇನ್ನು ಎರಡು ಒಗಟುಗಳು ಶೀಘ್ರವೇ ಸ್ಫೋಟಗೊಳ್ಳಲಿದೆ ಎಂದು ಸಂಬರಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ