ಜಾಧವ್ ಬಿಜೆಪಿಗೆ ಹೋದರೆ ಹೋಗಲಿ: ಪ್ರಿಯಾಂಕ್
Team Udayavani, Jan 21, 2019, 1:20 AM IST
ಕಲಬುರಗಿ: ಲೋಕಸಭೆ ಚುನಾವಣೆಗೆ ಬಿಜೆಪಿ ಬಳಿ ಸಮರ್ಥ ಅಭ್ಯರ್ಥಿಗಳಿಲ್ಲ. ಅದಕ್ಕಾಗಿ ಚಿಂಚೋಳಿ ಶಾಸಕ ಡಾ| ಉಮೇಶ ಜಾಧವ್ ಅವರನ್ನು ಸೆಳೆಯೋಕೆ ಮುಂದಾಗಿದ್ದಾರೆ. ಆದರೆ, ಲೋಕಸಭೆ ಚುನಾವಣೆಯನ್ನು ಅಷ್ಟು ಸಲೀಸಾಗಿ ತೆಗೆದುಕೊಳ್ಳೋ ಹಾಗಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಜಾಧವ್ ವಿಚಾರದಲ್ಲಿ ಮಾತಾಡೋಕೆ ಹೋಗುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ಆದ ಮೇಲೆ ನಿಗಮ-ಮಂಡಳಿ ಸ್ಥಾನ ನೀಡಿದ್ದರೂ ಮುನಿಸಿಕೊಂಡರು. ತದನಂತರ ಸಂಪರ್ಕಕ್ಕೆ ಸಿಗಲೇ ಇಲ್ಲ. ಆದರೆ, ಜಾಧವ್ ಕಷ್ಟಪಟ್ಟಿರುವುದನ್ನು ಮರೆತಿದ್ದಾರೆ. ಸರ್ಕಾರಿ ವೈದ್ಯರಾಗಿದ್ದ ಜಾಧವ್ ಅವರು ವಿಆರ್ಎಸ್ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಒಳ್ಳೆಯದಾದರೆ ನಮಗೆ ಹೇಳಲ್ಲ. ಕೆಟ್ಟದಾದರೆ ನಮ್ಮ ತಲೆಗೆ ಕಟ್ಟುತ್ತಾರೆ ಎಂದರು. ಚಿಂಚೋಳಿ ಕ್ಷೇತ್ರಕ್ಕೆ ಶಾಸಕರು ಹೇಳಿದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದೇವೆ. ಅವರು ಬಿಜೆಪಿಗೆ ಹೋಗುವುದಾದರೆ ಹೋಗಲಿ. ಆದರೆ, ಆರೋಪ ಮಾಡಿ ಹೋಗೋದು ಬೇಡ.ಎರಡು ಲಕ್ಷ ಮತದಾರರಿಂದ ಆಯ್ಕೆಯಾಗಿ ಬಂದಿದ್ದಾರೆ.
ನಮ್ಮಿಂದ ಬುದ್ಧಿವಾದ ಹೇಳಿಸಿಕೊಳ್ಳಬಾರದು. ಸಂಸದ ಡಾ|ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಎದುರಾಳಿಯಾಗಿ ಸ್ಪರ್ಧಿಸುವುದಾದರೆ ಸ್ಪರ್ಧಿಸಲಿ. ನಾನಂತೂ ಪಕ್ಷ ಹೇಳಿದರೆ ಸಚಿವ ಸ್ಥಾನ ಬಿಡೋಕೂ ಸಿದ್ಧ . ಜತೆಗೆ, ಶಾಸಕ ಸ್ಥಾನಕ್ಕೂ ನಿಲ್ಲಬೇಡ ಎಂದು ಹೇಳಿದ್ರೆ ನಿಲ್ಲೋದಿಲ್ಲ. ಡೆಸ್ಕ್ನಲ್ಲಿ ಕುಳಿತು ಪಕ್ಷ ಸಂಘಟನೆ ಮಾಡು ಎಂದರೆ ಮಾಡ್ತೀನಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ