ಬೆಳಗಾವಿ:ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾರು ಅಪಘಾತ
Team Udayavani, Dec 20, 2018, 2:50 PM IST
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಕಾರು ಧರ್ಮನಾಥ ವೃತ್ತದ ಬಳಿ ಮಂಗಳವಾರ ಮಧ್ಯಾಹ್ನ ಅಪಘಾತಕ್ಕೀಡಾಗಿದೆ. ಅದೃಷ್ಟವಷಾತ್ ಶೆಟ್ಟರ್ ಅವರಿಗೆ ಯಾವುದೇ ತೊಂದರೆಯಾಗಿಲ್ಲ.
ಹೊಟೇಲ್ನಿಂದ ಸುವರ್ಣ ಸೌಧಕ್ಕೆ ತೆರಳುತ್ತಿದ್ದ ವೇಳೆ ಜಗದೀಶ್ ಶೆಟ್ಟರ್ ಅವರ ಕಾರಿಗೆ ಹಿಂಬದಿಯಿಂದ ಬಂದ ಕಾರೊಂದು ಢಿಕ್ಕಿಯಾಗಿ ಅವಘಡ ಸಂಭವಿಸಿದೆ.
ಮಾಳಮಾರುತಿ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.