ಭಾಷೆಯ ಆಧಾರದಲ್ಲಿ ಪ್ರಾಧಿಕಾರ ರಚನೆ ಅಲ್ಲ: ಶೆಟ್ಟರ್
Team Udayavani, Nov 17, 2020, 9:21 PM IST
ಬೆಳಗಾವಿ: ರಾಜ್ಯದಲ್ಲಿ ವಿವಿಧ ಸಮಾಜದ ಅಭಿವೃದ್ಧಿಗಾಗಿ ಪ್ರಾಧಿಕಾರಗಳನ್ನು ರಚಿಸಲಾಗುತ್ತಿದೆ. ಯಾವುದೇ ಭಾಷೆಯ ಆಧಾರದ ಮೇಲೆ ರಚಿಸಿದ ಪ್ರಾಧಿಕಾರ ಅಲ್ಲ. ಇದು ಕನ್ನಡ-ಮರಾಠಿ ಭಾಷೆಯ ನಡುವಿನ ಸಮಸ್ಯೆ ಅಲ್ಲ ಎಂದು ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಪ್ರತಿಕ್ರಿಯಿಸಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ಒಡೆಯುವ ಕೆಲಸಕ್ಕೆ ಸರ್ಕಾರ ಮುಂದಾಗುವುದಿಲ್ಲ. ಅಭಿವೃದ್ಧಿ ಕಾರ್ಯಕ್ಕೆ ಕಾಂಗ್ರೆಸ್ ಯಾವಾಗಲೂ ವಿರೋಧ ವ್ಯಕ್ತಪಡಿಸುತ್ತದೆ.ಎಂದು ತಿರುಗೇಟು ನೀಡಿದರು.
ಪ್ರಾಧಿಕಾರಗಳನ್ನು ರಚಿಸುವ ಮೂಲಕ ಸಮಾಜ ಒಡೆಯುವ ಕೆಲಸ ಮುಖ್ಯಮಂತ್ರಿ ಯಡಿಯೂರಪ್ಪ ಮಾಡುತ್ತಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದವರು, ಏನೇನು ಮಾಡಿದ್ದಾರೆ, ಎಷ್ಟು ಪ್ರಾಧಿಕಾರ ರಚಿಸಿದ್ದಾರೆ ಬ್ರಾಹ್ಮಣ ಸಮಾಜ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ಯಾರು, ಒಂದೊಂದು ಸಮಾಜಕ್ಕೆ ಆಯಾ ಸರ್ಕಾರಗಳು ಪ್ರಾಧಿಕಾರ ರಚನೆ ಮಾಡಿವೆ. ಹೀಗಾಗಿ ಮತ್ತೊಬ್ಬರ ಬಗ್ಗೆ ಉಪದೇಶ ಮಾಡುವ ಅವಶ್ಯಕತೆಯಿಲ್ಲ ಎಂದು ಡಿಕೆಶಿಗೆ ಟಾಂಗ್ ನೀಡಿದರು.
ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವ ಬಗ್ಗೆ ಮಾತನಾಡಿದ ಶೆಟ್ಟರ್, ಇದು ಕನ್ನಡ-ಮರಾಠಿ ಭಾಷೆಯ ಸಮಸ್ಯೆ ಅಲ್ಲ. ಆ ಸಮಾಜದಲ್ಲಿ ಇರುವ ವ್ಯಕ್ತಿಗಳ ಅಭಿವೃದ್ಧಿಗೆ ಸಂಬಂಧಿಸಿದ್ದಾಗಿದೆ. ಇದರಲ್ಲಿ ಸಮಾಜ ಒಡೆಯುವುದು ಹಾಗೂ ಕನ್ನಡಿಗರು, ಮರಾಠಿಗರ ನಡುವಿನ ಸಂಘರ್ಷ ಅಲ್ಲ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ