ಡ್ರಗ್ಸ್ ಗೆ ಕಡಿವಾಣ ಹಾಕಲು ಸರ್ಕಾರಕ್ಕೆ ಚಿತ್ರರಂಗ ಸಹಕಾರ ನೀಡಲಿ: ಜಗದೀಶ್ ಶೆಟ್ಟರ್
Team Udayavani, Aug 31, 2020, 3:10 PM IST
ಕಲಬುರಗಿ: ರಾಜ್ಯದಲ್ಲಿ ಡ್ರಗ್ಸ್ ಗೆ ಕಡಿವಾಣ ಹಾಕಲು ಸರ್ಕಾರ ಬದ್ಧವಾಗಿದ್ದು, ಚಿತ್ರರಂಗ ಸೇರಿ ಎಲ್ಲರೂ ಸರ್ಕಾರಕ್ಕೆ ಸಹಕಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಸುದ್ದಿಗಾಗರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆ ವಿರುದ್ಧ ಸರ್ಕಾರ ದಿಟ್ಟವಾದ ಕ್ರಮ ಕೈಗೊಳ್ಳುತ್ತಿದೆ. ದಂಧೆಯಲ್ಲಿ ಪಾಲ್ಗೊಂಡವರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇಂದ್ರಜಿತ್ ಲಂಕೇಶ್ ಅವರಿಗೆ ರಕ್ಷಣೆ ನೀಡಲಾಗಿದೆ. ಈ ದಂಧೆ ಬಗ್ಗೆ ಯಾರೇ ಮಾಹಿತಿ ನೀಡಲು ಮುಂದೆ ಬಂದರೂ, ಅವರಿಗೆ ಸೂಕ್ತ ರಕ್ಷಣೆ ಒದಗಿಸಲು ಸರ್ಕಾರ ಸಿದ್ಧವಿದೆ ಎಂದರು.
ಕಟು ಟೀಕೆ ಬೇಡ: ಕೋವಿಡ್ ಬಿಕ್ಕಟ್ಟಿನಿಂದಾಗಿ ದೇಶ ಮತ್ತು ರಾಜ್ಯದ ಆರ್ಥಿಕ ಶಕ್ತಿಗೆ ಪೆಟ್ಟು ಬಿದ್ದಿದೆ. ಕೈಗಾರಿಕೆ ಸೇರಿದಂತೆ ಎಲ್ಲ ವಲಯಗಳು ಕುಸಿದಿವೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಸರ್ಕಾರ ಸೇರಿ ಎಲ್ಲ ಕ್ಷೇತ್ರಗಳ ಆರ್ಥಿಕ ವ್ಯವಸ್ಥೆ ಕುಸಿದು ಹೋಗಿದೆ. ಇದನ್ನು ಪುನಶ್ಚೇತನಗೊಳಿಸಲು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪನವರು ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇದರ ನಡುವೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಟೀಕಿಸಲು ಪ್ರತಿಪಕ್ಷಗಳಿಗೆ ಯಾವುದೇ ವಿಷಯವಿಲ್ಲ. ಹೀಗಾಗಿ ಸಿದ್ದರಾಮಯ್ಯರಂತಹ ನಾಯಕರು ವಿನಾಕಾರಣ ಕಟುಟೀಕೆ ಮಾಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ