Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

ಮಾಜಿ ಮುಖ್ಯಮಂತ್ರಿಗೆ ಹೊಸ ಜವಾಬ್ದಾರಿ ವಹಿಸಿದ ಕಾಂಗ್ರೆಸ್‌

Team Udayavani, Sep 29, 2023, 6:55 AM IST

Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

ಬೆಂಗಳೂರು: ಬಿಜೆಪಿ- ಜೆಡಿಎಸ್‌ ಮೈತ್ರಿಯಿಂದ ಅಸಮಾಧಾನ ಗೊಂಡಿರುವ ಬಿಜೆಪಿಯ ಮಾಜಿ ಶಾಸಕರನ್ನು ಸೆಳೆಯುವುದಕ್ಕೆ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್‌ ಮುಂದಾಗಿದೆ.

ಡಿಸಿಎಂ ಡಿ.ಕೆ. ಶಿವಕುಮಾರ್‌ ಸೂಚನೆ ಮೇರೆಗೆ ಶೆಟ್ಟರ್‌ ಆಪರೇಷನ್‌ ಹಸ್ತಕ್ಕೆ ಹೊರಟಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ಕಾರ್ಯಾಚರಣೆ ನಡೆಸುವಂತೆ ಶೆಟ್ಟರ್‌ಗೆ ಸೂಚಿಸಲಾಗಿದೆ. ಶೆಟ್ಟರ್‌ ಮೂಲಕ ಲೋಕಸಭಾ ಚುನಾವಣಾ ಸಂದರ್ಭದಲ್ಲಾದರೂ ಕೆಲವು ಶಾಸಕರು, ಲಿಂಗಾಯತ ಮುಖಂಡರನ್ನು ಸೆಳೆಯಬಹುದು ಎಂಬ ನಿರೀಕ್ಷೆ ಕಾಂಗ್ರೆಸ್‌ನದು.

ಕಮಲ-ದಳ ಮೈತ್ರಿ ಅಂತಿಮಗೊಂಡ ಅನಂತರ ಬಿಜೆಪಿಯ ಹಲವು ಮಾಜಿ ಶಾಸಕರು, ವಿಧಾನಸಭಾ ಚುನಾವಣೆ ವೇಳೆ ವಲಸೆ ಬಂದವರು ಅಸಮಾಧಾನ ಗೊಂಡಿದ್ದಾರೆ. ಅವರನ್ನು ಸೆಳೆಯುವ ಬಗ್ಗೆ ಶಿವಕುಮಾರ್‌ ಹಾಗೂ ಶೆಟ್ಟರ್‌ ಚರ್ಚೆ ನಡೆಸಿದ್ದು, ಮಾಜಿ ಶಾಸಕರಾದ ರಾಮಣ್ಣ ಲಮಾಣಿ, ಎಂ.ಪಿ. ಕುಮಾರ ಸ್ವಾಮಿ ಅವರನ್ನು ಡಿಸಿಎಂ ಡಿ.ಕೆ. ಶಿವ ಕುಮಾರ್‌ ಬಳಿಗೆ ಶೆಟ್ಟರ್‌ ಕರೆದೊಯ್ದು ಮಾತುಕತೆ ನಡೆಸಿದ್ದಾರೆ.

ಮಾಜಿ ಸಚಿವ ಶಂಕರ್‌ ಪಾಟೀಲ್‌ ಮುನೇನಕೊಪ್ಪ, ಬೈಲಹೊಂಗಲದ ಮಾಜಿ ಶಾಸಕ ಜಗದೇಶ್‌ ಮೆಟಗುಡ್ಡ, ಬೆಳಗಾವಿ ಮಾಜಿ ಶಾಸಕರಾದ ಅನಿಲ್‌ ಬೆನಕೆ, ಸಂಜಯ್‌ ಪಾಟೀಲ್‌ ಅವರ ಮನವೊಲಿಸಲು ಶೆಟ್ಟರ್‌ ಮುಂದಾಗಿದ್ದಾರೆ ಎನ್ನಲಾಗಿದೆ. ಮಾಜಿ ಶಾಸಕ ಸುಕುಮಾರ ಶೆಟ್ಟಿ ಪಕ್ಷ ತ್ಯಾಗ ಪ್ರಕರಣದ ಹಿಂದೆಯೂ ಶೆಟ್ಟರ್‌ ಪಾತ್ರವಿತ್ತು ಎಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯ ಅಂತರ ಯಾಕೆ?
ಜಗದೀಶ್‌ ಶೆಟ್ಟರ್‌ ಅವರನ್ನು ಪಕ್ಷದ ಸಂಘಟನ ವ್ಯವಸ್ಥೆ ಹಾಗೂ ಸರಕಾರದ ವಿದ್ಯಮಾನದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸಿದ್ದರಾಮಯ್ಯ ಪೂರ್ಣ ಪ್ರಮಾಣದಲ್ಲಿ ಒಪ್ಪಿಗೆ ನೀಡಿಲ್ಲ ಎಂದು ಹೇಳಲಾಗುತ್ತಿದೆ. ಶೆಟ್ಟರ್‌ ಪಕ್ಷ ಸೇರ್ಪಡೆ ತರಾತುರಿಯಲ್ಲಿ ಆದ ಕಾರಣ ಪಕ್ಷದಲ್ಲಿ ಅವರ ಪಾತ್ರ ಇನ್ನೂ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಸಿದ್ದರಾಮಯ್ಯ ಜತೆಗೆ ಕಾಂಗ್ರೆಸ್‌ನ ಹಲವು ಲಿಂಗಾಯತ ಮುಖಂಡರೂ ಶೆಟ್ಟರ್‌ ವಿಚಾರದಲ್ಲಿ ಅರೆಮನಸ್ಸು ಹೊಂದಿರುವುದರಿಂದ ಶೆಟ್ಟರ್‌ ಕಾಂಗ್ರೆಸ್‌ನಲ್ಲಿದ್ದರೂ ಸದಾ ಬಿಜೆಪಿ ನಾಯಕತ್ವದ ಬಗ್ಗೆ ಮಾತನಾಡುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ಬಿಜೆಪಿ-ಜೆಡಿಎಸ್‌ ಮೈತ್ರಿ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಡಿ.ಕೆ. ಶಿವಕುಮಾರ್‌ ಅವರು ಶೆಟ್ಟರ್‌ಗೆ ಹೊಸ ಜವಾಬ್ದಾರಿ ನೀಡಿದ್ದಾರೆ. ಶೆಟ್ಟರ್‌ ಮೂಲಕ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರನ್ನು ಸೆಳೆದು ಸಂಘಟನಾತ್ಮಕವಾಗಿ ಹೊಡೆತ ಕೊಡಬಹುದೆಂಬುದು ಶಿವಕುಮಾರ್‌ ಲೆಕ್ಕಾಚಾರ.

ಕಾಡುತ್ತಿರುವ “ಟೇಕಾಫ್’ ಟೀಕೆ
ಶೆಟ್ಟರ್‌ ಈ ಹಿಂದೆ ವಿಪಕ್ಷ ನಾಯಕರಾಗಿದ್ದ ಅವಧಿಯುದ್ದಕ್ಕೂ “ಸಿದ್ದರಾಮಯ್ಯ ಸರಕಾರ ಟೇಕಾಫ್ ಆಗಿಲ್ಲ’ ಎಂದು ಆರೋಪಿಸುತ್ತಿದ್ದರು. ಇದು ಸಿದ್ದರಾಮಯ್ಯನವರಿಗೆ ಕಿರಿಕಿರಿ ಉಂಟು ಮಾಡಿತ್ತು. ಜತೆಗೆ ಅರ್ಕಾವತಿ ರೀಡು ಪ್ರಕರಣವನ್ನು ಶೆಟ್ಟರ್‌ ಸದನದಲ್ಲಿ ಪ್ರಸ್ತಾವಿಸಿದ್ದು ಸಿದ್ದರಾಮಯ್ಯ ಅವರ ಪಾಲಿಗೆ ಮಾಸದ ಗಾಯವಾಗಿಯೇ ಉಳಿದಿದೆ. ಹೀಗಾಗಿ ಶೆಟ್ಟರ್‌ ಜತೆ ಅವರು ಪ್ರಜ್ಞಾಪೂರ್ವಕ ಅಂತರ ಕಾಯ್ದುಕೊಂಡಿದ್ದಾರೆ. ಆದರೆ ತಮ್ಮ ಜತೆಗೊಬ್ಬ ಪ್ರಬಲ ಲಿಂಗಾಯತ ನಾಯಕ ಇದ್ದಾರೆ ಎಂಬ ಸಂದೇಶ ಸಾರುವುದಕ್ಕಾಗಿ ಡಿ.ಕೆ. ಶಿವಕುಮಾರ್‌ ಅವರು ಶೆಟ್ಟರ್‌ ಅವರಿಗೆ ಆದ್ಯತೆ ಕಲ್ಪಿಸುತ್ತಿದ್ದಾರೆ ಎಂಬುದು ಕಾಂಗ್ರೆಸಿಗರ ಅಂಬೋಣ.

ಮೌನವಾದ ಸುಕುಮಾರ್‌ ಶೆಟ್ಟಿ ?
ಈ ಮಧ್ಯೆ ಬೈಂದೂರಿನ ಮಾಜಿ ಶಾಸಕ ಸುಕುಮಾರ್‌ ಶೆಟ್ಟಿಯವರು ಕಾಂಗ್ರೆಸ್‌ ವಲಸೆಗೆ ತಾತ್ಕಾಲಿಕ ವಿರಾಮ ಹಾಕಿದ್ದಾರೆ ಎನ್ನಲಾಗುತ್ತಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡದ ಬಿಜೆಪಿ ನಿಯೋಗ ಇತ್ತೀಚೆಗೆ ಸುಕುಮಾರ್‌ ಶೆಟ್ಟಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ತಟಸ್ಥವಾಗಿ ಉಳಿಯುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಬಿಜೆಪಿಯ ಉನ್ನತ ನಾಯಕರೊಬ್ಬರ ಅನಗತ್ಯ ಅನುಮಾನದಿಂದ ತಾನು ಟಿಕೆಟ್‌ ಕಳೆದುಕೊಂಡೆ ಎಂದು ನಿಯೋಗದ ಬಳಿ ಶೆಟ್ಟರು ಬೇಸರ ತೋಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್‌ ಸೇರುವ ಬಗ್ಗೆ ತರಾತುರಿಯ ನಿರ್ಧಾರ ಕೈಗೊಳ್ಳುವುದಿಲ್ಲ ಎಂದಿದ್ದಾರೆ ಎಂದು ತಿಳಿದು ಬಂದಿದೆ.

-ರಾಘವೇಂದ್ರ ಭಟ್‌

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.