ಜೆಡಿಎಸ್‌ನಿಂದ ಜ.26ರಿಂದ ರಾಜ್ಯವ್ಯಾಪಿ ಜನತಾ ಜಲಧಾರೆ ರಥಯಾತ್ರೆ


Team Udayavani, Jan 8, 2022, 7:10 AM IST

ಜೆಡಿಎಸ್‌ನಿಂದ ಜ.26ರಿಂದ ರಾಜ್ಯವ್ಯಾಪಿ ಜನತಾ ಜಲಧಾರೆ ರಥಯಾತ್ರೆನಿಂದ ಜ.26ರಿಂದ ರಾಜ್ಯವ್ಯಾಪಿ ಜನತಾ ಜಲಧಾರೆ ರಥಯಾತ್ರೆ

ಬೆಂಗಳೂರು: ಮೇಕದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್‌ ಪಕ್ಷ ಪಾದಯಾತ್ರೆ ಹೊರಡಲು ಮುಂದಾದ ಬೆನ್ನಲ್ಲೇ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳ ವಿಚಾರ ಮುಂದಿಟ್ಟುಕೊಂಡು ಜೆಡಿಎಸ್‌ ರಾಜ್ಯವ್ಯಾಪಿ ಜನತಾ ಜಲಧಾರೆ ಹೆಸರಲ್ಲಿ “ರಥಯಾತ್ರೆ’ ಕೈಗೊಳ್ಳಲು ನಿರ್ಧರಿಸಿದೆ.

ರಾಜ್ಯದ ಎಲ್ಲಾ ಭಾಗಗಳಿಗೂ ನೀರು ಒದಗಿಸುವ, ಲಭ್ಯ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಹಾಗೂ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್‌ ಪಕ್ಷದಿಂದ ರಾಜ್ಯವ್ಯಾಪಿ ಇದೇ ಜನವರಿ 26ರಿಂದ ‘ ಜನತಾ ಜಲಧಾರೆ ‘ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜನತಾ ಜಲಧಾರೆಗೆ ಹೊರಡಲಿರುವ ಗಂಗಾ ರಥವನ್ನು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಶುಕ್ರವಾರ ಅನಾವರಣಗೊಳಿಸಿದರು. ಇದೇ ವೇಳೆ ಜನತಾ ಜಲಧಾರೆಯ ಲಾಂಛನ ಸಹ ಬಿಡುಗಡೆಗೊಳಿಸಲಾಯಿತು.

ಬಳಿಕ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಕರ್ನಾಟಕ ಅತಿವೃಷ್ಟಿ- ಅನಾವೃಷ್ಟಿಗೆ ತುತ್ತಾಗುವ ರಾಜ್ಯ. ಮಳೆ ನೀರನ್ನು ಪೋಲಾಗದಂತೆ ಬಳಕೆ ಮಾಡಿಕೊಳ್ಳುವುದು ಹಾಗೂ ಸದಾ ಬರದಿಂದ ತತ್ತರಿಸುವ ಬಯಲುಸೀಮೆಯನ್ನು ಜಲ ಶ್ಯಾಮಲಗೊಳಿಸುವ ಕನಸು ನಮ್ಮದು. ಜೊತೆಗೆ ಸಸ್ಯಶ್ಯಾಮಲದ ಕನಸಿನೊಂದಿಗೆ ಕೃಷಿಗೆ ಸಮೃದ್ಧ ನೀರು ಹಾಗೂ ಜಲ ಶ್ಯಾಮಲಕ್ಕಾಗಿ ಕುಡಿಯಲು ಸಮೃದ್ಧ ನೀರು ಒದಗಿಸುವುದು ನಮ್ಮ ಗುರಿ. ಆ ನಿಟ್ಟಿನಲ್ಲಿ ಜಾತ್ಯತೀತ ಜನತಾದಳ ಏನು ಮಾಡುತ್ತದೆ? ಯಾವ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ? ಎಂಬುದನ್ನು ಜಲಧಾರೆ ಯಾತ್ರೆಯ ಮೂಲಕ ಜನರಿಗೆ ಹೇಳುತ್ತೇವೆ ಎಂದರು.

ಗಂಗೆಯನ್ನು ಪರಮ ಪವಿತ್ರವೆಂದು ಭಾವಿಸುವ ಪರಂಪರೆ ನಮ್ಮದು. ಈ ನಂಬಿಕೆಗೆ ಚ್ಯುತಿ ಬಾರದಂತೆ ಶ್ರದ್ಧಾ ಭಕ್ತಿಯಿಂದ ರಾಜ್ಯದ 15 ನದಿಗಳ ಪವಿತ್ರ ಜಲವನ್ನು ಕಲಶಗಳಲ್ಲಿ ಸಂಗ್ರಹ ಮಾಡಿ, ಆ ನೀರನ್ನು ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನಕ್ಕೆ ಬರಮಾಡಿಕೊಂಡು ಗಂಗಾಪೂಜೆ ನೆರೆವೇರಿಸಲಾಗುವುದು. ಜನವರಿ 23ರಂದು ರಾಮನಗರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇಗುಲದಿಂದ ರಾಜ್ಯದ 15 ದಿಕ್ಕುಗಳಿಗೆ ಹೊರಡುವ ಗಂಗಾ ರಥಗಳಿಗೆ (15 ವಾಹನಗಳು) ಚಾಲನೆ ನೀಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ:ಅಣ್ಣಾ ಎನ್ನುವುದು ಬೇಡ ಅಂದರೆ ಸಾಹೇಬರೇ ಎನ್ನುತ್ತೇನೆ: ಕುಮಾರಸ್ವಾಮಿಗೆ ಡಿಕೆಶಿ

ಕೋವಿಡ್‌ ಮುನ್ನೆಚ್ಚರಿಕೆ ವಹಿಸುತ್ತೇವೆ:
ನಮಗೆ ಧಾವಂತವಿಲ್ಲ. ವೈರಸ್‌ ನಿಯಂತ್ರಣಕ್ಕೆ ಸರ್ಕಾರ ಜಾರಿ ಮಾಡುವ ಎÇÉಾ ನಿಯಮಗಳಿಗೆ ಬದ್ಧರಾಗಿ ಜಲಧಾರೆ ಕಾರ್ಯಕ್ರಮ ನಡೆಸುತ್ತೇವೆ. ಕಾಂಗ್ರೆಸ್‌ ನಾಯಕರಂತೆ ಅನುಮತಿ ಕೊಡದಿದ್ದರೆ ಪ್ರಾಣ ಬಿಡುತ್ತೇವೆ ಎಂದು ನಾವು ಬೆದರಿಕೆ ಹಾಕುವುದಿಲ್ಲ ಎಂದು ಎಚ್‌.ಡಿ. ಕುಮಾರಸ್ವಾಮಿ ಇದೇ ವೇಳೆ ತಿಳಿಸಿದರು.

ಜ.26ರಿಂದ ಜಲಧಾರೆ ಆರಂಭ:
ಜನವರಿ 26ರಂದು ಇಷ್ಟೂ ವಾಹನಗಳಲ್ಲಿ ಅಳವಡಿಸಲಾಗಿರುವ ಕಲಶಗಳ ಮೂಲಕ ಪೂರ್ವ ನಿಗದಿ ಮಾಡಲಾಗಿರುವ ಸ್ಥಳಗಳಲ್ಲಿ ಬೆಳಗ್ಗೆ 9 ಗಂಟೆಗೆ ಕಾವೇರಿ, ಕಬಿನಿ, ಮೇಕೆದಾಟು, ಹೇಮಾವತಿ, ನೇತ್ರಾವತಿ, ಕುಮಾರಧಾರ, ತುಂಗಭದ್ರಾ, ಶರಾವತಿ, ಅಘನಾಶಿನಿ, ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಭೀಮಾ, ಅರ್ಕಾವತಿ, ಉತ್ತರ ಪಿನಾಕಿನಿ, ಚಿತ್ರಾವತಿ ಸೇರಿ 15 ಸ್ಥಳಗಳಲ್ಲಿ ಮೊದಲ ದಿನ ಜಲ ಸಂಗ್ರಹ ಮಾಡಲಾಗುವುದು. ಇಡೀ ಜಲಧಾರೆ ಕಾರ್ಯಕ್ರಮದಲ್ಲಿ ಒಟ್ಟು 51 ಸ್ಥಳಗಳಲ್ಲಿ ಪವಿತ್ರ ನದಿಗಳ ಜಲ ಸಂಗ್ರಹ ಮಾಡಲಾಗುವುದು. ರಾಜ್ಯದ 180 ವಿಧಾನಸಭೆ ಕ್ಷೇತ್ರಗಳು, 140 ತಾಲ್ಲೂಕು ಕೇಂದ್ರಗಳಲ್ಲಿ ಈ ಕಲಶಗಳು ಹಾದು ಹೋಗಲಿದ್ದು, ಎÇÉೆಡೆ ಜಲ ತುಂಬಿದ ಕಲಶಗಳ ಮೆರೆವಣಿಗೆ, ಕಲಾ ತಂಡಗಳ ಮೆರಗು, ಮಂಗಳವಾದ್ಯಗಳ ಮೇಳ, ಕಲಶಗಳೊಂದಿಗೆ ಮಹಿಳೆಯರ ನಡಿಗೆ ನಡೆಯಲಿದೆ. ದಿನಂಪ್ರತಿ 15 ಕಡೆ ಇಂಥ ಕಾರ್ಯಕ್ರಮಗಳು ನಡೆಯಲಿವೆ. ಎಲ್ಲಾ ಗಂಗಾ ರಥ ವಾಹನಗಳು 15-20ದಿನಗಳಲ್ಲಿ ಬೆಂಗಳೂರು ತಲುಪಲಿದ್ದು, ಅರಮನೆ ಮೈದಾನದಲ್ಲಿ ಬೃಹತ್‌ ಕಾರ್ಯಕ್ರಮ ನಡೆಸಲಾಗುವುದು ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.

ವರ್ಷವಿಡೀ ಗಂಗಾ ಪೂಜೆ:
ಜನತಾ ಜಲಧಾರೆಯ ಸಮಾರೋಪ ಕಾರ್ಯಕ್ರಮ ಮುಗಿದ ನಂತರ ಪೂಜಿಸಲ್ಪಟ್ಟಿದ್ದ ಪವಿತ್ರ ಜಲವುಳ್ಳ ಕಲಶವನ್ನು ಬೆಂಗಳೂರಿನ ವಿವಿಧೆಡೆಗಳಿಂದ ಮೆರವಣಿಗೆ ಮೂಲಕ ಪಕ್ಷದ ರಾಜ್ಯ ಕಚೇರಿ ಜೆಪಿ ಭವನಕ್ಕೆ ವಿದ್ಯುಕ್ತವಾಗಿ ಬರ ಮಾಡಿಕೊಂಡು ಆ ಕಲಶ ಪ್ರತಿಷ್ಠಾಪನೆ ಮಾಡಲಾಗುವುದು. ಅಂದಿನಿಂದ ವರ್ಷವಿಡಿ ಗಂಗಾ ಪೂಜೆ, ಗಂಗಾ ಆರತಿ ನಿರಂತರವಾಗಿ ನಡೆಯಲಿದೆ. ಆ ನಿತ್ಯ ಪೂಜೆಯಲ್ಲಿ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳಾ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದರು.

 

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.