ಜನಾರ್ದನ ರೆಡ್ಡಿ ನೆರವು ಪಡೆಯಲು ಶಾ ಸೂಚಿಸಿದ್ದಾರೆ : ಬಿಎಸ್ವೈ
Team Udayavani, May 2, 2018, 12:04 PM IST
ಶಿವಮೊಗ್ಗ: ಬಳ್ಳಾರಿ ಮತ್ತಿತರ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಜನಾರ್ದನ ರೆಡ್ಡಿ ಅವರ ಸಹಕಾರ ಅಗತ್ಯವಾಗಿದ್ದು, ಅವರ ನೆರವು ಪಡೆಯಲು ಅಮಿತ್ ಶಾ ಅವರು ಹೇಳಿರುವುದಾಗಿ ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಿಎಂ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು ‘ನಮ್ಮ ಪ್ರಣಾಳಿಕೆ ಬಿಡುಗಡೆ ಆದ ಬಳಿಕ ಜನ ವಿಜಯೋತ್ಸವ ಆಚರಿಸುತ್ತಾರೆ. ರೈತ ಪರ ಪ್ರಣಾಳಿಗೆ ಬಿಡುಗಡೆ ಮಾಡುತ್ತಿದ್ದು , ಆ ಬಳಿಕ ಬಳಿಕ ಬಿಜೆಪಿ ಮತಗಳು 3 % ಹೆಚ್ಚಾಗುತ್ತದೆ . ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ರೈತರ ಸಾಲ ಮನ್ನಾ ಮಾಡುತ್ತೇವೆ. ನೀರಾವರಿಗೆ 1 ಲಕ್ಷ ಕೋಟಿ ರೂ ಹಣ ಬಿಡುಗಡೆ ಮಾಡುತ್ತೇವೆ. ಇದು ನಾನು ಸಿಎಂ ಆಗಿ ಮೊದಲು ತೆಗೆದುಕೊಳ್ಳುವ ನಿರ್ಣಯ’ ಎಂದರು.
‘ ಸ್ಪಷ್ಟ ಬಹುಮತದೊಂದಿಗೆ ಗೆದ್ದು ನಾನು ಮುಖ್ಯಮಂತ್ರಿಯಾಗುವುದು ಖಚಿತ. ಶಿಕಾರಿಪುರದಲ್ಲಿ 50 ಸಾವಿರ ಮತಗಳಿಂದ ಗೆಲ್ಲುವುದು ಖಚಿತ’ ಎಂದರು.
ಮೋದಿ ಅವರು ಎಚ್ಡಿಡಿ ಅವರಿಗೆ ಹೊಗಳಿದ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ವೈ ‘ಅದು ಮಾಜಿ ಪ್ರಧಾನಿಗೆ ಮೋದಿ ಅವರು ನೀಡಿರುವ ಗೌರವವಷ್ಟೆ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ