ಮತದಾನಕ್ಕೆ ಬಳ್ಳಾರಿಗೆ ತೆರಳಬೇಕೆಂಬ ಜನಾರ್ದನ ರೆಡ್ಡಿ ಆಸೆ ಭಗ್ನ!
Team Udayavani, May 4, 2018, 2:52 PM IST
ಹೊಸದಿಲ್ಲಿ: ಮೇ 12 ರಂದು ಮತ ಚಲಾಯಿಸಲು ಬಳ್ಳಾರಿಗೆ ತೆರಳಲು ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಳ್ಳಿಹಾಕಿದೆ. ಇದರಿಂದಾಗಿ ತವರಿಗೆ ಕಾಲಿಡುವ ಗಣಿಧಣಿಯ ಆಸೆಗೆ ತಣ್ಣೀರೆರಚಿದಂತಾಗಿದೆ.
10 ದಿನಗಳ ಕಾಲ ಬಳ್ಳಾರಿಯಲ್ಲಿ ಉಳಿದುಕೊಳ್ಳಲು ಅವಕಾಶ ನೀಡಬೇಕು ಎಂದು ರೆಡ್ಡಿ ಮನವಿ ಮಾಡಿದ್ದರು. ಮನವಿ ತಿರಸ್ಕರಿಸಿದ ಕೋರ್ಟ್, ಮತದಾನ ಮಾಡಲು ಬದಲಿ ವ್ಯವಸ್ಥೆಗಳಿವೆ ಆ ಮೂಲಕ ಮತದಾನ ಮಾಡಿ,ನೀವು ಭೇಟಿ ನೀಡಿದರೆ ರಾಜಕೀಯದ ಮೇಲೆ ಪರಿಣಾಮ ಬಿರುತ್ತದೆ ಎಂದು ಅವಕಾಶ ನಿರಾಕರಿಸಿದೆ.
ನ್ಯಾಯಮೂರ್ತಿ ಎ.ಕೆ.ಸಿಕ್ರಿ ಮತ್ತು ಅಶೋಕ್ ಭೂಷಣ್ ಅವರ ದ್ವಿಸದಸ್ಯ ಪೀಠ ಈ ತೀರ್ಪು ನೀಡಿದೆ.
ಬಳ್ಳಾರಿ,ಆಂಧ್ರದ ಅನಂತಪುರಂ ಮತ್ತು ಕರ್ನೂಲಿಗೆ ಭೇಟಿ ನೀಡಬಾರದು ಎಂದು ಬಂಧನಕ್ಕೊಳಗಾಗಿದ್ದ ರೆಡ್ಡಿಗೆ 2015 ರಲ್ಲಿ ಷರತ್ತು ವಿಧಿಸಿ ಜಾಮೀನು ನೀಡಿತ್ತು, ಆದರೆ ಮಗಳು ಬ್ರಹ್ಮಿಣಿಯ ಮದುವೆಯ ವೇಳೆ ಬಳ್ಳಾರಿ ಪ್ರವೇಶಕ್ಕೆ ಅವಕಾಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು