ಜನಾರ್ದನ ರೆಡ್ಡಿಗೆ ಮತ್ತೆ ಪುತ್ರಿ ಮದುವೆ ಸಂಕಷ್ಟ!


Team Udayavani, Nov 8, 2017, 7:17 AM IST

08-1.jpg

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಮತ್ತೂಂದು ಸಂಕಷ್ಟ ಎದುರಾಗಿದೆ. ತಮ್ಮ ಪುತ್ರಿಯ ಅದ್ಧೂರಿ ವಿವಾಹ ಮಾಡಿದ ವೆಚ್ಚದ ಕುರಿತು ತನಿಖೆ ನಡೆಸದ ಸಿಬಿಐ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ವಿಚಕ್ಷಣಾ ಆಯೋಗ (ಸಿವಿಸಿ)ದ ಸೆಕ್ಷನ್‌ ಆಫಿಸರ್‌ ಅರವಿಂದಕುಮಾರ್‌ ಅವರು ಸಿಬಿಐ ಜಂಟಿ ನಿರ್ದೇಶಕ ಎ.ಕೆ.ಶರ್ಮಾ ಅವರಿಗೆ ಪತ್ರ ಬರೆದಿದ್ದಾರೆ.

2016ರ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರ ನೋಟು ಅಮಾನ್ಯ ಮಾಡಿದ ಸಂದರ್ಭದಲ್ಲೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನಾರ್ದನ ರೆಡ್ಡಿ ತಮ್ಮ ಪುತ್ರಿ ಬ್ರಹ್ಮಿಣಿಯ ವಿವಾಹವನ್ನು ಅದ್ದೂರಿಯಾಗಿ ಮಾಡಿ ದ್ದರು. ವಿವಾಹಕ್ಕೆ ಮಾಡಿದ ಖರ್ಚು ವೆಚ್ಚದ ಬಗ್ಗೆ ಸೂಕ್ತ ತನಿಖೆಯಾಗಿಲ್ಲ ಎಂದು ಆರೋಪಿಸಿ 2017, ಅ.25ರಂದು ಸಿಇಸಿ ಅಧಿಕಾರಿ ಅರವಿಂದ ಶರ್ಮಾ ಅವರು ಸಿಬಿಐ ಜಂಟಿ ನಿರ್ದೇಶಕರಿಗೆ ಪತ್ರ ಬರೆದಿದ್ದು, ಪತ್ರದ ಪ್ರತಿ “ಉದಯವಾಣಿ’ಗೆ ಲಭ್ಯವಾಗಿದೆ. ಪತ್ರದಲ್ಲಿ ಬಳ್ಳಾರಿಯ ಟಪಾಲ್‌ ಗಣೇಶ್‌ ಅವರು 2017, ಮೇ 16ರಂದು ಸಲ್ಲಿಸಿದ ದೂರಿನ ಅನ್ವಯ ಈ ಪತ್ರ ಬರೆಯಲಾಗಿದೆ ಎಂದು ಉಲ್ಲೇಖೀಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾದ ರೆಡ್ಡಿ ಪುತ್ರಿಯ ಅದ್ಧೂರಿ ವಿವಾಹದ ಕುರಿತು ಸಿಬಿಐ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿಲ್ಲ. ಅಂತಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಟಪಾಲ್‌ ಗಣೇಶ್‌ 2017, ಮೇ 16ರಂದು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಅಕ್ರಮ ಗಣಿಗಾರಿಕೆಯ ಕುರಿತು ತನಿಖೆನಡೆಸುತ್ತಿರುವ ಸಿಬಿಐ ಅಧಿ ಕಾರಿಗಳು ಓಬಳಾಪುರಂ ಗಣಿ ಕಂಪನಿ ಅಸ್ತಿತ್ವದಲ್ಲಿಯೇ ಇಲ್ಲ ಎಂಬರ್ಥದಲ್ಲಿ ಸಲ್ಲಿಸಿದ ತನಿಖಾ ವರದಿ ಕಣ್ಣೆದುರಿಗೆ ಇದ್ದಾಗ ಇಂತಹ ಅಸ್ತಿತ್ವದಲ್ಲೇ ಇಲ್ಲದ ಕಂಪನಿಯ ಅಂಗ ಸಂಸ್ಥೆಗಳು, ಅವುಗಳ ಆದಾಯ ಮೂಲ ಎಲ್ಲಿಂದ ಬಂದವು ಎನ್ನುವುದನ್ನು ಸಿಬಿಐ ತನಿಖೆ ನಡೆಸಿಲ್ಲ. ಈ ಆದಾಯ ಮೂಲದ ತನಿಖೆ ಆಗಬೇಕು ಎಂದು ಟಪಾಲ್‌ ಗಣೇಶ್‌ ಕೋರಿದ್ದರು.

ಈ ಪತ್ರವನ್ನು ಪಿಎಂಒನ (ಪ್ರಧಾನಿ ಕಚೇರಿ) ಕೇಂದ್ರ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌.ಪಿ.ಆರ್‌. ತ್ರಿಪಾಠಿಯವರು ಕೇಂದ್ರ ವಿಚಕ್ಷಣಾ ಆಯೋಗದ ಕಾರ್ಯದರ್ಶಿಗೆ ರವಾನಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. 

ಕೋರ್ಟ್‌ ಮೊರೆಹೋದ ರೆಡ್ಡಿ
ಬೆಂಗಳೂರು: ಅಕ್ರಮ ಗಣಿಗಾರಿಕೆ ಸಂಬಂಧ 10ಕ್ಕೂ ಹೆಚ್ಚು ಪ್ರಕರಣಗಳ ತನಿಖೆ ಎದುರಿಸುತ್ತಿರುವ ಮಾಜಿ ಸಚಿವ ಜನಾರ್ದನರೆಡ್ಡಿ, ನಿರೀಕ್ಷಣಾ ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಖಾಸಗಿ ಕಾರಣಗಳಿಂದಾಗಿ ಒಮ್ಮೆ ಮಾತ್ರ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ವಿನಾಯಿತಿ ನೀಡುವಂತೆ ಜನಾರ್ದನ ರೆಡ್ಡಿ ಕೋರಿದ್ದಾರೆ. ಕೋರ್ಟ್‌ ನವೆಂಬರ್‌ 14ಕ್ಕೆ ವಿಚಾರಣೆ ಮುಂದೂಡಿದೆ ಎಂದು ಎಸ್‌ಐಟಿ ಅಧಿಕಾರಿಯೊಬ್ಬರು ತಿಳಿಸಿದರು.

ಸಾವಿರಾರು ಕೋಟಿ ರೂ.ಅಕ್ರಮ ಗಣಿಗಾರಿಕೆ, ಅಕ್ರಮ ಅದಿರು ರವಾನೆ ಹಗರಣ ದಂತಹ ಬಹುಮುಖ್ಯ ಪ್ರಕರಣಗಳ ಕುರಿತು ಸೂಕ್ತ ಸಾಕ್ಷ್ಯಾಧಾರ ಇಲ್ಲ ಎಂದು ಸಿಬಿಐ ಅಕಾರಿಗಳು ತನಿಖೆ ನಿಲ್ಲಿಸುವಂತೆ ತಮ್ಮ ಮೇಲಾಧಿಕಾರಿಗಳಿಗೆ ಪತ್ರ ಬರೆದಿರುವು ದರ ಹಿನ್ನೆಲೆಯಲ್ಲಿ ಇಂಥ ಮಹತ್ವದ ಆದೇಶವನ್ನು ಸಿಇಸಿ, ಸಿಬಿಐಗೆ ನೀಡಿರುವುದು ನೆಮ್ಮದಿ ತಂದಿದೆ. ಜನಾರ್ದನ ರೆಡ್ಡಿ ಪುತ್ರಿಯ ವಿವಾಹಕ್ಕೂ ಅಕ್ರಮ ಗಣಿಗಾರಿಕೆಗೂ ನೇರ ಸಂಬಂಧ ಇದೆ ಎನ್ನುವುದು ಪ್ರಕರಣದ ತನಿಖೆಯಿಂದ ಬಹಿರಂಗವಾಗಲಿದೆ.
 ● ಟಪಾಲ್‌ ಗಣೇಶ್‌, ಗಣಿ ಉದ್ಯಮಿ

●ಎಂ.ಮುರಳಿಕೃಷ್ಣ

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.