ಹಾಲಿನ ದರ ಏರಿಕೆ ಹೊಣೆ ಜಾರಕಿಹೊಳಿ ಹೆಗಲಿಗೆ
Team Udayavani, Jan 18, 2020, 3:00 AM IST
ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಕರ್ನಾಟಕ ಹಾಲು ಮಹಾ ಮಂಡಳದ (ಕೆಎಂಎಫ್) 14 ಒಕ್ಕೂಟಗಳ ಅಧ್ಯಕ್ಷರು ಒತ್ತಾಯಿಸಿದ್ದು, ದರ ಹೆಚ್ಚಳ ಜವಾಬ್ದಾರಿಯನ್ನು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ವಹಿಸಿದ್ದಾರೆ. ದರ ಹೆಚ್ಚಳ ಕುರಿತು ಶುಕ್ರವಾರ ನಡೆದ ಕೆಎಂಎಫ್ ಆಡಳಿತ ಮಂಡಳಿತ ಮಂಡಳಿ ಸಭೆಯಲ್ಲಿ ಒಕ್ಕೂಟ ಅಧ್ಯಕ್ಷರು ಒಮ್ಮತದಿಂದಲೇ ಲೀಟರ್ಗೆ 2 ರಿಂದ 3 ರೂ ಹೆಚ್ಚಳಕ್ಕೆ ಒತ್ತಾಯಿಸಿದ್ದಾರೆ.
ಜತೆಗೆ ಮುಖ್ಯಮಂತ್ರಿಗಳೊಡನೆ ಚರ್ಚೆ ಮಾಡಿ ದರ ಹೆಚ್ಚಳ ಮಾಡಿಸುವ ಹೊಣೆಯನ್ನು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ನೀಡಿದ್ದಾರೆ. ಹೀಗಾಗಿ, ಅಧ್ಯಕ್ಷರು ಶನಿವಾರ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ದರ ಹೆಚ್ಚಳ, ಎಷ್ಟು ರೂ. ಹೆಚ್ಚಳ ಕುರಿತು ಚರ್ಚಿಸಲಿದ್ದಾರೆ. ಈ ಚರ್ಚೆ ಬಳಿಕವೇ ಹಾಲಿನ ದರ ಹೆಚ್ಚಳ ಅಂತಿಮವಾಗಲಿದೆ. ಒಂದು ವೇಳೆ ಸಿಎಂ ಅನುಮತಿ ನೀಡದಿ ದ್ದರೆ ದರ ಹೆಚ್ಚಳ ಅಸಾಧ್ಯ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ