ಸಿಡಿ ಪ್ರಕರಣ: ಯುವತಿ ತಂದೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Team Udayavani, Jun 22, 2021, 12:25 PM IST
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದಲ್ಲಿ ಸಂತ್ರಸ್ತ ಯುವತಿ ತಂದೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸಿ.ಆರ್.ಪಿ.ಸಿ 164 ರಡಿ ದಾಖಲಿಸಿದ ಯುವತಿಯ ಹೇಳಿಕೆ ನಿಯಮ ಬಾಹಿರವಾಗಿದ್ದು, ಅದನ್ನು ರದ್ದುಗೊಳಿಸಬೇಕು ಎಂದು ಯುವತಿ ತಂದೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ:ದನ ಕಟ್ಟಿ ಹಾಕುವ ವಿಚಾರ: ಮಗನನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ
ಯುವತಿ ಈಗಾಗಲೇ ಕೋರ್ಟ್ ಮುಂದೆ ಹೇಳಿಕೆ ನೀಡಿದ್ದಾಳೆ. ಹೇಬಿಯಸ್ ಕಾರ್ಪಸ್ ಅರ್ಜಿಯಲ್ಲೂ ಯುವತಿ ಹೇಳಿಕೆ ದಾಖಲಿಸಿದ್ದಾಳೆ. ಹಾಗಾಗಿ, ಯುವತಿ ತಂದೆ ಸಿ.ಆರ್.ಪಿ.ಸಿ 164 ಹೇಳಿಕೆ ಪ್ರಶ್ನಿಸುವಂತಿಲ್ಲ ಎಂದು ಯುವತಿ ಪರ ವಕೀಲರು ವಾದ ಮಂಡಿಸಿದ್ದರು.
ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠವು ಯವತಿಯ ತಂದೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು.