ಭ್ರಷ್ಟ ಜಯಚಂದ್ರ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್ ಗೆ ಅನುಮತಿ
Team Udayavani, Feb 8, 2017, 3:58 PM IST
ಬೆಂಗಳೂರು:ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೊಳಗಾಗಿ ಅಮಾನತುಗೊಂಡಿರುವ ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯಾಗಿದ್ದ ಎಸ್.ಸಿ.ಜಯಚಂದ್ರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಕೊನೆಗೂ ಅನುಮತಿ ನೀಡಿದೆ.
ಇತ್ತೀಚೆಗಷ್ಟೇ ಜಯಚಂದ್ರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾಗ ಅಪಾರ ಪ್ರಮಾಣದ ನಗದು ಮತ್ತು ಅಕ್ರಮ ಆಸ್ತಿ ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ಜಯಚಂದ್ರ ಜೈಲುಕಂಬಿ ಎಣಿಸುವಂತಾಗಿತ್ತು.
ಈಗ 2008ರಲ್ಲಿ ಮುಖ್ಯ ಇಂಜಿನಿಯರ್ ಆಗಿದ್ದ ಜಯಚಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮ ಆಸ್ತಿಯನ್ನು ಪತ್ತೆ ಹಚ್ಚಿದ್ದರು. ಆಗ ಲೋಕಾಯುಕ್ತ ಅಧಿಕಾರಿಗಳು ಜಯಚಂದ್ರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ 2011ರಲ್ಲಿ ಮನವಿ ಮಾಡಿದ್ದರು. ಆದರೆ ರಾಜ್ಯ ಸರ್ಕಾರ ಅನುಮತಿ ನೀಡಿರಲಿಲ್ಲವಾಗಿತ್ತು.
ಐಟಿ ದಾಳಿಗೊಳಗಾಗಿ ಅಮಾನತುಗೊಂಡಿರುವ ಜಯಚಂದ್ರ ವಿರುದ್ಧ ಈಗ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಲೋಕಾಯುಕ್ತ ಅಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.