Congress ಸೇರಿದ ಜಯಪ್ರಕಾಶ್‌ ಹೆಗ್ಡೆ, ಸುಕುಮಾರ ಶೆಟ್ಟಿ, ಎಂ.ಪಿ.ಕುಮಾರಸ್ವಾಮಿ


Team Udayavani, Mar 12, 2024, 10:49 PM IST

Congress ಸೇರಿದ ಜಯಪ್ರಕಾಶ್‌ ಹೆಗ್ಡೆ, ಸುಕುಮಾರ ಶೆಟ್ಟಿ, ಎಂ.ಪಿ.ಕುಮಾರಸ್ವಾಮಿ

ಬೆಂಗಳೂರು: ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಮೈತ್ರಿ ಪಕ್ಷಗಳಾದ ಬಿಜೆಪಿಯ ಕೆಲವು ನಾಯಕರು ಮತ್ತು ಅವರ ನೂರಾರು ಬೆಂಬಲಿಗರು ಕಾಂಗ್ರೆಸ್‌ ಸೇರಿದರು.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಹಾಗೂ ಶಾಶ್ವತ ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ, ಬಿಜೆಪಿಯ ಬೈಂದೂರಿನ ಮಾಜಿ ಶಾಸಕ ಸುಕುಮಾರ್‌ ಶೆಟ್ಟಿ, ಜೆಡಿಎಸ್‌ನ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ಪಕ್ಷದ ಧ್ವಜ ನೀಡಿ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು.

ಜಯಪ್ರಕಾಶ್‌ ಹೆಗ್ಡೆ ಸೇರ್ಪಡೆಯೊಂದಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಬಹುತೇಕ ಅಂತಿಮಗೊಂಡಂತಾಗಿದ್ದು, ಅಧಿಕೃತ ಘೋಷಣೆ ಬಾಕಿ ಉಳಿದಂತಾಗಿದೆ. ಜಾತಿ ಜನಗಣತಿ ವರದಿ ಸಲ್ಲಿಕೆಯಾದ ಬೆನ್ನಲ್ಲೇ ಹೆಗ್ಡೆ ಅವರ ಕಾಂಗ್ರೆಸ್‌ ಸೇರ್ಪಡೆ ಕುರಿತು ಗಂಭೀರ ಚರ್ಚೆಗಳು ನಡೆದಿದ್ದವು. ಈಚೆಗೆ ಪಕ್ಷದ ರಾಜ್ಯ ಉಸ್ತುವಾರಿ ಸುಜೇìವಾಲಾ ಬೆಂಗಳೂರಿಗೆ ಆಗಮಿಸಿದಾಗಲೂ ಖುದ್ದು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಮೂವರೂ ನಾಯಕರು ಕಾಂಗ್ರೆಸ್‌ಗೆ ಬಂದರು ಅಂತ ಪಕ್ಷದಲ್ಲಿದ್ದವರು ಆತಂಕಪಡುವುದು ಬೇಡ. ಎಲ್ಲರಿಗೂ ಅವಕಾಶ ಸಿಗಲಿದೆ. ಟಿಕೆಟ್‌ ಯಾರಿಗೆ ಕೊಟ್ಟರೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಈಗಾಗಲೇ ಸ್ಕ್ರೀನಿಂಗ್‌ ಕಮಿಟಿ ಸಭೆ ಆಗಿದೆ. ಮೇ 14 ಅಥವಾ 15ರಂದು ನಮ್ಮನ್ನು ದಿಲ್ಲಿಗೆ ಕರೆಯಬಹುದು. ಅನಂತರ ಟಿಕೆಟ್‌ ಘೋಷಣೆ ಆಗಲಿದೆ ಎಂದರು.

ಸಚಿವರಾದ ಡಾ| ಜಿ.ಪರಮೇಶ್ವರ, ಕೆ.ಜೆ. ಜಾರ್ಜ್‌, ಲಕ್ಷ್ಮೀ ಹೆಬ್ಬಾಳ್ಕರ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್‌, ಬಿ.ಎನ್‌. ಚಂದ್ರಪ್ಪ, ನಾಯಕ ಬಿ.ಎಲ್‌. ಶಂಕರ್‌, ಚಿಕ್ಕಮಗಳೂರು ಶಾಸಕ ತಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.

ಕಹಿ ನೆನಪುಗಳನ್ನು ಬಿಟ್ಟು ಸಿಹಿ ನೆನಪುಗಳ ಜತೆಗೆ ಹೋಗಬೇಕು ಎಂದು ಬಂದಿದ್ದೇನೆ. ಯಾರಿಗೆ ಟಿಕೆಟ್‌ ಕೊಡುತ್ತೀರೋ ಅವರನ್ನು ನಾವು ಗೆಲ್ಲಿಸಿಕೊಂಡು ಬರುತ್ತೇವೆ. ಸರಕಾರದ ಗ್ಯಾರಂಟಿ ಯೋಜನೆ ಮನೆ ಮನೆಗೆ ಹೋಗಿ ತಲುಪಿಸುವ ಕೆಲಸ ಆಗಬೇಕು. ಹಿಂದಿನ ನಮ್ಮ ಕೆಲಸ ಕಾರ್ಯಗಳನ್ನು ಯುವಜನರಿಗೆ ಹೇಳಿದರೆ ಖಂಡಿತ ಮತ್ತೆ ನಾವು ಕರಾವಳಿ ಭಾಗದಲ್ಲಿ ಅಧಿಕಾರ ಹಿಡಿಯಬಹುದು.
-ಜಯಪ್ರಕಾಶ್‌ ಹೆಗ್ಡೆ

ಬೈಂದೂರಿನಲ್ಲಿ ಮನೆ ಮನೆಗೆ ಹೋಗಿ ಬಿ.ವೈ. ರಾಘವೇಂದ್ರ ಅವರಿಗೆ 25 ಸಾವಿರ ಲೀಡ್‌ ಕೊಡುವಂತೆ ಮಾಡಿದೆ. ಶಿವಮೊಗ್ಗದಲ್ಲಿ ಬಿಜೆಪಿ ಗೆಲ್ಲಬೇಕಾದರೆ, ಬೈಂದೂರಿನಲ್ಲಿ ಆ ಪಕ್ಷಕ್ಕೆ ಮತ ಬೀಳಬೇಕು. ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಮ್ಮದು ಪ್ರಾಮಾಣಿಕ ಗರ್ಭಗುಡಿ, ಅವರದ್ದು (ಬಿಜೆಪಿ) ಡೂಪ್ಲಿಕೇಟ್‌ ಗರ್ಭಗುಡಿ.
-ಸುಕುಮಾರ ಶೆಟ್ಟಿ

ಕಾಂಗ್ರೆಸ್‌ಗೆ ಹೋಗಬೇಡಿ, ಸರಕಾರ ಬೀಳುತ್ತದೆ ಎಂದು ಕೆಲವರು ಹೇಳಿದರು. ಆದರೆ ಯಾಕೆ ಬೀಳುತ್ತದೆ ಅಂತ ನಾನು ಇಲ್ಲಿಗೆ ಬಂದಿದ್ದೇನೆ. ಸಂವಿಧಾನ ಉಳಿಸಬೇಕು. ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿಗೆ ಬುದ್ಧಿ ಕಲಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲೂ ಅದು ಪುನರಾವರ್ತನೆ ಆಗಲಿದೆ.
-ಎಂ.ಪಿ. ಕುಮಾರಸ್ವಾಮಿ

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.