JDS-BJP Alliance; ರಾಜ್ಯಸಭಾ ಅಖಾಡಕ್ಕೆ ಕುಪೇಂದ್ರ ರೆಡ್ಡಿ?
Team Udayavani, Feb 13, 2024, 1:02 AM IST
ಬೆಂಗಳೂರು: ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ರಾಜ್ಯಸಭಾ ಚುನಾವಣೆ ಅಖಾಡಕ್ಕೆ ಇಳಿಯುವುದಕ್ಕೆ ಜೆಡಿಎಸ್ನ ಕುಪೇಂದ್ರ ರೆಡ್ಡಿ ಉತ್ಸಾಹ ತೋರಿದ್ದು, ಇನ್ನೆರಡು ದಿನಗಳಲ್ಲಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಒಂದೊಮ್ಮೆ ರೆಡ್ಡಿ ಕಣಕ್ಕೆ ಇಳಿದರೆ ಚುನಾವಣೆ ಕಣ ರಂಗೇರಲಿದೆ.
ಲೆಕ್ಕಾಚಾರದ ಪ್ರಕಾರ ಬಿಜೆಪಿ ಒಂದು ಸ್ಥಾನವನ್ನು ಪಡೆಯುವುದು ನಿಶ್ಚಿತವಾಗಿದ್ದು, ಅಭ್ಯರ್ಥಿ ಹೆಸರನ್ನು ವರಿಷ್ಠರೇ ಪ್ರಕಟಿಸಿದ್ದಾರೆ. ಒಂದು ಸ್ಥಾನಕ್ಕೆ 46 ಮತ ನಿಗದಿಗೊಳಿಸಿದರೆ ಬಿಜೆಪಿಯಲ್ಲಿ ಮೊದಲ ಪ್ರಾಶಸ್ತ್ಯದ 20 ಮತಗಳು ಉಳಿಯುತ್ತವೆ. ಜೆಡಿಎಸ್ನ 19 ಮತಗಳ ಜತೆಗೆ ಜನಾರ್ದನ ರೆಡ್ಡಿ ಕೈ ಜೋಡಿಸಿದರೆ 40 ಮತ ಗಳಿಸಬಹುದು. ಆದರೆ ಕೊರತೆ ಮತಗಳನ್ನು ಹೇಗೆ ತುಂಬಿಕೊಳ್ಳುತ್ತಾರೆಂಬ ಪ್ರಶ್ನೆ ಉದ್ಭವವಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ನಿಂದ ಯಾರೊಬ್ಬ ಸದಸ್ಯರೂ ಅಡ್ಡಮತದಾನ ಮಾಡುವ ಸ್ಥಿತಿಯಲ್ಲಿಲ್ಲ. ಆದರೆ ನಾನು ಎಲ್ಲವನ್ನೂ ನಿಭಾಯಿಸುತ್ತೇನೆ ಎಂದು ಕುಪೇಂದ್ರ ರೆಡ್ಡಿ ಅವರು ಎಚ್.ಡಿ.ಕುಮಾರಸ್ವಾಮಿ ಅವರಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕಾರಣಕ್ಕಾಗಿಯೇ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ