ಉಪ ಚುನಾವಣೆಯ 15 ಕ್ಷೇತ್ರಗಳಲ್ಲೂ ಜೆಡಿಎಸ್‌ ಸ್ಪರ್ಧೆ


Team Udayavani, Oct 17, 2019, 3:06 AM IST

Devegowda

ಬೆಂಗಳೂರು: ಅನರ್ಹಗೊಂಡಿರುವ ಶಾಸಕರ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಏನು ತೀರ್ಪು ಬರುತ್ತೋ ಗೊತ್ತಿಲ್ಲ. ಸ್ಪೀಕರ್‌ ತೀರ್ಮಾನ ಎತ್ತಿ ಹಿಡಿದರೆ ಉಪ ಚುನಾವಣೆ ನಡೆಯುತ್ತದೆ. ಇಲ್ಲದಿದ್ದರೆ ಇಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಉಪ ಚುನಾವಣೆ ನಡೆದರೆ ಹದಿನೈದು ಕ್ಷೇತ್ರಗಳಲ್ಲಿ ಜೆಡಿಎಸ್‌ನಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಅದರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು.

ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣರಾದ, ಮೂವರು ಅನರ್ಹ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ನ ಅನರ್ಹಗೊಂಡ ಶಾಸಕರನ್ನು ಕರೆದುಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಅವರ ಹೈಕಮಾಂಡ್‌ ಏನು ಹೇಳುತ್ತೋ ಗೊತ್ತಿಲ್ಲ ಎಂದರು. ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಜವರಾಯಿಗೌಡರೇ, ಅದರಲ್ಲಿ ಅನುಮಾನವೇ ಬೇಡ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಅವರು ಬೇರೆ ಪಕ್ಷಕ್ಕೆ ಹೋಗುತ್ತಾರೆ ಎಂದು ವದಂತಿ ಹರಡುತ್ತಿದ್ದಾರೆ ಎಂದು ದೂರಿದರು.

ಮುಂದಿನ ಹತ್ತು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ಬರಲಿದ್ದು, ಅಲ್ಲಿಯೂ ಎಲ್ಲ ಕಡೆ ಅಭ್ಯರ್ಥಿಗಳನ್ನು ಹಾಕುತ್ತೇವೆ. ಬೆಂಗಳೂರು ನಗರದಲ್ಲಿ ಪಕ್ಷವನ್ನು ಶಕ್ತಿಯುತವಾಗಿ ಸಂಘಟನೆ ಮಾಡುತ್ತೇವೆ. ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಅ.18 ರಂದು ಸಭೆ ನಡೆಸುತ್ತೇವೆ. ಬಸವರಾಜ ಹೊರಟ್ಟಿ ಅವರನ್ನೇ ಕರೆದು ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದರು.

ಯಡಿಯೂರಪ್ಪ ಅವರು ಮಹಾರಾಷ್ಟ್ರ ಚುನಾವಣೆಗೆ ಪ್ರಚಾರಕ್ಕೆ ಹೋಗಿರುವ ಕುರಿತು ಪ್ರತಿಕ್ರಿಯಿಸಿ, ಅವರಿಗೆ ಪಕ್ಷ ಮುಖ್ಯ. ಅವರ ಪಕ್ಷದ ಹೈಕಮಾಂಡ್‌ ಆದೇಶ ದಿಂದ ಅವರು ಪ್ರಚಾರಕ್ಕೆ ಹೋಗಿದ್ದಾರೆ. ಇಲ್ಲಿ ಸಚಿವರಿಗೆ ಜವಾಬ್ದಾರಿ ಕೊಟ್ಟು ಹೋಗಿರಬಹುದು ಎಂದು ಹೇಳಿದರು. ನನ್ನ ವಿರುದ್ಧ ಐಟಿ ದಾಳಿ ಆದರೆ ದೇವೇಗೌಡರೇ ಕಾರಣ ಎಂಬ ಕೆ.ಎನ್‌.ರಾಜಣ್ಣ ಆರೋಪ ಕುರಿತು ಸಿಡಿಮಿಡಿಗೊಂಡ ಅವರು, ಒಬ್ಬ ಮಾಜಿ ಪ್ರಧಾನಿಯಾಗಿ ಅವರ ವಿರುದ್ಧ ಅರ್ಜಿ ಬರೆದು ಕೊಂಡು ಕುಳಿತುಕೊಳ್ಳಲಾ? ಎಂದರು.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.