ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಹನುಮಂತನ ಬಾಲದಂತೆ ಬೆಳೆಯುತ್ತಿದೆ: ಪಟ್ಟಿ ಕೊಟ್ಟ ಜೆಡಿಎಸ್
Team Udayavani, Nov 14, 2021, 1:10 PM IST
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ಪಕ್ಷಗಳ ಆರೋಪ- ಪ್ರತ್ಯಾರೋಪಗಳು ಆರಂಭವಾಗಿದೆ. ಕುಟುಂಬ ರಾಜಕೀಯದ ಟೀಕೆ ಮಾಡಿದ ಬಿಜೆಪಿ ವಿರುದ್ಧ ಜೆಡಿಎಸ್ ಅದೇ ವಿಚಾರವಾಗಿ ಟೀಕೆ ಮಾಡಿದ್ದು, ಬಿಜೆಪಿಯಲ್ಲಿನ ಕುಟುಂಬ ರಾಜಕಾರಣದ ಪಟ್ಟಿಯನ್ನು ಟ್ವೀಟ್ ಮಾಡಿದೆ.
ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ. ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ ಸರಿ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ ಎಂದು ಬಿಜೆಪಿ ಟೀಕಿಸಿದೆ.
1 ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.
2 ಶೆಟ್ಟರ್ ಕುಟುಂಬ: ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ
3 ಅಣ್ಣಾ ಸಾಹೇಬ್ ಕುಟುಂಬ: ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.
4 ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.
5. ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ -ಶಾಸಕರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.
6 ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ?
7 ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.
ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ? ಯಾವ ಪಕ್ಷದಲ್ಲಿ? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ ಎಂದು ಜೆಡಿಎಸ್ ಟ್ವೀಟ್ ಮೂಲಕ ಟೀಕೆ ಮಾಡಿದೆ.
ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ. (1/8)
— Janata Dal Secular (@JanataDal_S) November 14, 2021
ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ. ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ