ರಾಷ್ಟ್ರೀಯ ಪಕ್ಷಗಳ ಪ್ರಭಾವದ ನಡುವೆಯೂ ಜೆಡಿಎಸ್ ಗಮನಾರ್ಹ ಸಾಧನೆ: ಎಚ್.ಡಿ ಕುಮಾರಸ್ವಾಮಿ
Team Udayavani, Dec 31, 2020, 12:35 PM IST
ಬೆಂಗಳೂರು: ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಗ್ರಾ.ಪಂ ಚುನಾವಣಾ ಪಲಿತಾಂಶದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಸೋತರೂ, ಹೋರಾಟ ನಡೆಸಿದ ಅಭ್ಯರ್ಥಿಗಳಿಗೂ ನನ್ನ ಬೆಂಬಲ ಸದಾ ಇರಲಿದೆ ಎಂದಿದ್ದಾರೆ.
ಇದನ್ನೂ ಓದಿ:ಹೊಸ ವರ್ಷಾಚರೆಣೆಗೆ ಬ್ರೇಕ್: ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿ
ಗ್ರಾ. ಪಂ ಚುನಾವಣೆಯಲ್ಲಿ ಈ ಮಟ್ಟದ ಸಾಧನೆ ಮಾಡಲು ನೆರವಾದವರು ಪಕ್ಷದ ತಳಮಟ್ಟದ ಕಾರ್ಯಕರ್ತರು. ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯಿಂದ ಹೋರಾಟ ಮಾಡಿದ್ದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ. ನಮ್ಮ ಪಕ್ಷ ತಳ ಮಟ್ಟದಲ್ಲಿಯೂ ಸ್ಥಿರ ಮತ್ತು ದೃಢವಾಗಿದೆ ಎಂದು ತೋರಿಸಿದ ಕಾರ್ಯಕರ್ತ ಸೋದರರಿಗೆ ನಾನು ಸದಾ ಋಣಿ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಳ್ಳಲಿ. ಸ್ವಾವಲಂಬಿ ಗ್ರಾಮೀಣ ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡಲಿ ಎಂದು ನಾನು ಆಶಿಸುತ್ತೇನೆ. ಜೆಡಿಎಸ್ ಬೆಂಬಲಿತ ಮತ್ತು ಇತರ ಸದಸ್ಯರು ತಮ್ಮ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಬೇಕು ಎಂದು ನಾನು ಹೇಳಲು ಇಚ್ಛಿಸುತ್ತೇನೆ ಎಂದು ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ