Rajya Sabha Elections; ಇಂದು ಜೆಡಿಎಸ್ ಶಾಸಕರ ಸಭೆ
Team Udayavani, Feb 25, 2024, 11:26 PM IST
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದ್ದು, 5ನೇ ಅಭ್ಯರ್ಥಿ ಹಾಕಿರುವ ಜೆಡಿಎಸ್ ತನ್ನದೇ ಕಾರ್ಯತಂತ್ರದಲ್ಲಿ ತೊಡಗಿದೆ.
ಈ ನಿಟ್ಟಿನಲ್ಲಿ ಸೋಮವಾರ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಶಾಸಕರ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯಸಭೆ ಚುನಾವಣೆ ಮತ್ತು ಮತದಾನದಕ್ಕೆ ಬಗ್ಗೆ ಚರ್ಚೆ ನಡೆಯಲಿದೆ.
ಬಿಜೆಪಿ ಅಭ್ಯರ್ಥಿಯ ಗೆಲುವಿನ ಜತೆ ಐದನೇ ಅಭ್ಯರ್ಥಿಯನ್ನೂ ಗೆಲ್ಲಿಸುವ ತಂತ್ರಗಳ ಬಗ್ಗೆ ಕುಮಾರಸ್ವಾಮಿಯವರು ಈಗಾಗಲೇ ಬಿಜೆಪಿ ವರಿಷ್ಠರು ಮತ್ತು ರಾಜ್ಯದ ಮುಖಂಡರ ಜತೆ ಸಮಾಲೋಚನೆ ನಡೆಸಿದ್ದಾರೆ.