ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಜೆಡಿಎಸ್ ಶಾಸಕ ಶ್ರೀನಿವಾಸಗೌಡ
ಜಿಟಿಡಿ ನಂತರ ಮತ್ತೊಂದು ವಿಕೆಟ್ ನಿರ್ಗಮನ?
Team Udayavani, Sep 15, 2021, 5:27 PM IST
ಬೆಂಗಳೂರು: ಜೆಡಿಎಸ್ನ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಬುಧವಾರ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ಶ್ರೀನಿವಾಸಗೌಡರು ಡಿ.ಕೆ.ಶಿವಕುಮಾರ್ ಜತೆ ಕೆಲಹೊತ್ತು ಸಮಾಲೋಚನೆ ನಡೆಸಿದರು.
ನಂತರ ಮಾತನಾಡಿದ ಕೆ.ಶ್ರೀನಿವಾಸಗೌಡ, ಇದೊಂದು ಸೌಹಾರ್ಧಯುತ ಭೇಟಿಯಾಗಿತ್ತು. ರಾಜಕೀಯ ವಿಚಾರಗಳ ಬಗ್ಗೆಯೂ ಚರ್ಚಿಸಿದ್ದೇವೆ ಎಂದು ಹೇಳಿದರು.
ಶ್ರೀನಿವಾಸಗೌಡರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಬಗ್ಗೆ ಚರ್ಚಿಸಿದ್ದಾರೆ. ವಿಧಾನಸಭೆ ಚುನಾವಣೆ ವೇಳೆಗೆ ಅವರು ಕಾಂಗ್ರೆಸ ಸೇರಲಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ:23 ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವಿಗೆ ಸಿದ್ಧತೆ
ಜಿ.ಟಿ.ದೇವೇಗೌಡರ ನಂತರ ಇದೀಗ ಶ್ರೀನಿವಾಸಗೌಡರು ಅದೇ ಹಾದಿಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಗುಬ್ಬಿ ವಾಸು, ವಿಧಾನಪರಿಷತ್ ಸದಸ್ಯರಾದ ಬೆಮೆಲ್ ಕಾಂತರಾಜ್, ವಿ,ಮನೋಹರ್ ಅವರು ಸಹ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಈಗಾಗಲೇ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ.
ಕೆ.ಶ್ರೀನಿವಾಸಗೌಡ ಸೇರಿದಂತೆ ಜೆಡಿಎಸ್ನ ಇಬ್ಬರು ಶಾಸಕರು ಹಾಗೂ ಇಬ್ಬರು ವಿಧಾನಪರಿಷತ್ ಸದಸ್ಯರಿಗೆ ಕಾಂಗ್ರೆಸ್ ಗಾಳ ಹಾಕಿರುವ ಬಗ್ಗೆ ಆಗಸ್ಟ್ 26 ರಂದು “ಉದಯವಾಣಿ’ ವಿಶೇಷ ವರದಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ