ಜೆಡಿಎಸ್ ಅತೃಪ್ತಿ ಶಮನಕ್ಕೆ “ತ್ರಿಮೂರ್ತಿ’ಗಳು
Team Udayavani, May 29, 2022, 6:30 AM IST
ಬೆಂಗಳೂರು: ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಕೆಲವು ಜೆಡಿಎಸ್ ಶಾಸಕರ ಮನ ವೊಲಿಸಿ ಅವರನ್ನು ಪಕ್ಷದಲ್ಲೇ ಹಿಡಿದಿಟ್ಟು ಕೊಳ್ಳಲು ಮುಂದಾಗಿರುವ ಎಚ್.ಡಿ. ಕುಮಾರಸ್ವಾಮಿ, ಈ ಜವಾಬ್ದಾರಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಶಾಸಕ ಸಿ.ಎಸ್. ಪುಟ್ಟರಾಜು ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರಿಗೆ ವಹಿಸಿದ್ದಾರೆ.
ಶಾಸಕರಾದ ಜಿ.ಟಿ. ದೇವೇಗೌಡ, ಶಿವಲಿಂಗೇ ಗೌಡ, ಎ.ಟಿ. ರಾಮ ಸ್ವಾಮಿ, ಗುಬ್ಬಿ ಶ್ರೀನಿವಾಸ್, ಮಾಜಿ ಶಾಸಕ ವೈಎಸ್ವಿ ದತ್ತಾ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ.
ಜನತಾ ಜಲಧಾರೆ ಕಾರ್ಯಕ್ರಮದಲ್ಲೂ ಈ ಶಾಸಕರು ಸಕ್ರಿಯವಾಗಿರಲಿಲ್ಲ. ಈಗ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕರ ಮನವೊಲಿಸಿ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಕುಮಾರಸ್ವಾಮಿ ಸ್ವಾಮಿ ಮುಂದಾಗಿದ್ದರೆ.
ಅಲ್ಲದೇ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಹಾಕಲು ಜೆಡಿಎಸ್ ನಿರ್ಧರಿಸಿರುವುದರಿಂದ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು ಅನಿವಾರ್ಯವಾಗಿದೆ.
ಬಿಜೆಪಿ ಯವರು ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು, ಜೆಡಿಎಸ್ ಶಾಸಕರನ್ನು ಸೆಳೆಯುವ ಯತ್ನಗಳು ನಡೆಯಬಹುದು. ಅದನ್ನು ತಪ್ಪಿಸಲು ಅತೃಪ್ತರ ಮನವೊಲಿಕೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ