ನಿಮ್ಮ ಸಹವಾಸವೇ ಬೇಡ; ದೇವೇಗೌಡರನ್ನು ಭೇಟಿಯಾದ ದತ್ತಾ ಹೇಳಿದ್ದೇನು?
Team Udayavani, Jun 1, 2018, 4:26 PM IST
ಬೆಂಗಳೂರು: ಇನ್ಮೇಲೆ ನೀವು ಬೇಡ, ನಿಮ್ಮ ಪಕ್ಷವೂ ಬೇಡ. ನಿಮ್ಮನ್ನು ನಂಬಿ ಬಂದಿದ್ದಕ್ಕೆ ನನಗೆ ನೀವು ಮಾಡಿದ ಉಪಕಾರ ಇದು ಎಂಬುದಾಗಿ ಚಿಕ್ಕಮಗಳೂರು ಜಿಲ್ಲೆ ಕಡೂರು ಮಾಜಿ ಶಾಸಕ ವೈಎಸ್ ವಿ ದತ್ತಾ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಬಳಿ ನೇರವಾಗಿ ಹೇಳಿದ ಮಾತಿದು!
ನಿನ್ನೆ ರಾತ್ರಿ ತಮ್ಮ ಪರಮಾಪ್ತ ದೇವೇಗೌಡರನ್ನು ಭೇಟಿಯಾಗಿದ್ದ ವೈಎಸ್ ವಿ ದತ್ತಾ, ನಾನು ರಾಮಕೃಷ್ಣ ಹೆಗಡೆ ಕಾಲದಿಂದಲೂ ನಿಮ್ಮ ಜತೆಗೆ ಇದ್ದವನು, ಅಂದು ನಾನು ಹೆಗಡೆಯವರ ಜತೆ ಹೋಗದೆ ನಿಮ್ಮ ಬೆನ್ನಿಗೆ ನಿಂತಿದ್ದೆ. ಆದರೆ ಈಗ ನನ್ನನ್ನೇ ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದೀರಿ ಎಂದು ಅಸಮಾಧಾನ ತೋಡಿಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಸೋಲಿಗೆ ಕಾರಣರಾದ ಧರ್ಮೇಗೌಡರಿಗೆ ವಿಧಾನಪರಿಷತ್ ಟಿಕೆಟ್ ಕೊಟ್ಟಿದ್ದೀರಿ. ಇದು ನೀವು ಮತ್ತು ರೇವಣ್ಣ ಮಾಡಿರುವ ಉಪಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.
ಏತನ್ಮಧ್ಯೆ ದೇವೇಗೌಡರು ಅಸಹಾಯಕತೆ ವ್ಯಕ್ತಪಡಿಸಿ ನಾನು ಕೂಡಾ ಧರ್ಮೇಗೌಡರಿಗೆ ಟಿಕೆಟ್ ಕೊಡೋದು ಬೇಡ ಎಂದು ಹೇಳಿದ್ದೆ, ಆದರೆ ಅಷ್ಟರಲ್ಲಾಗಲೇ ಜೆಡಿಎಸ್ ನಿಂದ ಟಿಕೆಟ್ ಹಂಚಿಕೆ ಮಾಡಿ ಆಗಿತ್ತು ಎಂದು ಸಮಜಾಯಿಷಿ ನೀಡಿದ್ದಾರೆಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ