ಸಿದ್ದರಾಮಯ್ಯನವರೇ ನಮ್ಮ ಸಿಎಂ ಎನ್ನೋದು ಯಾವ ನ್ಯಾಯ?


Team Udayavani, Feb 3, 2019, 12:59 AM IST

vishwanth1.jpg

ಬೆಂಗಳೂರು: ‘ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಯಾಗಿ ಎಚ್.ಡಿ.ಕುಮಾರಸ್ವಾಮಿಯವರು ಸಂವಿಧಾ ನಾತ್ಮಕವಾಗಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ರಾಜ್ಯಭಾರ ಮಾಡುತ್ತಿರುವಾಗ ಸಿದ್ದ ರಾಮಯ್ಯನವರೇ ನಮ್ಮ ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಸಚಿವರು ಹೇಳುವುದು ಯಾವ ರೀತಿಯಲ್ಲಿ ಸಮಂಜಸ ಎಂಬುದನ್ನು ಸಿದ್ದರಾಮಯ್ಯ ಅವರೇ ಹೇಳಲಿ’

-ಇದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‌ ಪ್ರಶ್ನೆ.

ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ‘ಉದಯವಾಣಿ’ಗೆ ಸಂದರ್ಶನ ನೀಡಿದ ಅವರು, ಸಿದ್ದರಾಮಯ್ಯ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿ ಐದು ವರ್ಷ ಅಧಿಕಾರ ನಡೆಸಿದವರು. ಅನುಭವಿಗಳು. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮತಿ ಅಧ್ಯಕ್ಷರೂ ಹೌದು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುವಾಗ ಕೆಲವು ಸಚಿವರು -ಶಾಸಕರು ಹಾದಿ-ಬೀದಿಯಲ್ಲಿ ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ ಎಂದು ಹೇಳುವುದನ್ನು ಖುದ್ದು ಸಿದ್ದರಾಮಯ್ಯ ಅವರೇ ಒಪ್ಪುತ್ತಾರ ಎಂದು ನಾನು ಸೌಜನ್ಯಪೂರ್ವಕವಾಗಿಯೇ ಕೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಸಂದರ್ಶನದ ಸಾರಾಂಶ:

•ಸಮ್ಮಿಶ್ರ ಸರ್ಕಾರದಲ್ಲಿ ಏನಾಗುತ್ತಿದೆ?

ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ. ದೊಡ್ಡ ಮಟ್ಟದ ಸಮಸ್ಯೆಯೇನೂ ಇಲ್ಲ. ಆದರೆ, ಎಲ್ಲೋ ಒಂದು ಕಡೆ ನಂಬಿಕೆ ಮತ್ತು ವಿಶ್ವಾಸದ ಕೊರತೆಯಿದೆ.

•ನಂಬಿಕೆ-ವಿಶ್ವಾಸದ ಕೊರತೆ ಎಲ್ಲಿದೆ?

ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳ ನಾಯಕರಲ್ಲಿ ನಂಬಿಕೆ-ವಿಶ್ವಾಸದ ಕೊರತೆಯಿದೆ. ರಾಜಕಾರಣ ನಡೆಯುವುದೇ ನಂಬಿಕೆಯಲ್ಲಿ. ಆದರೆ, ಅನುಮಾನ-ಅಪನಂಬಿಕೆ ಯಿಂದ ಸಂಕಷ್ಟ ತಪ್ಪಿದ್ದಲ್ಲ.

•ಕಾಂಗ್ರೆಸ್‌ನವರು ಇದಕ್ಕೆ ಕಾರಣವಾ?

ಹಾಗಂತ ನಾನು ಹೇಳಲ್ಲ. ಎರಡೂ ಪಕ್ಷಗಳ ನಾಯಕರು ಈ ವಿಚಾರದಲ್ಲಿ ಪರಸ್ಪರ ಸಹಕಾರ ದೊಂದಿಗೆ ಮುಂದುವರಿಯಬೇಕು. ನಾವು ಹುಡುಗಾ ಟಿಕೆ ಮಾಡುತ್ತಿಲ್ಲ. ಜವಾಬ್ದಾರಿಯುತವಾಗಿ ಸರ್ಕಾರ ನಡೆಸಬೇಕಾಗಿದೆ. ಜನರ ನಂಬಿಕೆ ಉಳಿಸಿಕೊಳ್ಳಬೇ ಕಾಗಿದೆ. ಪ್ರಜಾಪ್ರಭುತ್ವದಲ್ಲಿ ಮತದಾರರು ನಮ್ಮ ನಾಯಕರು ಎಂಬುದು ಅರ್ಥಮಾಡಿಕೊಳ್ಳಬೇಕು.

•ಆಪರೇಷನ್‌ ಕಮಲ ಕಾರ್ಯಾಚರಣೆಯಿಂದ ಸರ್ಕಾರ ಪತನವಾಗುತ್ತಾ?

ಸಮ್ಮಿಶ್ರ ಸರ್ಕಾರ ರಚನೆಯಾದ ಕ್ಷಣದಿಂದಲೂ ಅದೆಂಥಧ್ದೋ ಆಪರೇಷನ್‌, ಆಪರೇಷನ್‌ ಅನ್ನುತ್ತಲೇ ಇದ್ದಾರೆ. ಬಿಜೆಪಿಯವರು ತಾವು ಏನು ಮಾಡುತ್ತಿದ್ದೇ ವೆಂಬ ಪರಿಜ್ಞಾನ ಇಟ್ಟುಕೊಂಡರೆ ಒಳ್ಳೆಯದು. ಇಂತಹ ರಾಜಕಾರಣ ಯಾರಿಗೂ ಒಳ್ಳೆಯದಲ್ಲ.

•ಜೆಡಿಎಸ್‌ನವರು ಬ್ಲಾಕ್‌ವೆುೕಲ್‌ ಮಾಡುತ್ತಿದ್ದಾರೆ ಎಂದು ರಾಹುಲ್‌ಗೆ ದೂರು ಕೊಡಲಾಗಿದೆಯಂತೆ?

ನಾನು ಕಾಂಗ್ರೆಸ್‌ನಲ್ಲಿ ಇದ್ದವನು. ಆ ಪಕ್ಷದ ಹೈಕಮಾಂಡ್‌ ಎಲ್ಲವನ್ನೂ ಗಮನಿಸುತ್ತದೆ. ಯಾರು, ಯಾರನ್ನು ಬ್ಲಾಕ್‌ವೆುೕಲ್‌ ಮಾಡುತ್ತಿದ್ದಾರೆ. ಯಾಕೆ, ಯಾವುದರ ಹಿಂದೆ ಯಾರಿದ್ದಾರೆ ಎಂಬುದೆಲ್ಲಾ ಮಾಹಿತಿ ಸಂಗ್ರಹಿಸಿರುತ್ತದೆ. ಜೆಡಿಎಸ್‌ಗಂತೂ ಆ ಅನಿವಾರ್ಯತೆ ಇಲ್ಲ.

•ಎಷ್ಟು ದಿನ ಹೀಗೆ ಅತಂತ್ರ?

ನೋಡೋಣ. ಲೋಕಸಭೆ ಚುನಾವಣೆವರೆಗೂ ಇದೇ ರೀತಿ ಬಿಜೆಪಿಯವರೂ ಆಟ ಆಡಬಹುದು. ಚುನಾವಣೆ ನಂತರ ಅವರಿಗೂ ಗೊತ್ತಾಗುತ್ತದೆ.

•ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಆಗುತ್ತಾ?

ಆಗಬೇಕು. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಮಟ್ಟದ ಪ್ರಯತ್ನ ನಡೆಯುತ್ತಿದೆ. ಎಚ್.ಡಿ.ದೇವೇಗೌಡರೂ ಮುಂಚೂಣಿ ವಹಿಸಿದ್ದಾರೆ. ರಾಜ್ಯದಲ್ಲೂ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುವ ತೀರ್ಮಾನ ವಾಗಿದೆ.

•ಸೀಟು ಹಂಚಿಕೆ ಮಾತುಕತೆ ಮುನ್ನವೇ ಹಾಸನ ಮತ್ತು ಮಂಡ್ಯ ಕ್ಷೇತ್ರಗಳ ಬಗ್ಗೆ ತಗಾದೆ ಎದ್ದಿದೆಯಲ್ಲಾ?

ಅದೆಲ್ಲಾ ಸೃಷ್ಟಿ. ರಾಹುಲ್‌ಗಾಂಧಿ- ಎಚ್.ಡಿ. ದೇವೇಗೌಡರು ಚರ್ಚಿಸಿ ಕೈಗೊಳ್ಳುವುದೇ ಅಂತಿಮ ತೀರ್ಮಾನ. ಅದಕ್ಕೆ ಎಲ್ಲರೂ ಬದ್ಧರಾಗಿರಲೇಬೇಕು.

•ಜೆಡಿಎಸ್‌ ಎಷ್ಟು ಸೀಟು ಬೇಡಿಕೆ ಇಟ್ಟಿದೆ?

ನಾವು 12 ಸೀಟು ಬೇಕು ಎಂದು ಕೇಳುತ್ತೇವೆ. ಆದು ಸಹಜ. ಆದರೆ, ಮಾತುಕತೆಗೆ ಕುಳಿತಾಗ ಪರಸ್ಪರ ಕೊಟ್ಟು ತೆಗೆದುಕೊಳ್ಳುವುದು ಇದ್ದೇ ಇರುತ್ತದೆ. ಜೆಡಿಎಸ್‌ ಶಕ್ತಿಯನ್ನು ಕಾಂಗ್ರೆಸ್‌ ಸೇರಿ ಯಾರೂ ಕಡೆಗಣಿಸುವಂತಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಜೆಡಿಎಸ್‌ ಪಡೆದಿರುವ ಮತ ಪ್ರಮಾಣ ಇದಕ್ಕೆ ಸಾಕ್ಷಿ.

•ಲೋಕಸಭೆ ಚುನಾವಣೆಗೆ ರಾಜ್ಯಪ್ರವಾಸ ಯಾವಾಗ ಪ್ರಾರಂಭ?

ದೇವೇಗೌಡರ ದಿನಾಂಕ ಸಿಕ್ಕ ತಕ್ಷಣ ಪಕ್ಷ ಸಂಘಟನೆಗೆ ರಾಜ್ಯಪ್ರವಾಸ ಆರಂಭಿಸುತ್ತೇವೆ. ಪಕ್ಷ ಸಂಘಟನೆಗಾಗಿ ಐವರು ಕಾರ್ಯಾಧ್ಯಕ್ಷರನ್ನು ನೇಮಿಸುತ್ತೇವೆ.

ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.