ನಿಮ್ಮ ಖಾತೆಯನ್ನೇ ಡಿಲೀಟ್ ಮಾಡಬೇಕು: ತೇಜಸ್ವಿ ಸೂರ್ಯ ಟ್ವೀಟ್ ಗೆ ಜೆಡಿಎಸ್ ತಿರುಗೇಟು


Team Udayavani, May 13, 2021, 2:13 PM IST

tejaswi surya

ಬೆಂಗಳೂರು: ರಾಜ್ಯಕ್ಕೆ ಸರಿಯಾದ ಪ್ರಮಾಣದ ಆಕ್ಸಿಜನ್ ನೀಡದೇ ಇರುವ ಕುರಿತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾಡಿದ ಟ್ವೀಟ್ ಗೆ ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದು, ಇದಕ್ಕೆ ಜೆಡಿಎಸ್ ಮರು ಟ್ವೀಟ್ ಮಾಡಿದೆ.

ಕನ್ನಡಿಗರಿಗೆ ಆಗುತ್ತಿರುವ ತಾರತಮ್ಯವನ್ನು ಪ್ರಶ್ನೆ ಮಾಡಿ ಎಚ್ ಡಿ ಕುಮಾರಸ್ವಾಮಿ ಮಾಡಿದ ಟ್ವೀಟ್‌ಅನ್ನು ಸುಳ್ಳು ಎಂದಿರುವ ಬೆಂ.ದಕ್ಷಿಣದ ಬಿಜೆಪಿ ಸಂಸದರು ಆ ಟ್ವೀಟ್‌ಗಳನ್ನು ಡಿಲಿಟ್‌ ಮಾಡಬೇಕು ಎಂದಿದ್ದಾರೆ. ಸಂಸದರೇ, ಹಾಗೊಂದು ವೇಳೆ ಸುಳ್ಳಿನ ಟ್ವೀಟ್‌ ಡಿಲಿಟ್‌ ಮಾಡುವುದಿದ್ದರೆ ನಿಮ್ಮ ಇಡೀ ಟ್ವಿಟರ್‌ ಖಾತೆಯನ್ನೇ ಡಿಲೀಟ್ ಮಾಡಬೇಕು ಎಂದು ಜೆಡಿಎಸ್ ತಿರುಗೇಟು ನೀಡಿದೆ.

ಚುನಾವಣೆಗಳಲ್ಲಿ ನೀವು ಹೇಳಿದ ಸುಳ್ಳುಗಳು, ಕೊಟ್ಟ ಆಶ್ವಾಸನೆ, ಆತ್ಮರತಿ, ಕೋಮು ಭಾವನೆ ಕೆರಳಿಸಲು ನೀವು ಆಡಿದ ಮಾತುಗಳು, ತಿರುಚಿದ ಇತಿಹಾಸಗಳು ಒಂದೇ ಎರಡೇ?  ಬೆಂ. ದಕ್ಷಿಣದ ಬಿಜೆಪಿ ಸಂಸದರೇ, ನಿಮ್ಮ ಇಡೀ ಟ್ವಿಟರ್‌ ಖಾತೆ ಇಂಥ ಸುಳ್ಳುಗಳಿಂದ ತುಂಬಿದೆ. ಹಾಗಾದರೆ ಡಿಲೀಟ್‌ ಆಗಬೇಕಾದ್ದು ನಿಮ್ಮ ಟ್ವೀಟ್‌ಗಳೋ ಕುಮಾರಸ್ವಾಮಿ ಅವರದ್ದೋ ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ:ನಿಮ್ಮ ಈ ವ್ಯವಸ್ಥೆ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ? ಕೇಂದ್ರದ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಡ್‌ ಬ್ಲಾಕಿಂಗ್‌ ದಂಧೆಯನ್ನು ಬಯಲಿಗೆಳೆದ ನಾಟಕವಾಡುವಾಗ ನೀವು ಅಪರಾಧಿಯನ್ನೇ ಪಕ್ಕದಲ್ಲಿ ಇಟ್ಟುಕೊಂಡಿರಲಿಲ್ಲವೇ? ಪಟ್ಟಿಯಲ್ಲಿರುವ ಸಿಬ್ಬಂದಿಯ ಹೆಸರುಗಳನ್ನು ಮರೆ ಮಾಚಿ ಮಾತನಾಡಲಿಲ್ಲವೇ? ಅಡಿಗಡಿಗೂ ಸುಳ್ಳು ನುಡಿಯುವ, ಅಪದ್ಧ ಮಾತಾಡುವ ನಿಮ್ಮಿಂದ ಕುಮಾರಸ್ವಾಮಿ ಅವರು ಸತ್ಯ-ಸುಳ್ಳುಗಳ ಪಾಠ ಕಲಿಯಬೇಕೆ ಬೆಂ.ದಕ್ಷಿಣದ ಬಿಜೆಪಿ ಸಂಸದರೇ ಎಂದು ಜೆಡಿಎಸ್ ಪ್ರಶ್ನಿಸಿದೆ.

ಕುಮಾರಸ್ವಾಮಿ ಅವರು ಇಂದು ಮಾಡಿರುವ ಟ್ವೀಟ್‌ಗೆ ವಾರ್ತಾ ಇಲಾಖೆ  ನೀಡಿದ ಮಾಹಿತಿಯೇ ಆಧಾರ. ಅಲ್ಲಿರುವ ಅಂಶಗಳನ್ನು ಬಿಟ್ಟು ಒಂದಿನಿತೂ ಬೇರೆ ಅಂಶಗಳನ್ನು ಕುಮಾರಸ್ವಾಮಿ ಅವರು ಪ್ರಸ್ತಾಪಿಸಿಲ್ಲ. ಅಲ್ಲದೆ, ಇಂದು ನೀವು ನೀಡಿರುವ ಮಾಹಿತಿ ಅಸ್ಪಷ್ಟವಾಗಿದೆ. ನಿಮ್ಮ ಟ್ವೀಟ್‌ನಲ್ಲಿರುವ ಅಂಕಿ ಅಂಶಗಳನ್ನು ಕನ್ನಡಿಗರಿಗೆ ಕನ್ನಡದಲ್ಲಿ ವಿವರಿಸಿ ಹೇಳಿ ಎಂದು ಸವಾಲೆಸೆದಿದೆ.

ಬಿಜೆಪಿಯ ಮರ್ಜಿಯಿಂದ ನೀವೂ ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದು ಗೊತ್ತಿರುವ ವಿಚಾರ. ಪಕ್ಷಕ್ಕೆ ಋಣ ಸಂದಾಯ ಮಾಡುವುದಕ್ಕಾಗಿ ಕನ್ನಡಿಗರನ್ನೇ ಮರೆಯುವುದು ಸರಿಯಲ್ಲ ಸಂಸದರೇ. ನೀವು ಬಿಜೆಪಿ ಸಂಸದರಾಗುವುದಕ್ಕೂ ಮೊದಲು ಕನ್ನಡಿಗ. ಅದನ್ನು ಮರೆಯಬೇಡಿ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಾತಾಡಿ. ನಿಜವಾದ ಕನ್ನಡಿಗ ಎನಿಸಿಕೊಳ್ಳಿ ಎಂದು ಜೆಡಿಎಸ್ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಗೆ ತಿರುಗೇಟು ನೀಡಿದೆ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.