JDS; 6 ಲೋಕಸಭಾ ಕ್ಷೇತ್ರಗಳನ್ನು ಕೇಳಲಾಗಿದೆ: ಜಿ.ಟಿ. ದೇವೇಗೌಡ
ಮಂಡ್ಯ ದಿಂದ ಸುಮಲತಾ ಅಂಬರೀಶ್ ಬಿಜೆಪಿ ಅಭ್ಯರ್ಥಿಯಾದರೆ ನಾವು...
Team Udayavani, Feb 9, 2024, 4:36 PM IST
ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೃತ್ರಿಯಲ್ಲಿ ರಾಜ್ಯದ ಆರು ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಗೆ ನೀಡಲು ಕೇಳಲಾಗಿದೆ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಹಾಸನ, ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರು ಉತ್ತರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಗಳನ್ನು ಕೇಳುವಂತೆ ಎಚ್.ಡಿ. ದೇವೇಗೌಡರು, ಕುಮಾರಸ್ವಾಮಿಯವರಿಗೆ ಹೇಳಿದ್ದೇವೆ ಎಂದರು.
ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಬಿಜೆಪಿ ಅಭ್ಯರ್ಥಿಯಾದರೆ ನಾವು ಸ್ವಾಗತಿಸುತ್ತೇವೆ. ಆದರೆ ಅವರು ಕಾಂಗ್ರೆಸ್ ಗೆ ಹೋದರೂ ಅಚ್ಚರಿ ಪಡಬೇಕಿಲ್ಲ. ಏಕೆಂದರೆ ಅವರು ನಾರಾಯಣಗೌಡರ ಜತೆ ಸೇರಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ ಎಂದರು.
ರಾಜ್ಯಾದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಬಿಜೆಪಿ ಜತೆ ಸೇರಿ ಕಾರ್ಯಕ್ರಮ ರೂಪಿಸಿದ್ದೇವೆ. ಆ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ನಿಲ್ಲುವ ತೀರ್ಮಾನ ಮಾಡಿಲ್ಲ. ಕುಮಾರಸ್ವಾಮಿ ಸ್ಪರ್ಧಿಸದಿದ್ದರೆ ಗೌಡರ ಕುಟುಂಬದಿಂದ ಒಬ್ಬರೇ ನಿಲ್ಲುತ್ತಾರೆ ಎಂದರು.
ಬಿಜೆಪಿ ಜತೆ ಹೋಗುವ ನಿರ್ಧಾರವನ್ನು ಜೆಡಿಎಸ್ ಕಾರ್ಯಕರ್ತರು ಸ್ವಾಗತಿಸಿದ್ದಾರೆ. ಯಾರೂ ವಿರೋಧಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ದೌರ್ಜನ್ಯ, ದಬ್ಬಾಳಿಕೆ ಮಾಡುತ್ತಿದೆ. ಈ ಸರ್ಕಾರ ತೆಗೆದು ಹಾಕಲು ನಾವು ಒಂದಾಗಿದ್ದೇವೆ. ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು ಎಂದರು.
ಮಂಡ್ಯ ಜಿಲ್ಲೆಯ ಕೆರಗೋಡು ಹನುಮಧ್ವಜ ಕುರಿತ ಹೋರಾಟದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರು ಧರಿಸಿದ್ದ ಕೇಸರಿ ಶಾಲಿನ ಮೇಲೆ ಬಿಜೆಪಿ ಚಿಹ್ನೆ ಇರಲಿಲ್ಲ. ಬಿಜೆಪಿ ತತ್ವ, ಸಿದ್ಧಾಂತ, ನೀತಿ ಬೇರೆ, ಜೆಡಿಎಸ್ ಸಿದ್ಧಾಂತ ಬೇರೆ. ನಮ್ಮ ತತ್ವ ಸಿದ್ಧಾಂತಗಳನ್ನು ಇಟ್ಟುಕೊಂಡೇ ಪಕ್ಷ ಕಟ್ಟುತ್ತೇವೆ ಎಂದರು.
ಅನುದಾನ ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಿದೆ. ಹಣಕಾಸು ಆಯೋಗದ ಮಾರ್ಗಸೂಚಿ ಪ್ರಕಾರ ಅನುದಾನ ಕೊಡಲಾಗಿದೆ. ಅದರಲ್ಲಿ ಯಾವುದೇ ಅನ್ಯಾಯವಾಗಿಲ್ಲ ಅನಿಸುತ್ತದೆ. ನಮ್ಮ ರಾಜ್ಯಕ್ಕೆ ಸಿಗಬೇಕಾದ ಅನುದಾನ ಸಿಗಲೇಬೇಕು, ಅದಕ್ಕಾಗಿ ಧ್ವನಿ ಎತ್ತುತ್ತೇವೆ ಎಂದರು.
ಸಿಎಂ ಸಿದ್ದರಾಮಯ್ಯ ಈ ರಾಜ್ಯಕ್ಕೆ ಏನೇನು ಕೊಟ್ಟಿದ್ದಾರೆ? ಶಾಸಕರಿಗೆ ಕೇವಲ 50ಲಕ್ಷ ರೂ. ಅನುದಾನ ಕೊಟ್ಟಿದ್ದು ಬಿಟ್ಟರೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದರು.
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗಲು ಸೂಕ್ತ ಅಭ್ಯರ್ಥಿ. ಅವರು ಪಿಎಂ ಆದರೆ ನಾವೆಲ್ಲಾ ಸಂತೋಷ ಪಡುತ್ತೇವೆ. ಆದರೆ ಸಿದ್ದರಾಮಯ್ಯನವರೇ ರಾಹುಲ್ ಗಾಂಧಿ ಪಿಎಂ ಆಗಲಿ ಎಂದು ಹೇಳುತ್ತಿದ್ದಾರಲ್ಲ ಎಂದು ಕುಟುಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್