ಜಿಂದಾಲ್‌ಗೆ ಭೂಮಿ ಮಾರಾಟ ನ್ಯಾಯಸಮ್ಮತ; ಎಫ್ಕೆಸಿಸಿಐ


Team Udayavani, Jun 18, 2019, 3:00 AM IST

Udayavani Kannada Newspaper

ಬೆಂಗಳೂರು: ವಿವಾದದ ಕೇಂದ್ರಬಿಂದು ಜಿಂದಾಲ್‌ ಪರ ದನಿ ಎತ್ತಿರುವ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆ ಮಹಾಸಂಸ್ಥೆ (ಎಫ್ಕೆಸಿಸಿಐ), ಕೈಗಾರಿಕೆಗಳ ಹೆಸರಿನಲ್ಲಿ ರಾಜಕೀಕರಣ ಸಲ್ಲದು. ಈ ಮೊದಲೇ ಆಗಿರುವ ಒಪ್ಪಂದದಂತೆ ಉದ್ದೇಶಿತ ಕಂಪೆನಿಗೆ ಭೂಮಿ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದೆ.

ವಿವಾದ ಕೇಳಿಬಂದ ಹಿನ್ನೆಲೆಯಲ್ಲಿ ಖುದ್ದು ಎಫ್ಕೆಸಿಸಿಐ ತಂಡವು ಸ್ಥಳಕ್ಕೆ ಭೇಟಿ ನೀಡಿ, ಸಮೀಕ್ಷೆ ನಡೆಸಿದೆ. ಅದರಂತೆ ಒಟ್ಟಾರೆ ಜಿಂದಾಲ್‌ ವಿಜಯನಗರ ಸ್ಟೀಲ್‌ ಲಿ., (ಜೆಎಸ್‌ಎಲ್‌ವಿ)ಗೆ ಈವರೆಗೆ ಕೆಎಸ್‌ಐಐಡಿಸಿ ಹಾಗೂ ಸರ್ಕಾರದಿಂದ 7,742.06 ಎಕರೆ ಭೂಮಿ ಮಂಜೂರಾಗಿದೆ.

ಅದರಲ್ಲಿ ಈಗಾಗಲೇ 4,074.75 ಎಕರೆ ಭೂಮಿಯನ್ನು ವಿವಿಧ ಹಂತಗಳಲ್ಲಿ ಮಾರಾಟ ಮಾಡಿದೆ. ಉಳಿದ 3,667.31 ಎಕರೆ ಬಾಕಿ ಇದೆ. ಈ ಭೂಮಿಯನ್ನು ಮಾರಾಟ ಒಪ್ಪಂದ (ಸೇಲ್‌ಡೀಡ್‌) ಮಾಡದಿದ್ದರೆ, ಒಪ್ಪಂದದ ನಿಯಮ ಉಲ್ಲಂ ಸಿದಂತಾಗುತ್ತದೆ ಎಂದು ಎಫ್ಕೆಸಿಸಿಐ ಅಧ್ಯಕ್ಷ ಸುಧಾಕರ್‌ ಶೆಟ್ಟಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಷ್ಟಕ್ಕೂ ಜಿಂದಾಲ್‌ ಕಂಪೆನಿ ಕೇಳುತ್ತಿರುವುದು ಹೊಸ ಜಾಗ ಅಲ್ಲ; ಈಗಾಗಲೇ ತಮಗೆ ಲೀಸ್‌ ಕಂ ಸೇಲ್‌ಡೀಡ್‌ ಒಪ್ಪಂದದಡಿ ನೀಡಿದ ಜಾಗವನ್ನು. 1994ರಿಂದಲೂ 2007ರವರೆಗೆ ಹತ್ತು ವರ್ಷಗಳ ಲೀಸ್‌ ಕಂ ಸೇಲ್‌ಡೀಡ್‌ ಒಪ್ಪಂದದಂತೆ ಭೂಮಿ ನೀಡಲಾಗಿದೆ. ಈ ಬಗ್ಗೆ ಮೂರೂ ಪ್ರಮುಖ ರಾಜಕೀಯ ಪಕ್ಷಗಳಿಗೂ ಅರಿವಿದೆ. ಹಾಗಾಗಿ, ಭೂಮಿಯನ್ನು ನೀಡಬೇಕು. ಆ ಮೂಲಕ ರಾಜ್ಯಕ್ಕೆ ಕೈಗಾರಿಕೆಗಳು ಬರಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಸಾವಿರಾರು ಕುಟುಂಬಗಳು ಬೀದಿಗೆ: ಜಿಂದಾಲ್‌ ಕೈಗಾರಿಕೆಯಲ್ಲಿ 25 ಸಾವಿರ ಜನ ಕಾರ್ಯನಿರ್ವಹಿಸುತ್ತಿದ್ದು, ಸುಮಾರು ಎರಡು ಲಕ್ಷ ಜನ ನೇರ ಮತ್ತು ಪರೋಕ್ಷವಾಗಿ ಅವಲಂಬನೆ ಆಗಿದ್ದಾರೆ. ಅಲ್ಲದೆ, ಕೈಗಾರಿಕೆಯು ಈವರೆಗೆ 62,025 ಕೋಟಿ ರೂ. ಹೂಡಿಕೆ ಮಾಡಿದ್ದು, ಪ್ರಸಕ್ತ ಸಾಲಿನಲ್ಲೇ 6,561 ಕೋಟಿ ರೂ. ಹೂಡಿಕೆ ಮಾಡಿದೆ. ಇಂತಹ ಸಂದರ್ಭದಲ್ಲಿ ಭೂಮಿ ನೀಡದಿದ್ದರೆ, ಲಕ್ಷಾಂತರ ಜನ ಬೀದಿಗೆ ಬರಲಿದ್ದಾರೆ ಎಂದ ಅವರು, ಈ ಸಂಬಂಧ ಶೀಘ್ರ ಎಫ್ಕೆಸಿಸಿಐ ನಿಯೋಗವು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡಲಿದೆ ಎಂದರು.

ತಪ್ಪು ಅಭಿಪ್ರಾಯ ಸಾಧ್ಯತೆ: 2020ರಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ. ಈ ಸಂಬಂಧ ಹೊರ ರಾಜ್ಯ ಮತ್ತು ದೇಶಗಳಿಗೆ ತೆರಳಿ ಹೂಡಿಕೆಗೆ ಆಹ್ವಾನ ನೀಡಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಈ ರೀತಿಯ ವಿವಾದಗಳು ಹೂಡಿಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ರಾಜ್ಯದ ಬಗ್ಗೆ ತಪ್ಪು ಅಭಿಪ್ರಾಯ ಮೂಡುವುದು ಬೇಡ ಎಂದ ಅವರು, ನೆರೆ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲೂ ಹತ್ತು ವರ್ಷಗಳಿಗೆ ಲೀಸ್‌ ಕಂ ಸೇಲ್‌ಡೀಡ್‌ ವ್ಯವಸ್ಥೆಯೇ ಇದೆ ಎಂದು ಪ್ರಶ್ನೆಯೊಂದಕ್ಕೆ ಅವರು ಸ್ಪಷ್ಟಪಡಿಸಿದರು.

ಇದಲ್ಲದೆ, ನಗರದಲ್ಲಿ ಎತ್ತರಿಸಿದ ಕಾರಿಡಾರ್‌, ಪೆರಿಫ‌ರಲ್‌ ರಿಂಗ್‌ ರಸ್ತೆ¤, ಉಪನಗರ ರೈಲು ಯೋಜನೆಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಬೇಕು. ಇದರಿಂದ ಕೈಗಾರಿಕೆಗಳಿಗೆ ಅನುಕೂಲ ಆಗಲಿದೆ. ಅದೇ ರೀತಿ, 2013ರಲ್ಲೇ ರಾಮನಗರ, ಮಾಗಡಿ, ಕನಕಪುರ ಸೇರಿದಂತೆ ಐದು ಕಡೆಗಳಲ್ಲಿ ಟೌನ್‌ಶಿಪ್‌ ಮಾಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಈ ಪೈಕಿ ಇದುವರೆಗೆ ಒಂದೂ ಆಗಿಲ್ಲ. ಈ ನಿಟ್ಟಿನಲ್ಲೂ ಕ್ರಮ ಕೈಗೊಳ್ಳಬೇಕು ಎಂದು ಸುಧಾಕರ್‌ ಶೆಟ್ಟಿ ಆಗ್ರಹಿಸಿದರು.

ಟಾಪ್ ನ್ಯೂಸ್

Mangaluru Airport ಸಿಬಂದಿ ರಜೆ: 4 ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸಂಚಾರ ರದ್ದು

Mangaluru Airport ಸಿಬಂದಿ ರಜೆ: 4 ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸಂಚಾರ ರದ್ದು

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Mangaluru Airport ಸಿಬಂದಿ ರಜೆ: 4 ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸಂಚಾರ ರದ್ದು

Mangaluru Airport ಸಿಬಂದಿ ರಜೆ: 4 ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸಂಚಾರ ರದ್ದು

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.