ಪತ್ರಕರ್ತ ಹೇಮಂತ್ ಕುಮಾರ್ ಬಂಧನ
Team Udayavani, Apr 28, 2019, 3:00 AM IST
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಗೃಹಸಚಿವರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿರುವ ಆರೋಪದಡಿ ಮತ್ತೋರ್ವ ಪತ್ರಕರ್ತ ಹೇಮಂತ್ ಕುಮಾರ್ರನ್ನು ಸಿಐಡಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಬರೆದಿದ್ದರು ಎನ್ನಲಾದ ನಕಲಿ ಪತ್ರ ಪ್ರಕಟಿಸಿದ ಆರೋಪದಡಿ ಸಿಐಡಿ ಪೊಲೀಸರು ಈ ಹಿಂದೆ ಪೋಸ್ಟ್ ಕಾರ್ಡ್ ವೆಬ್ಪೋರ್ಟಲ್ ಸಂಪಾದಕ ಮಹೇಶ್ ವಿಕ್ರಂ ಹೆಗ್ಡೆಯನ್ನು ಬಂಧಿಸಿದ್ದರು.
ವಿಚಾರಣೆ ಸಂದರ್ಭದಲ್ಲಿ ಆರೋಪಿ ನೀಡಿದ ಮಾಹಿತಿಯ ಆಧಾರದಲ್ಲಿ ಸಿಐಡಿ ಪೊಲೀಸರು ಶನಿವಾರ ಪತ್ರಕರ್ತ ಎಸ್.ಎ.ಹೇಮಂತ್ ಕುಮಾರ್ರನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು. ನ್ಯಾಯಾಲಯವು ಏ.30ರವರೆಗೆ ಪೊಲೀಸ್ ವಶಕ್ಕೆ ನೀಡಿದೆ.
ದ್ವೇಷ ರಾಜಕಾರಣ ಬಿಜೆಪಿ ಆರೋಪ: ಈ ಮಧ್ಯೆ, ಪತ್ರಕರ್ತ ಎಸ್.ಎ.ಹೇಮಂತ ಕುಮಾರ್ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಪೊಲೀಸ್ ಇಲಾಖೆ ಗೃಹಸಚಿವರ ಒತ್ತಡದಲ್ಲಿ ಕೆಲಸ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.
ಹೇಮಂತ್ ಬಂಧನಕ್ಕೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ವಕ್ತಾರರಾದ ಎಸ್. ಸುರೇಶ್ ಕುಮಾರ್, ಅಶ್ವತ್ಥ ನಾರಾಯಾಣಗೌಡ, ಸಹ ವಕ್ತಾರ ಎ.ಎಚ್.ಆನಂದ್ ಅವರನ್ನೊಳಗೊಂಡ ರಾಜ್ಯ ಬಿಜೆಪಿ ನಿಯೋಗ ಬೆಂಗಳೂರಿನಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಭೇಟಿ ನೀಡಿತ್ತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅರವಿಂದ ಲಿಂಬಾವಳಿ, ಬಿಜೆಪಿ ಬೆಂಬಲಿಸುವವರನ್ನು ಗುರಿಯಾಗಿಸಿಕೊಂಡು ತೊಂದರೆ ನೀಡುವ ಕೆಲಸ ಗೃಹ ಸಚಿವರ ನಿರ್ದೇಶನದಂತೆ ನಡೆಯುತ್ತಿದೆ. ಮಹೇಶ್ ಹೆಗ್ಡೆ ನಂತರ ಶೃತಿ ಬೆಳ್ಳಕ್ಕಿ, ಇದೀಗ ಹೇಮಂತ್ ವಿರುದ್ಧ ಸೇಡಿನ ಕ್ರಮ ಮುಂದುವರಿದಿದೆ. ಪ್ರಧಾನಿ ವಿರುದ್ಧ ಹೇಳಿಕೆ ನೀಡಿದ್ದ ಬೇಳೂರು ಗೋಪಾಲಕೃಷ್ಣ ಅವರಿಗೆ ನೋಟಿಸ್ ಸಹ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತನಿಖೆಯ ನೇತೃತ್ವ ವಹಿಸಿರುವ ಪೊಲೀಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್, ಈ ಹಿಂದೆ ವಿಧಾನಸಭಾ ಚುನಾವಣೆ ವೇಳೆಯಲ್ಲೂ ಇದೇ ರೀತಿ ನಡೆದುಕೊಂಡಿದ್ದರು ಎಂದು ಆರೋಪಿಸಿದರು. ರಾಜಕೀಯದಲ್ಲಿ ಆಸಕ್ತಿ ಇದ್ದರೆ ಖಾಕಿ ತೊರೆದು, ಖಾದಿ ತೊಟ್ಟು ಬನ್ನಿ. ರಾಜಕೀಯ ಅಧಿಕಾರ ಬಳಸಿಕೊಂಡು ಇಲಾಖೆಗೆ ಕಳಂಕ ತರಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ