ಪತ್ರಕರ್ತನ ಶವ ಕಾರ್ಪೋರೇಷನ್ ವಾಹನದಲ್ಲಿ ಸಾಗಾಟ !
Team Udayavani, Jan 14, 2018, 1:27 PM IST
ಹಾವೇರಿ : ಹಾನಗಲ್ನ ಗಂಡೂರು ಬಳಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅವಘಡದಲ್ಲಿ ಸುದ್ದಿ ಟಿವಿಯ ಶಿರಸಿಯ ವರದಿಗಾರ ಮೌನೇಶ ಪೋತರಾಜ ದಾರುಣವಾಗಿ ಸಾವನ್ನಪ್ಪಿದ್ದಾರೆ.
28 ರ ಹರೆಯ ಪೋತರಾಜ ಅವರು ಸುದ್ದಿ ಟಿವಿಯ ಶಿರಸಿ ವರದಿಗಾರರಾಗಿದ್ದು ರಾಜ್ಯ ಮಟ್ಟದ ಸಮಾರಂಭದ ವರದಿಯೊಂದನ್ನು ನೀಡಿ ತನ್ನ ಮನೆಯಾದ ಹಾವೇರಿಯ ಛಬ್ಬಿಗೆ ಬೈಕ್ನಲ್ಲಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ದಟ್ಟ ಮಂಜು ಕವಿದಿದ್ದ ಕಾರಣ ರಸ್ತೆ ಕಾಣದೇ ಬೈಕ್ ಮರಕ್ಕೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಹಾನಗಲ್ ಪೊಲೀಸರು ಸ್ಥಳಕ್ಕಾಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಪೋರೇಷನ್ ವ್ಯಾನ್ನನಲ್ಲಿ ಶವ ಸಾಗಾಟ!
ಪೋತನೀಸ ಅವರ ಶವವನ್ನು ಕಸ ಸಾಗಿಸುವ ಹಾನಗಲ್ ಪುರಸಭೆಯ ಟ್ರ್ಯಾಕ್ಟರ್ನಲ್ಲಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ ಪೊಲೀಸರ ಕ್ರಮಕ್ಕೆ ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೊಶ ವ್ಯಕ್ತವಾಗಿದೆ.
ಬೆಳಗಾವಿ ಜಿಲ್ಲೆಯ ನಂದಗಡ ಬಳಿ ಶನಿವಾರ ತಡರಾತ್ರಿ ಕಾರು ಮರಕ್ಕೆ ಗುದ್ದಿ ಸಂಭವಿಸಿದ ಭೀಕರ ಅವಘಡದಲ್ಲಿ ಹಿರಿಯ ಪತ್ರಕರ್ತ ಡಾ ವಿರೇಶ ಹಿರೇಮಠ ಅವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ದುರ್ಘಟನೆಯ ವೇಳೆ ಕಾರಿನಲ್ಲಿದ್ದ ಪತ್ನಿ ಗೌರಿ ಮತ್ತು ಕಾರು ಚಾಲಕ ಸುನೀಲ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ