ದೇವರದಾಸಿಯರ ಮಕ್ಕಳಿಗೆ ಲಗ್ನಮಾಡಿಸಿದ ಜಡ್ಜ್ ಗಳು
Team Udayavani, Feb 24, 2019, 1:12 AM IST
ಬಾಗಲಕೋಟೆ: ಗ್ರಾಮೀಣ ಭಾಗದಲ್ಲಿ ದೇವರಿಗೆ ಬಿಟ್ಟ ಮಹಿಳೆ ಎಂದೇ ಕರೆಸಿಕೊಳ್ಳುವ ಮಹಿಳೆಯರ ಮಕ್ಕಳಿಗೆ ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಜಿಲ್ಲಾ ನ್ಯಾಯಾಧೀಶರು ಸರಳ ವಿವಾಹ ಮಾಡಿಸಿದ್ದಾರೆ. ನವನಗರದ ಕಲಾ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬೀಳಗಿ ತಾಲೂಕಿನ ಗಲಗಲಿಯ ರೇಖಾ ದೊಡಮನಿ ಅವರನ್ನು ಬಸವನಬಾಗೇವಾಡಿಯ ಗುಂಡಪ್ಪ ಹನಮಂತ ಹಡಪದ (ಅಂತರ್ಜಾತಿ ವಿವಾಹ) ಅವರೊಂದಿಗೆ ಹಾಗೂ ಗದಗ ಜಿಲ್ಲೆಯ ಮೇಗೂರ ಗ್ರಾಮದ ಲಲಿತಾ ಮಾದರ ಅವರನ್ನು ಬೀಳಗಿ ತಾಲೂಕಿನ ಅರಕೇರಿ ಗ್ರಾಮದ ರಾಜು ನಡಗೇರಿ ಅವರ ಜತೆ ವಿವಾಹ ನಡೆಯಿತು.
ಇದೇ ವೇಳೆ ಇಬ್ಬರೂ ಮಾಜಿ ದೇವದಾಸಿಯರ ಮಕ್ಕಳ ಮದುವೆಯ ವಿವಾಹ ನೋಂದಣಿ ಮಾಡಿಸಿ, ಶುಭ ಕೋರಲಾಯಿತು.ಗುಂಡಪ್ಪ ಹಡಪದ ಮತ್ತು ರೇಖಾ ದೊಡಮನಿ ಅವರು ಅಂತರ್ಜಾತಿ ವಿವಾಹವಾಗಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ 5 ಲಕ್ಷ ಪ್ರೋತ್ಸಾಹಧನ ಮತ್ತು ಒಂದು ನಿವೇಶನ ಮಂಜೂರಾತಿ ಪ್ರಮಾಣ ಪತ್ರ ಇದೇ ಸಂದರ್ಭದಲ್ಲಿ ನೀಡಲಾಯಿತು. ಇಬ್ಬರು ಮಾಜಿ ದೇವದಾಸಿಯರ ಮಕ್ಕಳ ಮದುವೆಗೆ ಹೈಕೋರ್ಟ್ನ ನ್ಯಾ| ಅರವಿಂದಕುಮಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಹಂಚಾಟೆ, ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶ ಅನಿಲ ಕಟ್ಟಿ, ಹಾಗೂ ಇತರ ಅಧಿಕಾರಿಗಳು ಸಾಕ್ಷಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ