ಶೈಕ್ಷಣಿಕ ಸಾಲದ ಸಬ್ಸಿಡಿ ನೀಡಲು ನಿರಾಕರಿಸಿದ ಬ್ಯಾಂಕ್‌ ವಿರುದ್ಧ ತೀರ್ಪು

35 ಸಾ. ರೂ. ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Team Udayavani, Jun 14, 2022, 5:00 AM IST

ಶೈಕ್ಷಣಿಕ ಸಾಲದ ಸಬ್ಸಿಡಿ ನೀಡಲು ನಿರಾಕರಿಸಿದ ಬ್ಯಾಂಕ್‌ ವಿರುದ್ಧ ತೀರ್ಪು

ಬೆಂಗಳೂರು: ಆಸ್ತಿ ಭದ್ರತೆ ಆಧಾರದಲ್ಲಿ ಶೈಕ್ಷಣಿಕ ಸಾಲ ಪಡೆದ ವೈದ್ಯರೊಬ್ಬರಿಗೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕೊಡಮಾಡುವ ಸಾಲ ಸಬ್ಸಿಡಿ ಸೌಲಭ್ಯ ನೀಡಲು ನಿರಾಕರಿಸಿದ ಬ್ಯಾಂಕ್‌ 35 ಸಾವಿರ ರೂ. ಪರಿಹಾರ ನೀಡಬೇಕು ಎಂದು ಬೆಂಗಳೂರು ನಗರ 1ನೇ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ನ್ಯಾಯಾಲಯವು ಈ ಆದೇಶವನ್ನು ನೀಡಿದೆ.

ಎಚ್‌ಎಂಟಿ ಲೇಔಟ್‌ ನಿವಾಸಿ ಯಾದ ದೂರುದಾರ ವೈದ್ಯ ಹಾಗೂ ಆತನ ತಂದೆ 2014ರಲ್ಲಿ 15 ಲಕ್ಷ ರೂ. ವೈದ್ಯಕೀಯ ಶಿಕ್ಷಣ ಸಾಲಕ್ಕಾಗಿ 95 ಲಕ್ಷ ರೂ. ಮೌಲ್ಯದ ಮನೆಯನ್ನು ಭದ್ರತೆಯಾಗಿ ಇರಿಸಿದ್ದರು. ವಿದ್ಯಾರ್ಥಿಯ ತಂದೆಯ ವಾರ್ಷಿಕ ಆದಾಯ 95,000 ರೂ. ಎಂದು ತಹಶೀಲ್ದಾರ್‌ ಪ್ರಮಾಣ ಪತ್ರ ನೀಡಿದ್ದು, ಬ್ಯಾಂಕ್‌ ಅಧಿಕಾರಿಗಳು ಕೂಡ ಸಾಲಾಪೇಕ್ಷಿ ಕುಟುಂಬವು ಆರ್ಥಿಕವಾಗಿ ಹಿಂದು ಳಿದಿರುವುದಾಗಿ ಒಪ್ಪಿ ಕೊಂಡಿತ್ತು.

ವೈದ್ಯರು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳಿದ್ದು, 2020ರಲ್ಲಿ ಸಾಲದ ಮೊತ್ತ, ಬಡ್ಡಿ ಹಾಗೂ ಇತರ ಶುಲ್ಕಗಳನ್ನು ಪೂರ್ಣ ಪ್ರಮಾಣದಲ್ಲಿ ಪಾವತಿಸಿದ್ದಾರೆ. ಈ ನಡುವೆ ದೂರುದಾರರು ಶೈಕ್ಷಣಿಕ ಸಾಲಕ್ಕೆ ಸಬ್ಸಿಡಿ ನೀಡುವಂತೆ ಬ್ಯಾಂಕ್‌ಗೆ ಮನವಿ ಮಾಡಿದೆ. ಆದರೆ ಬ್ಯಾಂಕ್‌ ನಿರಾಕರಿಸಿ, ಸಾಲ ಪಡೆಯುವ ಸಂದರ್ಭದಲ್ಲಿ ಕುಟುಂಬದವರು 15 ಲಕ್ಷ ರೂ. ಸಾಲಕ್ಕೆ 95 ಲಕ್ಷ ರೂ. ಮೌಲ್ಯ ಮನೆಯ ಭದ್ರತೆಯನ್ನು ನೀಡಿ ರುವುದನ್ನೇ ಮುಂದಿಟ್ಟು ಅವರು ಸಬ್ಸಿಡಿಗೆ ಅರ್ಹರಲ್ಲ ಎಂದಿತ್ತು.

ವಿಚಾರಣೆ ವೇಳೆ ಬ್ಯಾಂಕ್‌ ಪರ ನ್ಯಾಯವಾದಿ ವಾದ ಮಂಡಿಸಿ, ವೈದ್ಯರಿಗೆ ಈಗ ಸಾಲ ಮರು ಪಾವತಿಸುವ ಆರ್ಥಿಕ ಶಕ್ತಿ ಬಂದಿದೆ. ಅವರು ಈಗ ಆರ್ಥಿಕವಾಗಿ ಹಿಂದುಳಿದ ವಿಭಾಗಕ್ಕೆ ಸೇರುವುದಿಲ್ಲ ಎಂದು ಹೇಳಿದರು.

7.5ರಿಂದ 20 ಲಕ್ಷ ರೂ. ವರೆಗಿನ ಸಾಲಕ್ಕೆ ಆಸ್ತಿ ಭದ್ರತೆಯ ಅಗತ್ಯವಿದೆ. ದೂರುದಾರರು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದವರಾಗಿದ್ದರೆ. ಕುಟುಂಬದ ವಾರ್ಷಿಕ 4.5 ಲಕ್ಷ ರೂ. ಕಡಿಮೆ ಇದೆ. ಹೀಗಾಗಿ .ಪರಿಹಾರ ನೀಡಲು ಸೂಚಿಸಿದೆ.

ಟಾಪ್ ನ್ಯೂಸ್

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.