ಸಿಎಂ ಪರಿಹಾರ ನಿಧಿಗೆ ಸಚಿವ ನಾರಾಯಣ ಗೌಡ ವೈಯಕ್ತಿಕ 5 ಲಕ್ಷ ರೂ. ನೆರವು
Team Udayavani, Apr 10, 2020, 3:33 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ವಿರುದ್ಧ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಸಚಿವ ಡಾ. ಕೆ ಸಿ ನಾರಾಯಣಗೌಡ ಅವರು ವೈಯಕ್ತಿಕವಾಗಿ 5 ಲಕ್ಷ ರೂ. ನೀಡಿದ್ದಾರೆ.
ಇಂದು ಸಿಎಂ ನಿವಾಸದಲ್ಲಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿದ ಸಚಿವ ಡಾ. ಕೆ ಸಿ ನಾರಾಯಣಗೌಡ ರೂ. 5 ಲಕ್ಷ ದ ಚೆಕ್ ಅನ್ನು ಹಸ್ತಾಂತರಿಸಿದರು.
ರಾಜ್ಯದಲ್ಲಿ ಇದುವರೆಗೆ 207 ಜನರಿಗೆ ಕೋವಿಡ್-19 ಸೋಂಕು ತಾಗಿದ್ದು, ಅದರಲ್ಲಿ 30 ಜನರು ಗುಣಮುಖರಾಗಿದ್ದಾರೆ. ಒಟ್ಟು ಆರು ಜನರು ಸೋಂಕಿನ ಕಾರಣದಿಂದ ರಾಜ್ಯದಲ್ಲಿ ಮೃತಪಟ್ಟಿದ್ದಾರೆ.