
ಬಿಜೆಪಿ ನಮಗೆ ಎಲ್ಲವನ್ನೂ ಕೊಟ್ಟಿದೆ, ಬೇರೆ ಪಕ್ಷಕ್ಕೆ ನಾವ್ಯಾರೂ ಅರ್ಜಿ ಹಾಕಿಲ್ಲ: ಗೋಪಾಲಯ್ಯ
Team Udayavani, Jan 27, 2022, 12:21 PM IST

ಬೆಂಗಳೂರು: ಬಿಜೆಪಿಗೆ ವಲಸೆ ಬಂದ ಸಚಿವರು ಮತ್ತೆ ಬೇರೆ ಪಕ್ಷ ಸೇರುತ್ತಾರೆಂಬ ಚರ್ಚೆಗೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಪ್ರತಿಕ್ರಿಯೆ ನೀಡಿದ್ದು, “ಯಾರು ವದಂತಿ ಹಬ್ಬಿಸುತ್ತಿದ್ದಾರೋ ಅವರನ್ನೇ ಕೇಳಿ” ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮಾತಿನಂತೆ ನಡೆದುಕೊಂಡಿದ್ದಾರೆ, ಸೋತವರಿಗೂ ಎಂಎಲ್ ಸಿ ಮಾಡಿ ಸ್ಥಾನಮಾನ ಕೊಟ್ಟಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ:ಸಿದ್ದುಗೆ ಹೈಕಮಾಂಡ್ ಟಕ್ಕರ್ : ಮೇಲ್ಮನೆ ವಿಪಕ್ಷ ನಾಯಕತ್ವದ ಹಿಂದೆ ಲೆಕ್ಕಾಚಾರ
ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ. ಕೋವಿಡ್ ಮಧ್ಯೆಯೂ ನಾವೆಲ್ಲ ಕೆಲಸ ಮಾಡುತ್ತಿದ್ದೇವೆ. ಬೇರೆ ಪಕ್ಷಕ್ಕೆ ಹೋಗುವ ಸಂದರ್ಭ ಬರುವುದಿಲ್ಲ. ನಾವ್ಯಾರು ಬೇರೆ ಪಕ್ಷಕ್ಕೆ ಅರ್ಜಿ ಹಾಕಿಲ್ಲ ಎಂದು ಹೇಳಿದರು.
ಬೊಮ್ಮಾಯಿ ನೇತೃತ್ವದಲ್ಲೇ ಅಧಿಕಾರಕ್ಕೆ ಬರುತ್ತೇವೆ. ನನಗೆ ಬಿಜೆಪಿ ಎಲ್ಲವನ್ನೂ ಕೊಟ್ಟಿದೆ. ಸಚಿವ ಸ್ಥಾನ ನೀಡಿದೆ, ಎರಡು ಜಿಲ್ಲೆ ಉಸ್ತುವಾರಿ ಕೊಟ್ಟಿದ್ದಾರೆ. ನಮಗೆ ಇನ್ನೇನು ಕೊಡೇಕು. ನಮ್ಮಲ್ಲಿಹೋಗುವವರು ಯಾರು ಇಲ್ಲ. ಬೇರೆ ಪಕ್ಷದಿಂದ ಬರುವವರ ಬಗ್ಗೆ ಗೊತ್ತಿಲ್ಲ, ಅದರ ಬಗ್ಗೆ ನೀವು ರಮೇಶಣ್ಣನನ್ನೇ ಕೇಳಬೇಕು ಎಂದು ಸಚಿವ ಗೋಪಾಲಯ್ಯ ಹೇಳಿದರು.
ಸಚಿವ ಮುನಿರತ್ನ ಬೆಂಬಲ: ಗೋಪಾಲಯ್ಯ ಏನು ಹೇಳಿದ್ದಾರೋ ಅದಕ್ಕೆ ನನ್ನ ಸಹಮತವಿದೆ. ನಾವ್ಯಾರು ಎಲ್ಲಿಗೂ ಹೋಗುವುದಿಲ್ಲ. ಯಾವ ನಾಯಕರ ಸಂಪರ್ಕದಲ್ಲೂ ಇಲ್ಲ ಎಂದು ಸಚಿವ ಮುನಿರತ್ನ ಹೇಳಿದರು.
ನಾವು ಯಾರನ್ನೂ ವಾಪಸ್ ಬಿಟ್ಟುಕೊಳ್ಳುವುದಿಲ್ಲವೆಂದು ಸಿದ್ದರಾಮಯ್ಯ ಈ ನ್ಯಾಯ ದೇಗುಲದಲ್ಲೇ ಹೇಳಿದ್ದಾರೆ. ಹಾಗಾಗಿ ನಾವ್ಯಾರು ಕಾಂಗ್ರೆಸ್ ಹೋಗುವುದಿಲ್ಲ. ಸಿದ್ದರಾಮಯ್ಯನವರ ಸಂಪರ್ಕದಲ್ಲಿ ಯಾರಿದ್ದಾರೆ ಗೊತ್ತಿಲ್ಲ, ನಾವು ಅಲ್ಲಿಗೆ ಹೋದರೆ ಸಿದ್ದರಾಮಯ್ಯ ಅಲ್ಲಿರಲ್ಲ ಎಂದರು.
ನೀವು ಬೇರೆಯವರನ್ನ ಸೆಳೆಯೋ ಪ್ರಯತ್ನ ಮಾಡುತ್ತಿದ್ದೀರಾ ಎಂಬ ಪ್ರಶ್ನೆಗೆ ಪ್ರಶ್ನೆಗೆ, “ಹೈಕಮಾಂಡ್ ಹೇಳಿದರೆ ಮುಂದೆ ನೋಡೋಣ” ಎಂದು ಸಚಿವ ಮುನಿರತ್ನ ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

Politics: ಐದು ತಿಂಗಳಲ್ಲಿ ಸರ್ಕಾರ ಬಹಳ ದೊಡ್ಡ ಯಡವಟ್ಟು ಮಾಡ್ಕೊಂಡಿದೆ: ಕೇಂದ್ರ ಸಚಿವೆ ಶೋಭಾ

Karnataka: ಕೈಗೆ ಲಿಂಗಾಯತ ಸಂಕಷ್ಟ- ಡಿಸಿಎಂ ಹುದ್ದೆ ತಣ್ಣಗಾದ ಬೆನ್ನಲ್ಲೇ ಮತ್ತೂಂದು ವಿವಾದ

WhatsApp, Telegram ಆ್ಯಪ್ ವಂಚನೆ ಜಾಲ ಬಯಲಿಗೆ
MUST WATCH
ಹೊಸ ಸೇರ್ಪಡೆ

Asian Games: ಶೂಟಿಂಗ್ ಟ್ರ್ಯಾಪ್ ಪುರುಷರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

Cleaning: ಅರಣ್ಯ ಇಲಾಖೆ ವತಿಯಿಂದ ಚಾರ್ಮಾಡಿ ಘಾಟ್ ನಲ್ಲಿ ಸ್ವಚ್ಚತಾ ಕಾರ್ಯ

ಸಚಿವ ಸ್ಥಾನ ಪಡೆದ ಬಳಿಕ ಮೊದಲ ಸಲ ಮತಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಡಾ. ಶರಣಪ್ರಕಾಶ ಪಾಟೀಲ

Dr. TMA Pai Convention Centre; 3 ದಿನಗಳ “ಬಿಗ್ ಬ್ರ್ಯಾಂಡ್ಸ್ ಎಕ್ಸ್ಪೋಗೆ’ ಚಾಲನೆ

Health: ಸೋಶಿಯಲ್ ಆ್ಯಂಕ್ಸೈಟಿ ಡಿಸಾರ್ಡರ್