ಮಾಡಾಳು ಆಸ್ತಿ ವಿವರ ಕೆದಕುತ್ತಿರುವ ಲೋಕಾಯುಕ್ತರು

ಜಪ್ತಿ ಮಾಡಲಾದ 8.12 ಕೋಟಿ ರೂ. ದುಡ್ಡಿನ ಮೂಲಕ್ಕೆ ದಾಖಲೆ ಸಲ್ಲಿಸಲು ಲೋಕಾ ಸೂಚನೆ

Team Udayavani, Mar 5, 2023, 6:55 AM IST

ಮಾಡಾಳು ಆಸ್ತಿ ವಿವರ ಕೆದಕುತ್ತಿರುವ ಲೋಕಾಯುಕ್ತರು

ಬೆಂಗಳೂರು: ಕೆಎಸ್‌ಡಿಎಲ್‌ನ ಟೆಂಡರ್‌ ಅಕ್ರಮ ಬಯಲಿಗೆಳೆದು ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿರುವ ಲೋಕಾಯುಕ್ತ ಪೊಲೀಸರು ಇದೀಗ ನಿಗೂಢವಾಗಿರುವ ಕೆಎಸ್‌ಡಿಎಲ್‌ನ ಮಾಜಿ ಅಧ್ಯಕ್ಷ ಮಾಡಾಳು ವಿರೂಪಾಕ್ಷಪ್ಪ ಮತ್ತು ಅವರ ಕುಟುಂಬ ಹೊಂದಿರುವ ಕೋಟ್ಯಂತರ ರೂ. ಮೌಲ್ಯದ ಆಸ್ತಿಯ ವಿವರ ಕೆದಕುತ್ತಿದ್ದಾರೆ.

ಮಾಡಾಳು ವಿರೂಪಾಕ್ಷಪ್ಪ ಕಳೆದ ಕೆಲವು ವರ್ಷಗಳಿಂದ ಟೆಂಡರ್‌ನಲ್ಲಿ ಅಕ್ರಮ ಸೇರಿ ಇತರ ಅವ್ಯವಹಾರಗಳಲ್ಲಿ ತೊಡಗಿ ನೂರಾರು ಕೋಟಿ ರೂ. ಆಸ್ತಿ ಮಾಡಿರುವುದು ಮೆಲ್ನೋಟಕ್ಕೆ ಪತ್ತೆಯಾಗಿದೆ. ಇದರ ಬೆನ್ನಲ್ಲೇ ದಾವಣಗೆರೆ, ಶಿವಮೊಗ್ಗ, ವಿಜಯನಗರ, ಚಿತ್ರದುರ್ಗದಲ್ಲಿ ಕುಟುಂಬ ಸದಸ್ಯರ ಹೆಸರಿನಲ್ಲಿ ಮಾಡಿಟ್ಟಿರುವ ಕೋಟಿ-ಕೋಟಿ ಮೌಲ್ಯದ ಅಪಾರ ಆಸ್ತಿಯ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಇದರ ದಾಖಲೆಗಾಗಿ ಶೋಧ ನಡೆಸುತ್ತಿದ್ದಾರೆ.

ಅಪಾರ ಪ್ರಮಾಣದ ಬೇನಾಮಿ ಆಸ್ತಿ ಹೊಂದಿರುವ ಶಂಕೆ ವ್ಯಕ್ತವಾಗಿದೆ. ಇದರ ಜತೆಗೆ ಶಾಸಕ ವಿರೂಪಾಕ್ಷಪ್ಪ ಅವರ ಸಂಜಯನಗರದ ನಿವಾಸದಲ್ಲಿ ಪತ್ತೆಯಾದ 6.10 ಕೋಟಿ ರೂ., ಪುತ್ರ ಪ್ರಶಾಂತ್‌ ಖಾಸಗಿ ಕಚೇರಿಯಲ್ಲಿ ಸಿಕ್ಕಿದ್ದ 2.2 ಕೋಟಿ ರೂ.ಗೆ ದಾಖಲೆ ಒದಗಿಸುವಂತೆ ಕುಟುಂಬ ಸದಸ್ಯರಿಗೆ ಸೂಚಿಸಿದ್ದಾರೆ.

ಅಕ್ರಮ ಹಣ ಸಿಕ್ಕಿದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಧ್ಯ ಪ್ರವೇಶಿಸಲಿದ್ದಾರೆ. ಇದೀಗ ಶಾಸಕ ವಿರೂಪಾಕ್ಷಪ್ಪಗೆ ಭಾರೀ ಸಂಕಷ್ಟ ಎದುರಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಲೋಕಾಯುಕ್ತ ಪೊಲೀಸರು ಮನೆಯಲ್ಲಿ ಹಾಗೂ ಕಚೇರಿಯಲ್ಲಿ ಸಿಕ್ಕಿರುವ ಅಪಾರ ಪ್ರಮಾಣದ ದಾಖಲೆಗಳು, ಕಡತಗಳ ಪರಿಶೀಲನೆ ಮಾಡುತ್ತಿದ್ದಾರೆ.

ಕುಟುಂಬ ಸದಸ್ಯರಿಗೂ ನೋಟಿಸ್‌
ಶಾಸಕರ ಕಚೇರಿ, ನಿವಾಸಕ್ಕೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್‌ ಅಂಟಿಸಿದ್ದಾರೆಂದು ತಿಳಿದು ಬಂದಿದೆ. ಪ್ರಶಾಂತ್‌ ಬಂಧನಕ್ಕೂ ಮೊದಲು ಸಹೋದರ ಮಲ್ಲಿಕಾರ್ಜುನ್‌ ಅವರಿಗೆ ಸೇರಿದ 2 ಕಂಪನಿಗಳ ಬ್ಯಾಂಕ್‌ ಖಾತೆಗೆ 94 ಲಕ್ಷ ರೂ. ವರ್ಗಾವಣೆಯಾಗಿರುವ ಸುಳಿವು ಸಿಕ್ಕಿದೆ. ಈ ನಿಟ್ಟಿನಲ್ಲಿ ಮಲ್ಲಿಕಾರ್ಜುನ್‌ ಸೇರಿ ಕುಟುಂಬದ ಇತರ ಸದಸ್ಯರಿಗೂ ನೋಟಿಸ್‌ ನೀಡಿ ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಪ್ರಶಾಂತ್‌ ಮಾಡಾಳು ಅವರ 5ಕ್ಕೂ ಅಧಿಕ ಬ್ಯಾಂಕ್‌ ಖಾತೆ ಮಾಹಿತಿ ಕಲೆ ಹಾಕಿದ್ದು, ಈ ಖಾತೆಗಳಲ್ಲಿ ಕೋಟ್ಯಂತರ ರೂ. ವ್ಯವಹಾರ ನಡೆಸಿರುವುದು ತಿಳಿದು ಬಂದಿದೆ. ಲೋಕಾ ದಾಳಿಗೆ ಸ್ವಲ್ಪ ದಿನಗಳ ಹಿಂದೆ ಪ್ರಶಾಂತ್‌ 1 ಬ್ಯಾಂಕ್‌ ಖಾತೆಗೆ 60 ಲಕ್ಷ ರೂ.ಗೂ ಅಧಿಕ ಹಾಗೂ ಮತ್ತೂಂದು ಖಾತೆಗೆ 30 ಲಕ್ಷ ರೂ.ಗೂ ಅಧಿಕ ಹಣ ಜಮೆ ಆಗಿರುವ ಸುಳಿವು ಸಿಕ್ಕಿದೆ. ಈ ಹಣದ ಮೂಲದ ದಾಖಲೆ ಒದಗಿಸುವಂತೆ ಕೇಳಿದ್ದಾರೆಂದು ತಿಳಿದು ಬಂದಿದೆ.

ಕೋಡ್‌ವರ್ಡ್‌ ಹಿಂದೆ ಬಿದ್ದ ತನಿಖಾಧಿಕಾರಿಗಳು
ಪ್ರಶಾಂತ್‌ ಮಾಡಾಳು ಡೈರಿಯಲ್ಲಿದ್ದ ಕೋಡ್‌ವರ್ಡ್‌ ಹಿಂದೆ ಬಿದ್ದಿರುವ ಲೋಕಾಯುಕ್ತ ಪೊಲೀಸರು ಕೋಡ್‌ ವರ್ಡ್‌ ಪರಿಶೀಲಿಸಿ ಯಾರಿಗೆ ಸಂಬಂಧಿಸಿರುವುದು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಡೈರಿ ಪತ್ತೆಯಾದ ಹಿನ್ನೆಲೆ ಹಲವರಿಗೆ ನಡುಕ ಶುರುವಾಗಿದ್ದು, ಪ್ರಶಾಂತ್‌ ಜತೆ ವ್ಯವಹಾರ ಮಾಡಿದವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ. ಪ್ರಶಾಂತ್‌ ಅವರಿಗೆ ಲಂಚದ ಹಣ ಕೊಡಲು ಬಾಕಿ ಉಳಿಸಿಕೊಂಡವರ ಹೆಸರುಗಳು ಡೈರಿಯಲ್ಲಿ ಉಲ್ಲೇಖಿಸಿರುವ ಶಂಕೆ ವ್ಯಕ್ತವಾಗಿದೆ.

ಉನ್ನತಾಧಿಕಾರಿಯಾಗಲು ಹುನ್ನಾರ
ಈ ನಡುವೆ ಪ್ರಶಾಂತ್‌ ಲೋಕಾಯುಕ್ತದಲ್ಲೇ ಉನ್ನತ ಅಧಿಕಾರಿಯಾಗಲು ಹಸರಸಾಹಸ ಮಾಡಿದ್ದ ಎನ್ನಲಾಗಿದೆ. ಪ್ರಶಾಂತ್‌ ಮಾಡಾಳು ಈ ಹಿಂದೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಲ್ಲಿ ಹಣಕಾಸು ಸಲಹೆಗಾರನಾಗಿ ಕೆಲಸ ಮಾಡಿದ್ದ. ಲೋಕಾಯುಕ್ತಕ್ಕೆ ಮತ್ತೆ ಅಧಿಕಾರ ಸಿಕ್ಕ ಬಳಿಕ ಮತ್ತದೇ ಹುದ್ದೆಗೆ ಯತ್ನ ನಡೆಸಿದ್ದ. ಹಿಂದೆ ಎಸಿಬಿಯಲ್ಲಿದ್ದ ಹಿರಿಯ ಅಧಿಕಾರಿಗಳ ಜತೆಗೂ ಉತ್ತಮ ಭಾಂದವ್ಯ ಹೊಂದಿದ್ದ ಎಂದು ತಿಳಿದು ಬಂದಿದೆ.

ಶಾಸಕರಿಗೆ ತೀವ್ರ ಶೋಧ
ಮಾಡಾಳು ವಿರೂಪಾಕ್ಷಪ್ಪಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲು ಲೋಕಾ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ಪುತ್ರ ಪ್ರಶಾಂತ್‌ ಮಾಡಾಳು ಬಂಧನವಾಗುತ್ತಿದ್ದಂತೆ 2 ದಿನಗಳಿಂದ ಮೊಬೈಲ್‌ ಸ್ವಿಚ್‌ಅಫ್ ಮಾಡಿಕೊಂಡು ಮನೆಯವರಿಗೂ ಮಾಹಿತಿ ನೀಡದೆ ನಾಪತ್ತೆಯಾಗಿದ್ದಾರೆ. ಇದರ ಬೆನ್ನಲ್ಲೇ ಲೋಕಾಯುಕ್ತದ 4 ತಂಡಗಳು ಬೆಂಗಳೂರು, ದಾವಣಗೆರೆ, ಚೆನ್ನಗಿರಿ ಸೇರಿ ಬೇರೆ ಬೇರೆ ಕಡೆಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಗುಪ್ತಚರ ಇಲಾಖೆಯೂ ಹುಡುಕಾಟ ನಡೆಸುತ್ತಿದೆ. ಕರ್ತವ್ಯ ಲೋಪ ಎಸಗಿರುವ ಪ್ರಶಾಂತ್‌ರನ್ನು ಅಮಾನತುಗೊಳಿಸುವಂತೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಅವರು ಲೋಕಾಯುಕ್ತ ಪೊಲೀಸರಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

tdy-12

Love Story: ಪತ್ನಿಯನ್ನೇ ಪ್ರಿಯಕರನ ಜೊತೆ ಮದುವೆ ಮಾಡಿಸಿಕೊಟ್ಟ ಪತಿ ಮಹಾಶಯ.!

Shimoga; ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಕೊನೆಯುಸಿರೆಳೆದ ಲೈನ್ ಮ್ಯಾನ್

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

10–fusion-anger

UV Fusion: ಅತಿಯಾದ ಕೋಪ ಹಾನಿಕರ

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Exam 9, 11ನೇಗೂ ಬೋರ್ಡ್‌ ಪರೀಕ್ಷೆ: ಈ ವರ್ಷದಿಂದಲೇ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಲು ಆದೇಶ

Exam 9, 11ನೇಗೂ ಬೋರ್ಡ್‌ ಪರೀಕ್ಷೆ: ಈ ವರ್ಷದಿಂದಲೇ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಲು ಆದೇಶ

Karnataka ಜೆಡಿಎಸ್‌ನಲ್ಲಿ ರಾಜೀನಾಮೆ ಪರ್ವ

Karnataka ಜೆಡಿಎಸ್‌ನಲ್ಲಿ ರಾಜೀನಾಮೆ ಪರ್ವ

ksrtc bus

KSRTC, BMTC ಗೆ ಪ್ರಶಸ್ತಿ

N M SURESH

Karnataka: ಫಿಲಂ ಚೇಂಬರ್‌ಗೆ ಸುರೇಶ್‌ ನೂತನ ಅಧ್ಯಕ್ಷ

MUST WATCH

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

ಹೊಸ ಸೇರ್ಪಡೆ

tdy-12

Love Story: ಪತ್ನಿಯನ್ನೇ ಪ್ರಿಯಕರನ ಜೊತೆ ಮದುವೆ ಮಾಡಿಸಿಕೊಟ್ಟ ಪತಿ ಮಹಾಶಯ.!

11-theerthahalli

Theerthahalli: ಮಾಜಿ ವಿಧಾನ ಪರಿಷತ್ ಸದಸ್ಯ ಬಿ.ಎಸ್. ವಿಶ್ವನಾಥ್ ನಿಧನ

Shimoga; ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಕೊನೆಯುಸಿರೆಳೆದ ಲೈನ್ ಮ್ಯಾನ್

Kannada Cinema; ‘ಯಾವೋ ಇವೆಲ್ಲಾ’- ಇದು ಹೊಸಬರ ಕನಸು

Kannada Cinema; ‘ಯಾವೋ ಇವೆಲ್ಲಾ’- ಇದು ಹೊಸಬರ ಕನಸು

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.