‘ಪರ್ಸೆಂಟೇಜ್’ ತನಿಖೆಯಾದರೆ ಕಾಂಗ್ರೆಸ್ ನವರೇ ಸಿಕ್ಕಿ ಬೀಳುತ್ತಾರೆ: ಸಚಿವ ಈಶ್ವರಪ್ಪ
Team Udayavani, Dec 16, 2021, 11:40 AM IST
ಸುವರ್ಣಸೌಧ (ಬೆಳಗಾವಿ): ಕಾಂಗ್ರೆಸ್ ನವರು ಬದುಕಿದ್ದಾರೆ ಎಂದು ತೋರಿಸಲು ಸರ್ಕಾರದ ವಿರುದ್ದ 40 ಪರ್ಸೆಂಟೇಜ್ ಆರೋಪಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಂಗ ತನಿಖೆ ಅಥವಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೂಲಕ ಬೇಕಾದರೆ ತನಿಖೆಯಾಗಲಿ. ನಾವು ತನಿಖೆಯನ್ನು ಸ್ವಾಗತ ಮಾಡುತ್ತೇವೆ, ತನಿಖೆಯಿಂದ ಯಾರು ಎಷ್ಟು ಪರ್ಸೆಂಟೇಜ್ ತೆಗೆದುಕೊಂಡಿದ್ದಾರೆಂದು ಗೊತ್ತಾಗುತ್ತದೆ. ಕಾಂಗ್ರೆಸ್ ನವರೆ ಸಿಕ್ಕಿಬೀಳುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ:ಕಾಂಗ್ರೆಸ್ ನವರು ಭ್ರಷ್ಟಾಚಾರದ ಪಿತಾಮಹರು: ಸಚಿವ ಅಶೋಕ್
ಈ ಬಗ್ಗೆ ಅಧಿವೇಶನದಲ್ಲಿ ಕಾಂಗ್ರೆಸ್ ಚರ್ಚೆ ಮಾಡಲಿ. ಸರ್ಕಾರ ಚರ್ಚೆಗೆ ಸಿದ್ದವಿದೆ. ಯಾವ ಇಲಾಖೆ ಯಾವ ಯೋಜನೆಗೆ ಎಷ್ಟು ಕೊಟ್ಟಿದ್ದಾರೆಂದು ಹೇಳಿದ್ದಾರಾ? ಆದರೆ ಕಾಂಗ್ರೆಸ್ ನವರು ಟ್ರ್ಯಾಕ್ಟರ್ ರ್ಯಾಲಿ ಮಾಡುತ್ತಿರುವುದು ನಾಟಕ ಅಷ್ಟೇ. ಈ ಪರ್ಸೆಂಟೇಜ್ ಬಗ್ಗೆ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ನವರು ಕೇಳುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಗಳು ತೀರ್ಮಾನ ಮಾಡುತ್ತಾರೆ. ಆದರೆ ಈ ಬಗ್ಗೆ ತನಿಖೆ ಆದರೆ ಕಾಂಗ್ರೆಸ್ ನವರಿಗೆ ಶಿಕ್ಷೆ ಆಗುತ್ತದೆ ಎಂದು ಸಚಿವ ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ