K S Eshwarappa: ಕಳೆದ ಬಾರಿಯೇ ಸ್ಪರ್ಧಿಸಿದ್ದರೆ ಎಂಎಲ್ಎ ಆಗುತ್ತಿದ್ದೆ; ಈಶ್ವರಪ್ಪ
Team Udayavani, Mar 21, 2024, 8:35 PM IST
ಶಿವಮೊಗ್ಗ: ಪಕ್ಷ ಸರಿ ಮಾಡಲು ನಾನು ಸ್ಪರ್ಧಿಸುತ್ತಿದ್ದು, ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಕಳೆದ ಬಾರಿಯೇ ಗಟ್ಟಿ ನಿರ್ಧಾರ ಮಾಡಿ ಸ್ಪರ್ಧಿಸಿದ್ದರೆ ಎಂಎಲ್ಎ ಆಗುತ್ತಿದ್ದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸಂಸ್ಕೃತಿ ಬಿಜೆಪಿಗೆ ಬಂದಿದೆ. ಕಾರ್ಯಕರ್ತರಿಗೆ ಅವಮಾನ ಆಗಲು ಬಿಡುವುದಿಲ್ಲ. ಭಗವಂತ ಲೋಕಸಭೆಗೆ ಸ್ಪರ್ಧಿಸುವಂತೆ ಮಾಡಿದ್ದಾನೆ. ಅಭಿಮಾನಿಗಳ ನಂಬಿಕೆಗೆ ಚ್ಯುತಿ ತರುವುದಿಲ್ಲ. ಮೋದಿ ಹೇಳುತ್ತಿರುವಂತೆ ಒಂದು ಕುಟುಂಬದ ಕೈಯಲ್ಲಿ ಪಕ್ಷ ಇರಬಾರದು ಎಂದರು.
ಯಾರಿಗೂ ಕೇಳದೆ ಶೋಭಾರನ್ನು ನಿಲ್ಲಿಸುತ್ತೇವೆ, ಗೆಲ್ಲಿಸಬೇಕು ಎಂದು ಬಿಎಸ್ವೈ ಹೇಳಿದ್ದರು. ನಾನು ಇಡೀ ರಾಜ್ಯದ ಕಾರ್ಯಕರ್ತರ ನೋವಿನ ಧ್ವನಿಯಾಗಿ ಸ್ಪರ್ಧಿಸುತ್ತಿದ್ದೇನೆ. ಲಿಂಗಾಯತ ಯತ್ನಾಳ್ ಬೇಡ, ಒಕ್ಕಲಿಗರ ಸಿ.ಟಿ.ರವಿ ಬೇಡ, ಕುರುಬ ಸಮಾಜದ ನಾನೂ ಬೇಡ. ಬಿಎಸ್ವೈಗೆ ಅವರ ಮಗ ಮಾತ್ರ ಬೇಕು ಎಂದರು.
ಈಗಾಗಲೇ ಮಠಾಧೀಶರು ಆಶೀರ್ವಾದ ಮಾಡಿದ್ದಾರೆ. ಸಿಗಂಧೂರು ಚೌಡೇಶ್ವರಿ ದೇವಾಲಯದಲ್ಲಿ ಮಾರುತಿಗೆ ಪೂಜೆ ಮಾಡಿದಾಗ ಪ್ರಸಾದ ಸಿಕ್ಕಿದೆ ಎಂದು ಹೇಳಿದರು.
ಅಪ್ಪ, ಮಕ್ಕಳು ಎಷ್ಟು ದುಡ್ಡು ಸುರಿದರೋ ಗೊತ್ತಿಲ್ಲ. ವಿಜಯೇಂದ್ರ ಕೇವಲ 11 ಸಾವಿರ ಬಹುಮತದಲ್ಲಿ ಗೆದ್ದರು. ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿರುವುದರಿಂದ ಹಳ್ಳಿ ಹಳ್ಳಿಗಳಲ್ಲಿ ಚರ್ಚೆ ಆಗುತ್ತಿದೆ. ಇದನ್ನೇ ನಾನು ಬಯಸಿದ್ದೆ. ಲೋಕಸಭಾ ಚುನಾವಣೆ ಬಳಿಕ ವಿಜಯೇಂದ್ರ ಬದಲಾಗಿ ಒಳ್ಳೆಯ ರಾಜ್ಯಾಧ್ಯಕ್ಷರು ಬರುತ್ತಾರೆ.– ಕೆ.ಎಸ್.ಈಶ್ವರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ