ವಿಮ್ಸ್ ಆಸ್ಪತ್ರೆ ಘಟನೆ ತಪ್ಪಿತಸ್ಥರ ವಿರುದ್ಧ ಕ್ರಮ ಶತಸಿದ್ಧ: ಸಚಿವ ಡಾ.ಕೆ.ಸುಧಾಕರ್
Team Udayavani, Sep 17, 2022, 5:37 PM IST
ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳು ಸಾವಿಗೀಡಾದ ಘಟನೆ ಕುರಿತು ತನಿಖೆ ನಡೆಯುತ್ತಿದೆ. ಈ ಘಟನೆಗೆ ಕಾರಣವಾದವರ ವಿರುದ್ಧ ನೂರಕ್ಕೆ ನೂರು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳು ಸಾವಿಗೀಡಾದ ಕೂಡಲೇ ಡಾ.ಸ್ಮಿತಾ ಅವರ ಅಧ್ಯಕ್ಷತೆಯಲ್ಲಿ ಉನ್ನತ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಸಮಿತಿಯವರು ನಿನ್ನೆ ಇಡೀ ದಿನ ಆಸ್ಪತ್ರೆಯಲ್ಲಿದ್ದು ಮಾಹಿತಿ ಪಡೆದಿದ್ದಾರೆ. ಇನ್ನೂ ಕೆಲ ಎಲೆಕ್ಟ್ರಿಕ್ ಎಂಜಿನಿಯರ್ ಗಳನ್ನು ಅಲ್ಲಿಗೆ ಕರೆದೊಯ್ಯಬೇಕು ಎಂದು ಸಮಿತಿಯವರು ಹೇಳಿದ್ದು, ಅದಕ್ಕೂ ವ್ಯವಸ್ಥೆ ಮಾಡಲಾಗಿದೆ. ಶೀಘ್ರದಲ್ಲಿ ಈ ಕುರಿತ ವರದಿ ಬರಲಿದೆ. ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ಈ ದುರ್ಘಟನೆಯಿಂದಾಗಿ ನಮಗೂ ನೋವಾಗಿದೆ. ಸಾವಿಗೀಡಾದ ರೋಗಿಗಳು ಆಸ್ಪತ್ರೆಗೆ ದಾಖಲಾದಾಗ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಆದರೂ ಸರ್ಕಾರದಿಂದ ತನಿಖೆಯನ್ನು ನಡೆಸಲಾಗುತ್ತಿದೆ. ತನಿಖಾ ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು. ನೊಂದವರ ಕುಟುಂಬಕ್ಕೆ ಈಗಾಗಲೇ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ನಾಳೆ ನಾನೇ ಬಳ್ಳಾರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಿದ್ದೇನೆ. ಸರ್ಕಾರ ಯಾವುದೇ ಅಂಶವನ್ನು ಮುಚ್ಚಿಡುವುದಿಲ್ಲ. ಪ್ರತಿಯೊಬ್ಬರ ಜೀವವೂ ಸರ್ಕಾರಕ್ಕೆ ಬಹಳ ಮುಖ್ಯ ಎಂದರು.
ಯಾವುದೇ ಶಾಸಕರು ಹೇಳಿದಾಕ್ಷಣ ಆಸ್ಪತ್ರೆಗೆ ನಿರ್ದೇಶಕರನ್ನು ನೇಮಿಸಲು ಸಾಧ್ಯವಿಲ್ಲ. ನಿರ್ದೇಶಕರನ್ನು ನೇಮಿಸಲು ಕೆಲ ನಿಯಮಗಳಿರುತ್ತವೆ. ಅರ್ಹರಾದವರನ್ನು ಮಾತ್ರ ನಿರ್ದೇಶಕ ಸ್ಥಾನಕ್ಕೆ ನೇಮಕ ಮಾಡಲಾಗುತ್ತದೆ. ಕರುಣಾಕರ ರೆಡ್ಡಿ, ಸಚಿವ ಶ್ರೀರಾಮುಲು, ಸಚಿವ ಆನಂದ್ ಸಿಂಗ್ ಎಲ್ಲರೂ ಬಳ್ಳಾರಿಯಲ್ಲಿದ್ದಾರೆ. ಈ ಪ್ರಕ್ರಿಯೆ ಹೇಗೆ ನಡೆದಿದೆ ಎಂಬುದು ಅವರೆಲ್ಲರಿಗೂ ಗೊತ್ತಿದೆ. ಇದರಲ್ಲಿ ರಾಜಕಾರಣ ಮಾಡುವವರ ಘನತೆಯೇ ಕಡಿಮೆಯಾಗುತ್ತದೆ. ಇಂತಹ ವಿಚಾರದಲ್ಲಿ ಆರೋಪ ಮಾಡುವುದು ಬಹಳ ಸುಲಭ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್