ST ಹೋರಾಟಕ್ಕೆ RSS ಬೆಂಬಲಿಸಿದರೆ ಸಿದ್ದರಾಮಯ್ಯರಿಗೆ ಯಾಕೆ ಹೊಟ್ಟೆ ಉರಿ: ಕೆ.ವಿರೂಪಾಕ್ಷಪ್ಪ
Team Udayavani, Dec 15, 2020, 8:09 PM IST
ಗಂಗಾವತಿ: ಹಾಲುಮತ ಕುರುಬ ಜನಾಂಗದವರ ಎಸ್ಟಿ ಹೋರಾಟಕ್ಕೆ ಆರೆಸ್ಸೆಸ್ ಬೆಂಬಲ ನೀಡಿದರೆ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಯಾಕೆ ಹೊಟ್ಟೆ ಉರಿ ಎಂದು ಕುರುಬರ ಎಸ್ಟಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಪ್ರಶ್ನಿಸಿದರು.
ಗಂಗಾವತಿಯಲ್ಲಿ ಎಸ್ಟಿ ಹೋರಾಟ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಐದು ವರ್ಷಗಳ ಕಾಲ ಆಡಳಿತ ನಡೆಸಿದ ಸಿದ್ದರಾಮಯ್ಯ ಕುರುಬ ಜನಾಂಗವನ್ನು ಎಸ್ಟಿ ಮೀಸಲಾತಿಗೆ ಸೇರ್ಪಡೆ ಮಾಡುವ ಶಿಫಾರಸ್ಸನ್ನು ಕೇಂದ್ರ ಸರಕಾರಕ್ಕೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದರು. ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಎಸ್ಟಿ ಮೀಸಲಾತಿ ಮಾಡಲಿಲ್ಲ ಎಂದರು.
ಈಗ ಸಚಿವ ಈಶ್ವರಪ್ಪನವರ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದೆ. ಇದಕ್ಕೆ ರಾಜ್ಯದ ಹಾಲುಮತ ಸಮಾಜದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಸಮಾವೇಶ ಗಳಿಗೆ ಲಕ್ಷಾಂತರ ಜನ ಹರಿದು ಬರುತ್ತಿದ್ದಾರೆ. ಇದನ್ನು ಕಂಡು ಸಿದ್ದರಾಮಯ್ಯನವರು ಹೋರಾಟಕ್ಕೆ ಬೆಂಬಲಿಸಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಇದನ್ನೂ ಓದಿ : ಸಭಾಪತಿಗಳಿಗೆ ನಿರ್ಬಂಧ ಹಾಕಲು ಅಧಿಕಾರ ಕೊಟ್ಟಿದ್ದು ಯಾರು?; ಡಿ.ಕೆ ಶಿವಕುಮಾರ್
ಇಡೀ ರಾಜ್ಯದ ಹಾಲುಮತದವರು ಸಿದ್ದರಾಮಯ್ಯ ನವರನ್ನು ಬೆಂಬಲಿಸಿ ಸಿಎಂ ಮಾಡಿದ್ದಾರೆ. ಇದಕ್ಕೆ ಅಂದು ತಾವು ಸೇರಿ ಎಚ್.ವಿಶ್ವನಾಥ,ಎಚ್.ಎಂ. ರೇವಣ್ಣ ಹಾಗೂ ಕಾಂಗ್ರೆಸ್ ಮುಖಂಡರು ಬೆಂಬಲಿಸಿದ್ದರು. ಇದನ್ನು ಸಿದ್ದರಾಮಯ್ಯ ಮರೆತ್ತಿದ್ದಾರೆ ಇದು ಸರಿಯಲ್ಲ ಎಂದರು.
ಸಮಾವೇಶ: ಕಾಗಿನೆಲೆ ಪೀಠದ ಗುರುಗಳು ಮತ್ತು ನಾಲ್ಕು ವಿಭಾಗದ ಗುರುಗಳ ನೇತೃತ್ವದಲ್ಲಿ ಎಸ್ಟಿ ಹೋರಾಟ ಸಮಿತಿ ಹೋರಾಟ ನಡೆಸುತ್ತಿದೆ. ಕಾಗಿನೆಲೆ ಕ್ಷೇತ್ರದಿಂದ ಪೂಜ್ಯರ ನೇತೃತ್ವದಲ್ಲಿ ಜ.14 ರಿಂದ ಬೆಂಗಳೂರು ಚಲೋ ಪಾದಯಾತ್ರೆ ನಡೆಯಲಿದೆ.
ಫೆ.07ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?