ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಿದ ಕಾಗೋಡು ತಿಮ್ಮಪ್ಪ
Team Udayavani, Jul 7, 2019, 3:05 AM IST
ಶಿವಮೊಗ್ಗ: ರಕ್ತದೊತ್ತಡದಲ್ಲಿನ ಏರುಪೇರು ಹಾಗೂ ಉಸಿರಾಟದ ತೊಂದರೆಯಿಂದ ಗುರುವಾರ ರಾತ್ರಿ ಅಸ್ವಸ್ಥರಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆದರೆ ವಿಶ್ರಾಂತಿ ಮತ್ತು ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವುದರಿಂದ ಅವರನ್ನು ಶನಿವಾರ ಬೆಳಗ್ಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ.
ಮಗಳು ರಾಜನಂದಿನಿ ಅವರ ಜೊತೆಗೆ ಕಾಗೋಡು ತಿಮ್ಮಪ್ಪ ಅವರು ಬೆಂಗಳೂರಿಗೆ ತೆರಳಿದರು. ಗುರುವಾರ ರಾತ್ರಿ ಅಸ್ವಸ್ಥರಾಗಿದ್ದ ಕಾಗೋಡು ಅವರಿಗೆ ಸಾಗರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಶುಕ್ರವಾರ ಕಾಗೋಡು ಅವರನ್ನು ಐಸಿಯುನಿಂದ ವಾರ್ಡ್ಗೆ ವರ್ಗಾಯಿಸಲಾಗಿತ್ತು. ಶನಿವಾರ ಅವರ ಆರೋಗ್ಯದಲ್ಲಿ ಮತ್ತಷ್ಟು ಸುಧಾರಣೆಯಾಗಿದೆ.
ಜಿಪಂ ಸದಸ್ಯ ಕಲಗೋಡು ರತ್ನಾಕರ್ ಮತ್ತು ಕುಟುಂಬದವರ ನೆರವಿನೊಂದಿಗೆ, ಕಾಗೋಡು ತಿಮ್ಮಪ್ಪ ಅವರು ವಾರ್ಡ್ನಿಂದ ರಸ್ತೆವರೆಗೂ ನಡೆದು ಬಂದರು. ಹೊರಗೆ ಸಿಕ್ಕ ಪರಿಚಿತರು, ಮಾಧ್ಯಮದವರಿಗೆ “ಆರಾಮಿದ್ದಿರೇನೋ ಹುಡುಗ್ರಾ’ ಅಂತಾ ವಿಚಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ